Suvarna cover story:ರಾಗಿ ಬೆಳೆದ ರೈತರ ಕಷ್ಟ ಯಾರಿಗೂ ಬೇಡ..!

Suvarna cover story:ರಾಗಿ ಬೆಳೆದ ರೈತರ ಕಷ್ಟ ಯಾರಿಗೂ ಬೇಡ..!

Published : Apr 08, 2023, 07:45 PM ISTUpdated : Apr 08, 2023, 07:46 PM IST

ರಾಗಿ ಬೆಳೆಗೆ ಸರ್ಕಾರ ಘೋಷಣೆ ಮಾಡಿದ ಬೆಂಬಲ ಬೆಲೆ ಪಡೆಯಲು ರೈತರು ಪಡುವ ಕಷ್ಟವನ್ನು ಹಾಗೂ ಲಂಚಾವತಾರವನ್ನು  ಹೊಸದುರ್ಗದ ಎಪಿಎಂಸಿಯಲ್ಲಿ ನೀವೇ ಕಣ್ಣಾರೆ ನೋಡಿ. 

ಹೊಸದುರ್ಗ : ರಾಗಿ ಬೆಳೆಗೆ ಸರ್ಕಾರ ಬಂಬಲ ಬೆಲೆಯನ್ನೇನೋ ಘೋಷಣೆ ಮಾಡಿದೆ. ಆದರೆ, ಅದನ್ನು ಪಡೆಯಲು ರೈತರು ಭಾರಿ ಕಷ್ಟಪಡುತ್ತಿದ್ದಾರೆ. ಹೊಸದುರ್ಗದ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ)ಯಲ್ಲಿ ನಡೆಯುವ ಕರ್ಮಕಾಂಡ ಮತ್ತು ಲಂಚಾವತಾರವನ್ನು ನೀವೇ ಕಣ್ಣಾರೆ ನೋಡಿ. 

ಹಮಾಲಿಗಳಿಗೆ 4 ಸಾವಿರ, ಅಧಿಕಾರಿಗಳಿಗೆ 1,500 ಹಾಗೂ ಟ್ರ್ಯಾಕ್ಟರ್‌ಗೆ 8 ಸಾವಿರ ರೂ. ಕೊಡಬೇಕು. ಎಲ್ಲವನ್ನೂ ಕೊಟ್ಟರೆ ಮಾತ್ರ ರಾಗಿ ಮಾರಾಟ ಮಾಡಲು ಸಾಧ್ಯವಾಗುತ್ತದೆ. ಇಲ್ಲವಾದರೆ ದಲ್ಲಿ ರಾಗಿ ಮಾರಾಟ ಮಾಡೋಕೆ ಆಗುವುದಿಲ್ಲ. ರೈತರು ತಂದ ರಾಗಿಯನ್ನು ಗ್ರೇಡ್‌ ಮಾಡಿ ಚೀಟಿ ಬರೆದುಕೊಡಬೇಕು. ಆದರೆ, ಅಲ್ಲಿ ನಡೆಯೋದೇ ಬೇರೆ. ಗ್ರೇಡ್‌ ಮಾಡುವ ಮೊದಲೆ ರಾಗಿಯ ಗ್ರೇಡ್‌ ಚೀಟಿ ಕೊಡುವ ಮುಂಚೆ ಅವರಿಗೆ ಹಣವನ್ನು ಕೊಡಬೇಕು. ಹಣ ಕೊಟ್ಟರೆ ಮಾತ್ರ ರೈತರಿಗೆ ಗ್ರೇಡ್‌ ಚೀಟಿ ಕೊಡಲಾಗುತ್ತದೆ.

ಇಲ್ಲವಾದರೆ ಗ್ರೇಡ್‌ ಚೀಟಿ ಕೊಡದೇ ಜರಡಿ ಹಾಕಿ, ಧೂಳು ಇದೆ ಗಾಳಿಗೆ ತೂರಿಕೊಂಡು ಬನ್ನಿ ಎಂದು ಕ್ಯಾತೆ ತೆಗೆಯುತ್ತಾರೆ. ಆಗ ಸಾವಿರಾರು ರೂಪಾಯಿ ಟ್ರ್ಯಾಕ್ಟರ್‌ ಬಾಡಿಗೆ ಕೊಟ್ಟು ರಾಗಿಯನ್ನು ಮಾರುಕಟ್ಟೆಗೆ ತಂದ ರೈತರು ವಾಪಸ್‌ ತೆಗೆದುಕೊಂಡು ಹೋಗಲಾಗದೇ ಗ್ರೇಡ್‌ ಕೊಡುವ ವ್ಯಕ್ತಿಗೆ ಹಣವನ್ನು ಕೊಡುತ್ತಾರೆ. ಇದನ್ನೇ ಬಂಡವಾಳ ಮಾಡಿಕೊಳ್ಳುವ ವ್ಯಕ್ತಿಗಳು ಪ್ರತಿನಿತ್ಯ ಸಾವಿರಾರು ರೈತರಿಂದ ಲಕ್ಷಾಂತರ ರೂ. ಲೂಟಿ ಮಾಡುತ್ತಾರೆ.

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!