Suvarna cover story:ರಾಗಿ ಬೆಳೆದ ರೈತರ ಕಷ್ಟ ಯಾರಿಗೂ ಬೇಡ..!

Suvarna cover story:ರಾಗಿ ಬೆಳೆದ ರೈತರ ಕಷ್ಟ ಯಾರಿಗೂ ಬೇಡ..!

Published : Apr 08, 2023, 07:45 PM ISTUpdated : Apr 08, 2023, 07:46 PM IST

ರಾಗಿ ಬೆಳೆಗೆ ಸರ್ಕಾರ ಘೋಷಣೆ ಮಾಡಿದ ಬೆಂಬಲ ಬೆಲೆ ಪಡೆಯಲು ರೈತರು ಪಡುವ ಕಷ್ಟವನ್ನು ಹಾಗೂ ಲಂಚಾವತಾರವನ್ನು  ಹೊಸದುರ್ಗದ ಎಪಿಎಂಸಿಯಲ್ಲಿ ನೀವೇ ಕಣ್ಣಾರೆ ನೋಡಿ. 

ಹೊಸದುರ್ಗ : ರಾಗಿ ಬೆಳೆಗೆ ಸರ್ಕಾರ ಬಂಬಲ ಬೆಲೆಯನ್ನೇನೋ ಘೋಷಣೆ ಮಾಡಿದೆ. ಆದರೆ, ಅದನ್ನು ಪಡೆಯಲು ರೈತರು ಭಾರಿ ಕಷ್ಟಪಡುತ್ತಿದ್ದಾರೆ. ಹೊಸದುರ್ಗದ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ)ಯಲ್ಲಿ ನಡೆಯುವ ಕರ್ಮಕಾಂಡ ಮತ್ತು ಲಂಚಾವತಾರವನ್ನು ನೀವೇ ಕಣ್ಣಾರೆ ನೋಡಿ. 

ಹಮಾಲಿಗಳಿಗೆ 4 ಸಾವಿರ, ಅಧಿಕಾರಿಗಳಿಗೆ 1,500 ಹಾಗೂ ಟ್ರ್ಯಾಕ್ಟರ್‌ಗೆ 8 ಸಾವಿರ ರೂ. ಕೊಡಬೇಕು. ಎಲ್ಲವನ್ನೂ ಕೊಟ್ಟರೆ ಮಾತ್ರ ರಾಗಿ ಮಾರಾಟ ಮಾಡಲು ಸಾಧ್ಯವಾಗುತ್ತದೆ. ಇಲ್ಲವಾದರೆ ದಲ್ಲಿ ರಾಗಿ ಮಾರಾಟ ಮಾಡೋಕೆ ಆಗುವುದಿಲ್ಲ. ರೈತರು ತಂದ ರಾಗಿಯನ್ನು ಗ್ರೇಡ್‌ ಮಾಡಿ ಚೀಟಿ ಬರೆದುಕೊಡಬೇಕು. ಆದರೆ, ಅಲ್ಲಿ ನಡೆಯೋದೇ ಬೇರೆ. ಗ್ರೇಡ್‌ ಮಾಡುವ ಮೊದಲೆ ರಾಗಿಯ ಗ್ರೇಡ್‌ ಚೀಟಿ ಕೊಡುವ ಮುಂಚೆ ಅವರಿಗೆ ಹಣವನ್ನು ಕೊಡಬೇಕು. ಹಣ ಕೊಟ್ಟರೆ ಮಾತ್ರ ರೈತರಿಗೆ ಗ್ರೇಡ್‌ ಚೀಟಿ ಕೊಡಲಾಗುತ್ತದೆ.

ಇಲ್ಲವಾದರೆ ಗ್ರೇಡ್‌ ಚೀಟಿ ಕೊಡದೇ ಜರಡಿ ಹಾಕಿ, ಧೂಳು ಇದೆ ಗಾಳಿಗೆ ತೂರಿಕೊಂಡು ಬನ್ನಿ ಎಂದು ಕ್ಯಾತೆ ತೆಗೆಯುತ್ತಾರೆ. ಆಗ ಸಾವಿರಾರು ರೂಪಾಯಿ ಟ್ರ್ಯಾಕ್ಟರ್‌ ಬಾಡಿಗೆ ಕೊಟ್ಟು ರಾಗಿಯನ್ನು ಮಾರುಕಟ್ಟೆಗೆ ತಂದ ರೈತರು ವಾಪಸ್‌ ತೆಗೆದುಕೊಂಡು ಹೋಗಲಾಗದೇ ಗ್ರೇಡ್‌ ಕೊಡುವ ವ್ಯಕ್ತಿಗೆ ಹಣವನ್ನು ಕೊಡುತ್ತಾರೆ. ಇದನ್ನೇ ಬಂಡವಾಳ ಮಾಡಿಕೊಳ್ಳುವ ವ್ಯಕ್ತಿಗಳು ಪ್ರತಿನಿತ್ಯ ಸಾವಿರಾರು ರೈತರಿಂದ ಲಕ್ಷಾಂತರ ರೂ. ಲೂಟಿ ಮಾಡುತ್ತಾರೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more