ಉಪನಗರ ರೈಲು ಯೋಜನೆಗೆ ವೃಕ್ಷಗಳ ಮಾರಣಹೋಮ: 2000ಕ್ಕೂ ಹೆಚ್ಚಿನ ಮರಗಳನ್ನ ಕತ್ತರಿಸಲು K-RIDE ಪ್ರಸ್ತಾಪ

ಉಪನಗರ ರೈಲು ಯೋಜನೆಗೆ ವೃಕ್ಷಗಳ ಮಾರಣಹೋಮ: 2000ಕ್ಕೂ ಹೆಚ್ಚಿನ ಮರಗಳನ್ನ ಕತ್ತರಿಸಲು K-RIDE ಪ್ರಸ್ತಾಪ

Published : Oct 24, 2023, 11:43 AM IST

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎಲ್ಲಿ ಹೋದ್ರು ಟ್ರಾಫಿಕ್ ಕಿರಿಕಿರಿ. ಸಂಚಾರ ದಟ್ಟಣೆ ನಿವಾರಣೆಗೆ ಹೊಸ ಯೋಜನೆ ರೂಪಿಸಲಾಗ್ತಿದೆ. ಆದರೆ ಈ ಯೋಜನೆ ಜಾರಿಗೆ ಮರಗಳ ಮಾರಣಹೋಮ ನಡೆಸಲು ಮುಂದಾಗಿರುವುದು ಚರ್ಚೆಗೆ ಗ್ರಾಸವಾಗಿದೆ.  
 

ಬೆಂಗಳೂರಿನಲ್ಲಿ ಟ್ರಾಫಿಕ್ ಕಡಿಮೆ‌ ಮಾಡುವ ನಿಟ್ಟಿನಲ್ಲಿ ಮೆಟ್ರೋಗೆ ಪೂರಕವಾಗಿ ಉಪನಗರ ರೈಲು ಯೋಜನೆ ಜಾರಿಗೊಳಿಸಲಾಗ್ತಿದೆ. 2025ರ ಅಕ್ಟೋಬರ್ ಒಳಗೆ ಕಾಮಗಾರಿ ಮುಗಿಸಲು ಆದೇಶ ನೀಡಲಾಗಿದೆ. ಈ ರೈಲು ಕಾರಿಡಾರ್ 4ರ ಕಾಮಗಾರಿ ಮಾರ್ಗದಲ್ಲಿ 2,000ಕ್ಕೂ ಹೆಚ್ಚು ಮರಗಳಿದ್ದು, ಅವುಗಳನ್ನೆಲ್ಲ ಕಡಿಯಬೇಕೆಂದು ಕೆ-ರೈಡ್ ಪ್ರಸ್ತಾಪ ಮಾಡಿದೆ. ಎರಡು ವರ್ಷಗಳ ಹಿಂದೆ ಕೆ-ರೈಡ್ ನಡೆಸಿದ ಸಮೀಕ್ಷೆಯಲ್ಲಿ 2,364 ಮರಗಳು ರೈಲು ಯೋಜನೆ ಜೋಡಣೆಗೆ ಅಡ್ಡಿಯಾಗಿರುವುದನ್ನು ಗುರುತಿಸಿತ್ತು. ಹೀಗಾಗಿ ಈಗ ಬಿಬಿಎಂಪಿ ಸಾರ್ವಜನಿಕರ ಅಭಿಪ್ರಾಯ ಕೇಳಿದೆ. ಈ ಸಬ್ ಅರ್ಬನ್ ರೈಲು  ಯೋಜನೆಗೆ ನಿಗದಿತ ಸಂಖ್ಯೆಯ ಮರಗಳನ್ನು ಕಡಿಯುವ ಪ್ರಸ್ತಾವನೆಯನ್ನು ಬಿಬಿಎಂಪಿ ಮುಂದಿಡಲಾಗಿದೆ. ರೈಲ್ ಇನ್ಫ್ರಾಸ್ಟಕ್ಚರ್ ಡೆವ್ಹಲಪ್‌ಮೆಂಟ್ ಕಂಪನಿ ಈ ಬಗ್ಗೆ ಪ್ರಸ್ತಾಪಿಸಿದೆ. ಕಾರಿಡಾರ್ - 4ರ ಉದ್ದೇಶಿತ ರೈಲು ಜೋಡಣೆಯು ಬೆಳ್ಳಂದೂರು, ಮಾರತಹಳ್ಳಿ, ಚೆನ್ನಸಂದ್ರ, ಜಕ್ಕೂರು, ಹೆಣ್ಣೂರು ಸೇರಿದಂತೆ ಮುಂತಾದ ಪ್ರಮುಖ ಪ್ರದೇಶ ಒಳಗೊಂಡಿದೆ. ನೀಲಗಿರಿ, ಮಾವು, ಹಲಸು, ಬೇವಿನ ಮರ ಸೇರಿದಂತೆ ಹಲವು ಜಾತಿಯ ಮರಗಳಿಗೆ ಕೊಡಲಿ ಪೆಟ್ಟು ಬೀಳಲಿದೆ. ಇದಕ್ಕೆ ಪರಿಸರ ಪ್ರೇಮಿಗಳು ವಿರೋಧ ವ್ಯಕ್ತಪಡಿಸಿದ್ದು, ಅಂದಾಜಿನ ಮೇಲೆ ಮರಗಳನ್ನ ಗುರುತಿಸಿ ನಂಬರ್ ಹಾಕೋದಲ್ಲ. ಸರಿಯಾದ ರೀತಿಯಲ್ಲಿ ಸರ್ವೇ ಮಾಡಿ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  ಉಗ್ರರ ಕ್ರೌರ್ಯ ತೆರೆದಿಟ್ಟ ಅಜಿತ್ ಹನಮಕ್ಕನವರ್: ಮಕ್ಕಳನ್ನ ಬಿಡದೇ ಕೊಚ್ಚಿ ಕೊಚ್ಚಿ ಕೊಂದರು..!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more