ಟಗರು ಕಾಳಗ ಏಕಾಏಕಿ ರದ್ದುಗೊಳಿಸಿದ ಪೊಲೀಸರು: ಗ್ರಾಮಸ್ಥರ ಮೇಲೆ ಕೇಸ್‌ ಹಾಕಿಸಿದ ಶಾಸಕ

ಟಗರು ಕಾಳಗ ಏಕಾಏಕಿ ರದ್ದುಗೊಳಿಸಿದ ಪೊಲೀಸರು: ಗ್ರಾಮಸ್ಥರ ಮೇಲೆ ಕೇಸ್‌ ಹಾಕಿಸಿದ ಶಾಸಕ

Published : Nov 02, 2023, 09:45 AM IST

ಜನರೇ ಆಯ್ಕೆ ಮಾಡಿ ಕಳುಹಿಸಿದ ಜನಪ್ರತಿನಿಧಿಯೊಬ್ಬರು ಮನೆ ಮುಂದೆ ಬಂದು ಗಲಾಟೆ ಮಾಡಿದ್ರು ಅನ್ನೋ ಕಾರಣಕ್ಕೆ ಗ್ರಾಮಸ್ಥರ ಮೇಲೆ ಕೇಸ್ ಹಾಕಿಸಿದ್ದಾರೆ. 
 

ಕಳೆದ ಮೂರ್ನಾಲ್ಕು ದಿನಗಳ ಹಿಂದಷ್ಟೇ ಚಿತ್ರದುರ್ಗದ ಹಳೇ ಕಲ್ಲಹಳ್ಳಿ ಗ್ರಾಮದಲ್ಲಿ ಟಗರು ಕಾಳಗ(Tagaru kalaga)ನಡೆಸುವ ನಿಟ್ಟಿನಲ್ಲಿ ಚಿತ್ರದುರ್ಗ(Chitradurga) ಶಾಸಕ ವಿರೇಂದ್ರ(MLA Virendra) ಅವರ ಬಳಿ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಅದಕ್ಕೆ ಸೂಕ್ತವಾಗಿಯೇ ಸ್ಪಂದಿಸಿರೋ ಶಾಸಕ ನೀವು ನಡೆಸಿ ನಾನಿದ್ದೀನಿ ಎಂದು ಭರವಸೆ ನೀಡಿದ್ದಾರೆ. ಆದ್ರೆ ಕಾಳಗ ನಡೆಸಲು ಜನರು ಎಲ್ಲಾ ಸಜ್ಜು ಮಾಡಿಕೊಂಡಿದ್ರು. ಆದ್ರೆ ಏಕಾಏಕಿ ಪೊಲೀಸರು ಆಗಮಿಸಿ ಕಾರ್ಯಕ್ರಮ ರದ್ದುಗೊಳಿಸಿದ್ದಾರೆ. ಇದ್ರಿಂದ ಆಕ್ರೋಶಗೊಂಡ ಗ್ರಾಮಸ್ಥರು ತಡರಾತ್ರಿಯೇ ಶಾಸಕ ವಿರೇಂದ್ರ ನಿವಾಸ ಮುಂದೆ ಬಂದು ಆಕ್ರೋಶ ಹೊರಹಾಕಿದ್ದಾರೆ. ಇನ್ನು ಈ ವೇಳೆ ಕೆಲ ಪುಂಡರು ಹಾಗೂ ಶಾಸಕರ ಮನೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಎಂದು ಹೇಳುವ ವ್ಯಕ್ತಿಯ ಮಧ್ಯೆ ಮಾತಿನ ಚಕಮಕಿಯಾಗಿದೆ. ಇದನ್ನೇ ಪ್ರತಿಷ್ಠೆಯಾಗಿ ತೆಗೆದುಕೊಂಡ ಶಾಸಕ ವಿರೇಂದ್ರ, ಸಿಬ್ಬಂದಿ ತಿಪ್ಪೇಸ್ವಾಮಿ ಕಡೆಯಿಂದ ಬಚ್ವಬೋರನಹಟ್ಟಿ, ಕಲ್ಲೇನಹಳ್ಳಿ ಗ್ರಾಮದ ಸುಮಾರು 9 ಮಂದಿಯ ಮೇಲೆ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದ್ರಲ್ಲಿ ಮೂವರು ಗ್ರಾಮ ಪಂಚಾಯತ್ ಸದಸ್ಯರು ಕೂಡ ಇದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗ್ರಾಮ ಪಂಚಾಯತ್ ಸದಸ್ಯರು ನಾವು  ಏರ್ಪಡಿಸಿದ್ದ ಅದ್ದೂರಿ ಕಾರ್ಯಕ್ರಮ ರದ್ದಾಯ್ತು ಎನ್ನುವ ನೋವು ತೋಡಿಕೊಳ್ಳಲು ಹೋಗಿದ್ದೆವು. ಶಾಸಕರಿಗೆ ಅದ್ದೂರಿ ಸನ್ಮಾನ ಮಾಡಲು ಎಲ್ಲಾ ಯುವಕರು ಪ್ಲಾನ್ ಮಾಡಿಕೊಂಡಿದ್ರು. ಆದ್ರೆ ಈ ರೀತಿ ಆಗಿರೋದಕ್ಕೆ ತುಂಬಾ ಬೇಸರವಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ. ಇನ್ನು ಈ ಪ್ರಕರಣದ ಬಗ್ಗೆ ಶಾಸಕರನ್ನೇ‌ ವಿಚಾರಿಸಿದ್ರೆ, ಮತದಾರರು ಬಂದು ಕೇಳೋದ್ರಲ್ಲಿ ತಪ್ಪಿಲ್ಲ, ಆದ್ರೆ ಕೇಳುವ ರೀತಿಯಲ್ಲಿ ತಪ್ಪಿದೆ. ರಾತ್ರ ಬಂದು ಮನೆ ಗೇಟ್ಗೆ ಕಲ್ಲು ಹೊಡೆಯುವುದು, ಸಿಬ್ಬಂದಿ ಹಲ್ಲೆ ಮಾಡುವ ಕೆಲಸ ಮಾಡಿದ್ದಾರೆ. ರಾತ್ರಿ 12 ಗಂಟೆ ಸುಮಾರಿ 150 ರಿಂದ 200 ಜನ ಮನೆ ಮುಂದೆ ಬಂದು ಮಾತನಾಡಿಸಿದ್ರೆ ಮಾತಾಡೋಕೆ ಆಗುತ್ತಾ. ತಪ್ಪಿತಸ್ಥರಿಗೆ ಕಾನೂನು ರೀತಿ ಕ್ರಮ ಆಗಿದೆ ಅಷ್ಟೆ ಎನ್ನುತ್ತಿದ್ದಾರೆ. ಚುನಾವಣೆಯಲ್ಲಿ ಗೆಲ್ಲುವುದಕ್ಕೂ ಮುನ್ನ ಜನರಿಗೆ ಸೆಲ್ಯೂಟ್ ಹೊಡೆಯುವ ಜನಪ್ರತಿನಿಧಿಗಳು ಗೆದ್ದ ಬಳಿಕವೂ ಜನರ ಮೇಲೆ ಅನುಕಂಪ ಇರಬೇಕಲ್ವಾ.? ಜನ ತಾಳ್ಮೆ ಕಳೆದುಕೊಂಡರು ಶಾಸಕರಾದ್ವು ತಿಳಿ ಹೇಳಬೇಕಿತ್ತು. ಅದರ ಬದಲಾಗಿ ಕೇಸ್ ದಾಖಲಿಸೋದು ಎಷ್ಟು ಸರಿ ಅನ್ನೋ ಮಾತುಗಳು ಕೇಳಿ ಬರ್ತಿವೆ.

ಇದನ್ನೂ ವೀಕ್ಷಿಸಿ:  Today Horoscope: ಶುಕ್ರ ಗ್ರಹ ಇಂದು ಕನ್ಯಾ ರಾಶಿಗೆ ಪ್ರವೇಶ..ನಿಮ್ಮ ರಾಶಿಗಿದೆಯೇ ಶುಭ ಫಲ ?

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more