ಮಂಗಳೂರು ದಸರಾದಲ್ಲಿ ದೈವಗಳ ಸ್ತಬ್ಧಚಿತ್ರಕ್ಕೆ ಬ್ರೇಕ್: ಡಿಜೆಗೆ ನಿಷೇಧ.. ಭಜನಾ ತಂಡಗಳಿಗೆ ಅವಕಾಶ

ಮಂಗಳೂರು ದಸರಾದಲ್ಲಿ ದೈವಗಳ ಸ್ತಬ್ಧಚಿತ್ರಕ್ಕೆ ಬ್ರೇಕ್: ಡಿಜೆಗೆ ನಿಷೇಧ.. ಭಜನಾ ತಂಡಗಳಿಗೆ ಅವಕಾಶ

Published : Oct 14, 2023, 10:41 AM IST

Dasara procession ಅ.25ರಂದು ನಡೆಯಲಿದ್ದು, ತುಳುನಾಡಿನ daiva  ಟ್ಯಾಬ್ಲೊ, tableauಕ್ಕೆ ಅವಕಾಶವಿಲ್ಲ ಎಂದು ಶ್ರೀಕ್ಷೇತ್ರ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಆಡಳಿತ ಮಂಡಳಿ ನಿರ್ಧಾರ ತೆಗೆದುಕೊಂಡಿದೆ.
 

ಕಾಂತಾರ ಭಾರತೀಯ ಚಿತ್ರರಂಗದಲ್ಲಿ ದಾಖಲೆ ಬರೆದ ಸಿನಿಮಾ. ಕರಾವಳಿಯ ದೈವಗಳ ಕಾರ್ಣಿಕವನ್ನ ಜಗದಗಲ ಪಸರಿಸಿದ ದಕ್ಷಿಣ ಭಾರತದ ಬ್ಲಾಕ್ ಬಸ್ಟರ್ ಸಿನಿಮಾ. ಸಿನಿಮಾದ ಆಚೆಗೂ ತುಳುನಾಡಿನ ಸಂಸ್ಕೃತಿ, ಸಂಸ್ಕಾರ, ನಂಬಿಕೆ, ಆಚರಣೆ ಜೊತೆಗೆ ದೈವಾರಧನೆಯ ಕಟ್ಟುಕಟ್ಟಲೆಗಳತ್ತ ಇಡೀ ಜಗತ್ತೇ ನಿಬ್ಬೆರಗಾಗಿ ನೋಡುವಂತೆ ಮಾಡಿದೆ. ಆದರೆ ಇದೇ ಸಿನಿಮಾದ ಕಾರಣದಿಂದ ದೈವಗಳ(daiva) ಅವಹೇಳನವೂ ಹೆಚ್ಚಾಗಿದೆ. ನಂಬಿಕೆಯ ದೈವಗಳನ್ನ ಬೀದಿಗೆ ತಂದು ಕುಣಿದು ಕುಪ್ಪಳಿಸಲಾಗ್ತಿದೆ. ಸ್ತಬ್ಧ ಚಿತ್ರಗಳ ಹೆಸರಿನಲ್ಲಿ ದೈವಗಳ ಅವಹೇಳನ ನಡೀತಾ ಇದೆ. ಹೀಗಾಗಿಯೇ ಈ ಬಾರಿಯ ಪ್ರಖ್ಯಾತ ಮಂಗಳೂರು(Mangalore) ದಸರಾದಲ್ಲಿ ದೈವಗಳ ಸ್ತಬ್ಧ ಚಿತ್ರಗಳಿಗೆ ಬ್ರೇಕ್ ಹಾಕಲಾಗಿದೆ. ವಿಶ್ವವಿಖ್ಯಾತ ಮಂಗಳೂರು ದಸರಾಕ್ಕೆ(Dasara procession) ಕುದ್ರೋಳಿ ಶ್ರೀಕ್ಷೇತ್ರ ಸಜ್ಜಾಗುತ್ತಿದೆ. ಈ ಬಾರಿಯ ದಸರಾ ಮೆರವಣಿಗೆ ಅ.25ರಂದು ನಡೆಯಲಿದ್ದು, ತುಳುನಾಡಿನ ದೈವಗಳ ಟ್ಯಾಬ್ಲೊ, ಸ್ತಬ್ಧಚಿತ್ರಕ್ಕೆ ಅವಕಾಶವಿಲ್ಲ ಎಂದು ಶ್ರೀಕ್ಷೇತ್ರ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಆಡಳಿತ ಮಂಡಳಿ ನಿರ್ಧಾರ ತೆಗೆದುಕೊಂಡಿದೆ. ತುಳುನಾಡಿನಲ್ಲಿ ದೈವಗಳ ಬಗ್ಗೆ ಅಪಾರ ನಂಬಿಕೆಯಿದೆ. ಭಕ್ತರ ಈ ನಂಬಿಕೆಗೆ ಘಾಸಿಯಾಗುವಂತಹ ಕಾರ್ಯ ಆಗಬಾರದೆಂದು ದೈವಗಳನ್ನು ಅವಹೇಳನ ಮಾಡುವಂತಹ ಟ್ಯಾಬ್ಲೊಗಳಿಗೆ ಅವಕಾಶ ನೀಡುತ್ತಿಲ್ಲ. ಅಷ್ಟೇ ಅಲ್ಲ ಯಾವುದೇ ಜಾತಿ, ಧರ್ಮ, ಮತದವರಿಗೆ ನಿಂದನೆ, ಅವಮಾನ ಮಾಡುವಂತಹ ಟ್ಯಾಬ್ಲೋಗಳಿಗೂ ಅವಕಾಶವಿಲ್ಲ ಎಂದು ಸೂಚನೆ ನೀಡಲಾಗಿದೆ.ಈ ಬಾರಿ ಅಕ್ಟೋಬರ್ 15ರಂದು ರಾತ್ರಿ 8ಗಂಟೆಗೆ ಶ್ರಿಕ್ಷೇತ್ರದಿಂದ ಮಂಗಳೂರು ದಸರಾ ಮ್ಯಾರಥಾನ್ ನಡೆಯಲಿದೆ. ಜ್ಯೂಯೀಸ್ ಫಿಟ್ ನೆಸ್ ಕ್ಲಬ್ ಹಾಗೂ ಶ್ರೀಕ್ಷೇತ್ರ ಜೊತೆಯಾಗಿ ಈ ಮ್ಯಾರಥಾನ್ ನಡೆಸಲಿವೆ.

ಇದನ್ನೂ ವೀಕ್ಷಿಸಿ:  ದೀಪಕ್ ಅರಸ್ ನಿರ್ದೇಶನದ ಶುಗರ್ ಫ್ಯಾಕ್ಟರಿ: ಡಾರ್ಲಿಂಗ್ ಕೃಷ್ಣ-ಸೋನಲ್ ಭರ್ಜರಿ ರೊಮ್ಯಾನ್ಸ್!

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?