ಉಪನಗರ ರೈಲು ಯೋಜನೆಗೆ ವೃಕ್ಷಗಳ ಮಾರಣಹೋಮ: 2000ಕ್ಕೂ ಹೆಚ್ಚಿನ ಮರಗಳನ್ನ ಕತ್ತರಿಸಲು K-RIDE ಪ್ರಸ್ತಾಪ

ಉಪನಗರ ರೈಲು ಯೋಜನೆಗೆ ವೃಕ್ಷಗಳ ಮಾರಣಹೋಮ: 2000ಕ್ಕೂ ಹೆಚ್ಚಿನ ಮರಗಳನ್ನ ಕತ್ತರಿಸಲು K-RIDE ಪ್ರಸ್ತಾಪ

Published : Oct 24, 2023, 11:43 AM IST

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎಲ್ಲಿ ಹೋದ್ರು ಟ್ರಾಫಿಕ್ ಕಿರಿಕಿರಿ. ಸಂಚಾರ ದಟ್ಟಣೆ ನಿವಾರಣೆಗೆ ಹೊಸ ಯೋಜನೆ ರೂಪಿಸಲಾಗ್ತಿದೆ. ಆದರೆ ಈ ಯೋಜನೆ ಜಾರಿಗೆ ಮರಗಳ ಮಾರಣಹೋಮ ನಡೆಸಲು ಮುಂದಾಗಿರುವುದು ಚರ್ಚೆಗೆ ಗ್ರಾಸವಾಗಿದೆ.  
 

ಬೆಂಗಳೂರಿನಲ್ಲಿ ಟ್ರಾಫಿಕ್ ಕಡಿಮೆ‌ ಮಾಡುವ ನಿಟ್ಟಿನಲ್ಲಿ ಮೆಟ್ರೋಗೆ ಪೂರಕವಾಗಿ ಉಪನಗರ ರೈಲು ಯೋಜನೆ ಜಾರಿಗೊಳಿಸಲಾಗ್ತಿದೆ. 2025ರ ಅಕ್ಟೋಬರ್ ಒಳಗೆ ಕಾಮಗಾರಿ ಮುಗಿಸಲು ಆದೇಶ ನೀಡಲಾಗಿದೆ. ಈ ರೈಲು ಕಾರಿಡಾರ್ 4ರ ಕಾಮಗಾರಿ ಮಾರ್ಗದಲ್ಲಿ 2,000ಕ್ಕೂ ಹೆಚ್ಚು ಮರಗಳಿದ್ದು, ಅವುಗಳನ್ನೆಲ್ಲ ಕಡಿಯಬೇಕೆಂದು ಕೆ-ರೈಡ್ ಪ್ರಸ್ತಾಪ ಮಾಡಿದೆ. ಎರಡು ವರ್ಷಗಳ ಹಿಂದೆ ಕೆ-ರೈಡ್ ನಡೆಸಿದ ಸಮೀಕ್ಷೆಯಲ್ಲಿ 2,364 ಮರಗಳು ರೈಲು ಯೋಜನೆ ಜೋಡಣೆಗೆ ಅಡ್ಡಿಯಾಗಿರುವುದನ್ನು ಗುರುತಿಸಿತ್ತು. ಹೀಗಾಗಿ ಈಗ ಬಿಬಿಎಂಪಿ ಸಾರ್ವಜನಿಕರ ಅಭಿಪ್ರಾಯ ಕೇಳಿದೆ. ಈ ಸಬ್ ಅರ್ಬನ್ ರೈಲು  ಯೋಜನೆಗೆ ನಿಗದಿತ ಸಂಖ್ಯೆಯ ಮರಗಳನ್ನು ಕಡಿಯುವ ಪ್ರಸ್ತಾವನೆಯನ್ನು ಬಿಬಿಎಂಪಿ ಮುಂದಿಡಲಾಗಿದೆ. ರೈಲ್ ಇನ್ಫ್ರಾಸ್ಟಕ್ಚರ್ ಡೆವ್ಹಲಪ್‌ಮೆಂಟ್ ಕಂಪನಿ ಈ ಬಗ್ಗೆ ಪ್ರಸ್ತಾಪಿಸಿದೆ. ಕಾರಿಡಾರ್ - 4ರ ಉದ್ದೇಶಿತ ರೈಲು ಜೋಡಣೆಯು ಬೆಳ್ಳಂದೂರು, ಮಾರತಹಳ್ಳಿ, ಚೆನ್ನಸಂದ್ರ, ಜಕ್ಕೂರು, ಹೆಣ್ಣೂರು ಸೇರಿದಂತೆ ಮುಂತಾದ ಪ್ರಮುಖ ಪ್ರದೇಶ ಒಳಗೊಂಡಿದೆ. ನೀಲಗಿರಿ, ಮಾವು, ಹಲಸು, ಬೇವಿನ ಮರ ಸೇರಿದಂತೆ ಹಲವು ಜಾತಿಯ ಮರಗಳಿಗೆ ಕೊಡಲಿ ಪೆಟ್ಟು ಬೀಳಲಿದೆ. ಇದಕ್ಕೆ ಪರಿಸರ ಪ್ರೇಮಿಗಳು ವಿರೋಧ ವ್ಯಕ್ತಪಡಿಸಿದ್ದು, ಅಂದಾಜಿನ ಮೇಲೆ ಮರಗಳನ್ನ ಗುರುತಿಸಿ ನಂಬರ್ ಹಾಕೋದಲ್ಲ. ಸರಿಯಾದ ರೀತಿಯಲ್ಲಿ ಸರ್ವೇ ಮಾಡಿ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  ಉಗ್ರರ ಕ್ರೌರ್ಯ ತೆರೆದಿಟ್ಟ ಅಜಿತ್ ಹನಮಕ್ಕನವರ್: ಮಕ್ಕಳನ್ನ ಬಿಡದೇ ಕೊಚ್ಚಿ ಕೊಚ್ಚಿ ಕೊಂದರು..!

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more