Suvarna cover story:ರಾಗಿ ಬೆಳೆದ ರೈತರ ಕಷ್ಟ ಯಾರಿಗೂ ಬೇಡ..!

Suvarna cover story:ರಾಗಿ ಬೆಳೆದ ರೈತರ ಕಷ್ಟ ಯಾರಿಗೂ ಬೇಡ..!

Published : Apr 08, 2023, 07:45 PM ISTUpdated : Apr 08, 2023, 07:46 PM IST

ರಾಗಿ ಬೆಳೆಗೆ ಸರ್ಕಾರ ಘೋಷಣೆ ಮಾಡಿದ ಬೆಂಬಲ ಬೆಲೆ ಪಡೆಯಲು ರೈತರು ಪಡುವ ಕಷ್ಟವನ್ನು ಹಾಗೂ ಲಂಚಾವತಾರವನ್ನು  ಹೊಸದುರ್ಗದ ಎಪಿಎಂಸಿಯಲ್ಲಿ ನೀವೇ ಕಣ್ಣಾರೆ ನೋಡಿ. 

ಹೊಸದುರ್ಗ : ರಾಗಿ ಬೆಳೆಗೆ ಸರ್ಕಾರ ಬಂಬಲ ಬೆಲೆಯನ್ನೇನೋ ಘೋಷಣೆ ಮಾಡಿದೆ. ಆದರೆ, ಅದನ್ನು ಪಡೆಯಲು ರೈತರು ಭಾರಿ ಕಷ್ಟಪಡುತ್ತಿದ್ದಾರೆ. ಹೊಸದುರ್ಗದ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ)ಯಲ್ಲಿ ನಡೆಯುವ ಕರ್ಮಕಾಂಡ ಮತ್ತು ಲಂಚಾವತಾರವನ್ನು ನೀವೇ ಕಣ್ಣಾರೆ ನೋಡಿ. 

ಹಮಾಲಿಗಳಿಗೆ 4 ಸಾವಿರ, ಅಧಿಕಾರಿಗಳಿಗೆ 1,500 ಹಾಗೂ ಟ್ರ್ಯಾಕ್ಟರ್‌ಗೆ 8 ಸಾವಿರ ರೂ. ಕೊಡಬೇಕು. ಎಲ್ಲವನ್ನೂ ಕೊಟ್ಟರೆ ಮಾತ್ರ ರಾಗಿ ಮಾರಾಟ ಮಾಡಲು ಸಾಧ್ಯವಾಗುತ್ತದೆ. ಇಲ್ಲವಾದರೆ ದಲ್ಲಿ ರಾಗಿ ಮಾರಾಟ ಮಾಡೋಕೆ ಆಗುವುದಿಲ್ಲ. ರೈತರು ತಂದ ರಾಗಿಯನ್ನು ಗ್ರೇಡ್‌ ಮಾಡಿ ಚೀಟಿ ಬರೆದುಕೊಡಬೇಕು. ಆದರೆ, ಅಲ್ಲಿ ನಡೆಯೋದೇ ಬೇರೆ. ಗ್ರೇಡ್‌ ಮಾಡುವ ಮೊದಲೆ ರಾಗಿಯ ಗ್ರೇಡ್‌ ಚೀಟಿ ಕೊಡುವ ಮುಂಚೆ ಅವರಿಗೆ ಹಣವನ್ನು ಕೊಡಬೇಕು. ಹಣ ಕೊಟ್ಟರೆ ಮಾತ್ರ ರೈತರಿಗೆ ಗ್ರೇಡ್‌ ಚೀಟಿ ಕೊಡಲಾಗುತ್ತದೆ.

ಇಲ್ಲವಾದರೆ ಗ್ರೇಡ್‌ ಚೀಟಿ ಕೊಡದೇ ಜರಡಿ ಹಾಕಿ, ಧೂಳು ಇದೆ ಗಾಳಿಗೆ ತೂರಿಕೊಂಡು ಬನ್ನಿ ಎಂದು ಕ್ಯಾತೆ ತೆಗೆಯುತ್ತಾರೆ. ಆಗ ಸಾವಿರಾರು ರೂಪಾಯಿ ಟ್ರ್ಯಾಕ್ಟರ್‌ ಬಾಡಿಗೆ ಕೊಟ್ಟು ರಾಗಿಯನ್ನು ಮಾರುಕಟ್ಟೆಗೆ ತಂದ ರೈತರು ವಾಪಸ್‌ ತೆಗೆದುಕೊಂಡು ಹೋಗಲಾಗದೇ ಗ್ರೇಡ್‌ ಕೊಡುವ ವ್ಯಕ್ತಿಗೆ ಹಣವನ್ನು ಕೊಡುತ್ತಾರೆ. ಇದನ್ನೇ ಬಂಡವಾಳ ಮಾಡಿಕೊಳ್ಳುವ ವ್ಯಕ್ತಿಗಳು ಪ್ರತಿನಿತ್ಯ ಸಾವಿರಾರು ರೈತರಿಂದ ಲಕ್ಷಾಂತರ ರೂ. ಲೂಟಿ ಮಾಡುತ್ತಾರೆ.

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more