ಉಪನಗರ ರೈಲು ಯೋಜನೆಗೆ ವೃಕ್ಷಗಳ ಮಾರಣಹೋಮ: 2000ಕ್ಕೂ ಹೆಚ್ಚಿನ ಮರಗಳನ್ನ ಕತ್ತರಿಸಲು K-RIDE ಪ್ರಸ್ತಾಪ

ಉಪನಗರ ರೈಲು ಯೋಜನೆಗೆ ವೃಕ್ಷಗಳ ಮಾರಣಹೋಮ: 2000ಕ್ಕೂ ಹೆಚ್ಚಿನ ಮರಗಳನ್ನ ಕತ್ತರಿಸಲು K-RIDE ಪ್ರಸ್ತಾಪ

Published : Oct 24, 2023, 11:43 AM IST

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎಲ್ಲಿ ಹೋದ್ರು ಟ್ರಾಫಿಕ್ ಕಿರಿಕಿರಿ. ಸಂಚಾರ ದಟ್ಟಣೆ ನಿವಾರಣೆಗೆ ಹೊಸ ಯೋಜನೆ ರೂಪಿಸಲಾಗ್ತಿದೆ. ಆದರೆ ಈ ಯೋಜನೆ ಜಾರಿಗೆ ಮರಗಳ ಮಾರಣಹೋಮ ನಡೆಸಲು ಮುಂದಾಗಿರುವುದು ಚರ್ಚೆಗೆ ಗ್ರಾಸವಾಗಿದೆ.  
 

ಬೆಂಗಳೂರಿನಲ್ಲಿ ಟ್ರಾಫಿಕ್ ಕಡಿಮೆ‌ ಮಾಡುವ ನಿಟ್ಟಿನಲ್ಲಿ ಮೆಟ್ರೋಗೆ ಪೂರಕವಾಗಿ ಉಪನಗರ ರೈಲು ಯೋಜನೆ ಜಾರಿಗೊಳಿಸಲಾಗ್ತಿದೆ. 2025ರ ಅಕ್ಟೋಬರ್ ಒಳಗೆ ಕಾಮಗಾರಿ ಮುಗಿಸಲು ಆದೇಶ ನೀಡಲಾಗಿದೆ. ಈ ರೈಲು ಕಾರಿಡಾರ್ 4ರ ಕಾಮಗಾರಿ ಮಾರ್ಗದಲ್ಲಿ 2,000ಕ್ಕೂ ಹೆಚ್ಚು ಮರಗಳಿದ್ದು, ಅವುಗಳನ್ನೆಲ್ಲ ಕಡಿಯಬೇಕೆಂದು ಕೆ-ರೈಡ್ ಪ್ರಸ್ತಾಪ ಮಾಡಿದೆ. ಎರಡು ವರ್ಷಗಳ ಹಿಂದೆ ಕೆ-ರೈಡ್ ನಡೆಸಿದ ಸಮೀಕ್ಷೆಯಲ್ಲಿ 2,364 ಮರಗಳು ರೈಲು ಯೋಜನೆ ಜೋಡಣೆಗೆ ಅಡ್ಡಿಯಾಗಿರುವುದನ್ನು ಗುರುತಿಸಿತ್ತು. ಹೀಗಾಗಿ ಈಗ ಬಿಬಿಎಂಪಿ ಸಾರ್ವಜನಿಕರ ಅಭಿಪ್ರಾಯ ಕೇಳಿದೆ. ಈ ಸಬ್ ಅರ್ಬನ್ ರೈಲು  ಯೋಜನೆಗೆ ನಿಗದಿತ ಸಂಖ್ಯೆಯ ಮರಗಳನ್ನು ಕಡಿಯುವ ಪ್ರಸ್ತಾವನೆಯನ್ನು ಬಿಬಿಎಂಪಿ ಮುಂದಿಡಲಾಗಿದೆ. ರೈಲ್ ಇನ್ಫ್ರಾಸ್ಟಕ್ಚರ್ ಡೆವ್ಹಲಪ್‌ಮೆಂಟ್ ಕಂಪನಿ ಈ ಬಗ್ಗೆ ಪ್ರಸ್ತಾಪಿಸಿದೆ. ಕಾರಿಡಾರ್ - 4ರ ಉದ್ದೇಶಿತ ರೈಲು ಜೋಡಣೆಯು ಬೆಳ್ಳಂದೂರು, ಮಾರತಹಳ್ಳಿ, ಚೆನ್ನಸಂದ್ರ, ಜಕ್ಕೂರು, ಹೆಣ್ಣೂರು ಸೇರಿದಂತೆ ಮುಂತಾದ ಪ್ರಮುಖ ಪ್ರದೇಶ ಒಳಗೊಂಡಿದೆ. ನೀಲಗಿರಿ, ಮಾವು, ಹಲಸು, ಬೇವಿನ ಮರ ಸೇರಿದಂತೆ ಹಲವು ಜಾತಿಯ ಮರಗಳಿಗೆ ಕೊಡಲಿ ಪೆಟ್ಟು ಬೀಳಲಿದೆ. ಇದಕ್ಕೆ ಪರಿಸರ ಪ್ರೇಮಿಗಳು ವಿರೋಧ ವ್ಯಕ್ತಪಡಿಸಿದ್ದು, ಅಂದಾಜಿನ ಮೇಲೆ ಮರಗಳನ್ನ ಗುರುತಿಸಿ ನಂಬರ್ ಹಾಕೋದಲ್ಲ. ಸರಿಯಾದ ರೀತಿಯಲ್ಲಿ ಸರ್ವೇ ಮಾಡಿ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  ಉಗ್ರರ ಕ್ರೌರ್ಯ ತೆರೆದಿಟ್ಟ ಅಜಿತ್ ಹನಮಕ್ಕನವರ್: ಮಕ್ಕಳನ್ನ ಬಿಡದೇ ಕೊಚ್ಚಿ ಕೊಚ್ಚಿ ಕೊಂದರು..!

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
Read more