Suvarna cover story:ರಾಗಿ ಬೆಳೆದ ರೈತರ ಕಷ್ಟ ಯಾರಿಗೂ ಬೇಡ..!

Suvarna cover story:ರಾಗಿ ಬೆಳೆದ ರೈತರ ಕಷ್ಟ ಯಾರಿಗೂ ಬೇಡ..!

Published : Apr 08, 2023, 07:45 PM ISTUpdated : Apr 08, 2023, 07:46 PM IST

ರಾಗಿ ಬೆಳೆಗೆ ಸರ್ಕಾರ ಘೋಷಣೆ ಮಾಡಿದ ಬೆಂಬಲ ಬೆಲೆ ಪಡೆಯಲು ರೈತರು ಪಡುವ ಕಷ್ಟವನ್ನು ಹಾಗೂ ಲಂಚಾವತಾರವನ್ನು  ಹೊಸದುರ್ಗದ ಎಪಿಎಂಸಿಯಲ್ಲಿ ನೀವೇ ಕಣ್ಣಾರೆ ನೋಡಿ. 

ಹೊಸದುರ್ಗ : ರಾಗಿ ಬೆಳೆಗೆ ಸರ್ಕಾರ ಬಂಬಲ ಬೆಲೆಯನ್ನೇನೋ ಘೋಷಣೆ ಮಾಡಿದೆ. ಆದರೆ, ಅದನ್ನು ಪಡೆಯಲು ರೈತರು ಭಾರಿ ಕಷ್ಟಪಡುತ್ತಿದ್ದಾರೆ. ಹೊಸದುರ್ಗದ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ)ಯಲ್ಲಿ ನಡೆಯುವ ಕರ್ಮಕಾಂಡ ಮತ್ತು ಲಂಚಾವತಾರವನ್ನು ನೀವೇ ಕಣ್ಣಾರೆ ನೋಡಿ. 

ಹಮಾಲಿಗಳಿಗೆ 4 ಸಾವಿರ, ಅಧಿಕಾರಿಗಳಿಗೆ 1,500 ಹಾಗೂ ಟ್ರ್ಯಾಕ್ಟರ್‌ಗೆ 8 ಸಾವಿರ ರೂ. ಕೊಡಬೇಕು. ಎಲ್ಲವನ್ನೂ ಕೊಟ್ಟರೆ ಮಾತ್ರ ರಾಗಿ ಮಾರಾಟ ಮಾಡಲು ಸಾಧ್ಯವಾಗುತ್ತದೆ. ಇಲ್ಲವಾದರೆ ದಲ್ಲಿ ರಾಗಿ ಮಾರಾಟ ಮಾಡೋಕೆ ಆಗುವುದಿಲ್ಲ. ರೈತರು ತಂದ ರಾಗಿಯನ್ನು ಗ್ರೇಡ್‌ ಮಾಡಿ ಚೀಟಿ ಬರೆದುಕೊಡಬೇಕು. ಆದರೆ, ಅಲ್ಲಿ ನಡೆಯೋದೇ ಬೇರೆ. ಗ್ರೇಡ್‌ ಮಾಡುವ ಮೊದಲೆ ರಾಗಿಯ ಗ್ರೇಡ್‌ ಚೀಟಿ ಕೊಡುವ ಮುಂಚೆ ಅವರಿಗೆ ಹಣವನ್ನು ಕೊಡಬೇಕು. ಹಣ ಕೊಟ್ಟರೆ ಮಾತ್ರ ರೈತರಿಗೆ ಗ್ರೇಡ್‌ ಚೀಟಿ ಕೊಡಲಾಗುತ್ತದೆ.

ಇಲ್ಲವಾದರೆ ಗ್ರೇಡ್‌ ಚೀಟಿ ಕೊಡದೇ ಜರಡಿ ಹಾಕಿ, ಧೂಳು ಇದೆ ಗಾಳಿಗೆ ತೂರಿಕೊಂಡು ಬನ್ನಿ ಎಂದು ಕ್ಯಾತೆ ತೆಗೆಯುತ್ತಾರೆ. ಆಗ ಸಾವಿರಾರು ರೂಪಾಯಿ ಟ್ರ್ಯಾಕ್ಟರ್‌ ಬಾಡಿಗೆ ಕೊಟ್ಟು ರಾಗಿಯನ್ನು ಮಾರುಕಟ್ಟೆಗೆ ತಂದ ರೈತರು ವಾಪಸ್‌ ತೆಗೆದುಕೊಂಡು ಹೋಗಲಾಗದೇ ಗ್ರೇಡ್‌ ಕೊಡುವ ವ್ಯಕ್ತಿಗೆ ಹಣವನ್ನು ಕೊಡುತ್ತಾರೆ. ಇದನ್ನೇ ಬಂಡವಾಳ ಮಾಡಿಕೊಳ್ಳುವ ವ್ಯಕ್ತಿಗಳು ಪ್ರತಿನಿತ್ಯ ಸಾವಿರಾರು ರೈತರಿಂದ ಲಕ್ಷಾಂತರ ರೂ. ಲೂಟಿ ಮಾಡುತ್ತಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more