ಬೀದಿ ಬದಿ ವ್ಯಾಪಾರಿಗಳಿಗೆ ಬಿಬಿಎಂಪಿ ಶಾಕ್: ಪಾಲಿಕೆ ವಿರುದ್ಧವೇ ಹೋರಾಟ

ಬೀದಿ ಬದಿ ವ್ಯಾಪಾರಿಗಳಿಗೆ ಬಿಬಿಎಂಪಿ ಶಾಕ್: ಪಾಲಿಕೆ ವಿರುದ್ಧವೇ ಹೋರಾಟ

Published : Nov 09, 2023, 11:22 AM ISTUpdated : Nov 09, 2023, 11:32 AM IST

ದೀಪಾವಳಿಗೆ ಭರ್ಜರಿ ವ್ಯಾಪಾರದ ನಿರೀಕ್ಷೆಯಲ್ಲಿದ್ದ ಬೀದಿಬದಿ ವ್ಯಾಪಾರಿಗಳಿಗೆ ಬಿಬಿಎಂಪಿ ಶಾಕ್ ಕೊಟ್ಟಿದೆ. ಬಿಬಿಎಂಪಿ ನಿರ್ಧಾರದ ವಿರುದ್ದ ಬೀದಿಬದಿ ವ್ಯಾಪಾರಿಗಳು ತೊಡೆತಟ್ಟಿದ್ದಾರೆ. 
 

ಒಂದು ಕಡೆ ಬೀದಿ ಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸುತ್ತಿರುವ ಬಿಬಿಎಂಪಿ. ಇನ್ನೊಂದು ಕಡೆ ಬಿಬಿಎಂಪಿ(BBMP) ಕಮಿಷನರ್ ವಿರುದ್ದ ರೊಚ್ಚಿಗೆದ್ದಿರುವ ಬೀದಿಬದಿ ವ್ಯಾಪಾರಿಗಳು. ಈ ದೃಶ್ಯ ಕಂಡು ಬಂದಿದ್ದು ಸಿಲಿಕಾನ್ ಸಿಟಿ ಬೆಂಗಳೂರಲ್ಲಿ(Bengaluru). ದೀಪಾವಳಿ ಹಬ್ಬಕ್ಕೆ ಭರ್ಜರಿ ವ್ಯಾಪಾರದ ಖುಷಿಯಲ್ಲಿದ್ದ ಬೀದಿ ಬದಿ ವ್ಯಾಪಾರಿಗಳಿಗೆ ಬಿಬಿಎಂಪಿ ಶಾಕ್ ಕೊಟ್ಟಿದೆ. ದೀಪಾವಳಿ ಹೊತ್ತಲ್ಲೇ ಅನಧಿಕೃತ ಬೀದಿ ಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸಲು ಹೊರಟಿದೆ. ಮಲ್ಲೇಶ್ವರಂ, ಜಯನಗರದಲ್ಲಿ ಈಗಾಗಲೇ ಬೀದಿಬದಿ ವ್ಯಾಪಾರಿಗಳನ್ನು(street vendors) ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದೆ. .ಚಿಕ್ಕಪೇಟೆ, ಗಾಂಧಿನಗರ, ಶಿವಾಜಿನಗರ, ಯಶವಂತಪುರ ಸೇರಿ ಇತರ ಕಡೆಗಳಲ್ಲೂ ಫುಟ್ಪಾತ್ ವ್ಯಾಪಾರಿಗಳಿಗೆ ನೋಟಿಸ್ ಕೊಡುತ್ತಿದೆ. ನಮಗೆ ಮೊದಲೇ ಹಿಂದಿಲ್ಲ, ಮುಂದಿಲ್ಲ. ಬೀದಿ ಬದಿ ವ್ಯಾಪಾರ ಮಾಡಿ ಜೀವನ ಮಾಡ್ಕೋತ್ತಿದ್ದೀವಿ. ದೀಪಾವಳಿ ಹಬ್ಬದ ವ್ಯಾಪಾರಕ್ಕೆ ಸಾವಿರಾರು ರೂಪಾಯಿ ಬಂಡವಾಳ ಹಾಕಿ ವಸ್ತುಗಳನ್ನ ತಂದಿದ್ದೇವೆ. ಇದಕ್ಕೂ ಅಡ್ಡಿ ಮಾಡಿದ್ರೆ ಹೇಗೆ ಎಂದು ವ್ಯಾಪಾರಿಗಳು ಕಣ್ಣೀರಿಡ್ತಿದ್ದಾರೆ. ಇನ್ನು ತೆರೆವು ಕಾರ್ಯಚರಣೆಗೆ ಇಳಿದ ಬಿಬಿಎಂಪಿ ವಿರುದ್ಧ ಬೀದಿಬದಿ ವ್ಯಾಪಾರಿಗಳು ಹೋರಾಟಕ್ಕೆ ಮುಂದಾಗಿದ್ದಾರೆ. ಜಯನಗರದಲ್ಲಿ ತೆರವು ಕಾರ್ಯಾಚರಣೆ ಖಂಡಿಸಿ ಇಂದು ಬೃಹತ್ ಪ್ರತಿಭಟನೆಯನ್ನೂ ಹಮ್ಮಿಕೊಂಡಿದೆ. ಕೇಂದ್ರದಿಂದ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಇದ್ದರೂ, ನಮ್ಮನ್ನು ಬೀದಿಯಲ್ಲಿ ನಿಲ್ಲಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  ಕಿಯೋನಿಕ್ಸ್‌ ಎಂಡಿ ಮೇಲಿದ್ಯಾ ಸರ್ಕಾರದ ಕೃಪಾ ಕಟಾಕ್ಷ? ರಜೆಯಲ್ಲಿದ್ರೂ ಗುತ್ತಿಗೆದಾರರ ಫೈಲ್‌ ತರಿಸಿಕೊಂಡಾ ಸಂಗಪ್ಪ ?

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more