ಮತ್ತೆ ಸದ್ದು ಮಾಡ್ತಿದೆ ಸ್ಯಾಂಡ್ ಮಾಫಿಯಾ: ನದಿ ಒಡಲನ್ನೇ ಕೊರೆಯತ್ತಿದ್ದಾರೆ ಮರಳು ಗಳ್ಳರು

ಮತ್ತೆ ಸದ್ದು ಮಾಡ್ತಿದೆ ಸ್ಯಾಂಡ್ ಮಾಫಿಯಾ: ನದಿ ಒಡಲನ್ನೇ ಕೊರೆಯತ್ತಿದ್ದಾರೆ ಮರಳು ಗಳ್ಳರು

Published : Oct 16, 2023, 11:23 AM IST

ಜಯಮಂಗಲಿ ನದಿ ತುಮಕೂರು ಜಿಲ್ಲೆಯ ಎರಡು ತಾಲೂಕುಗಳ ರೈತರ ಜೀವನಾಡಿಯಾಗಿದೆ. ಸುಮಾರು 30 ವರ್ಷಗಳ ಕಾಲ ನದಿಯಲ್ಲಿ ನೀರು ಕಾಣದಾಗಿತ್ತು. ಕಳೆದ ವರ್ಷ ವ್ಯಾಪಕ ಮಳೆಯಿಂದಾಗಿ ನೆರೆ ಉಂಟಾಗಿ ಮೈದುಂಬಿ ಹರಿದಿತ್ತು. ಈ ಭಾರಿ ಮಳೆ‌ ಬಾರದ‌ ಪರಿಣಾಮ‌ ನದಿ ಒಡಲು ನೀರಿಲದೆ ಮರಳಿನಿಂದ ತುಂಬಿ ಹೋಗಿದೆ.  ಇದೀಗ ಸಮೃದ್ಧಿಯಾಗಿ ಶೇಖರಣೆಯಾಗಿರುವ ಮರಳಿನ ಮೇಲೆ ದಂಧೆಕೋರರ ಕಣ್ಣು ಬಿದಿದೆ.
 

ಇಷ್ಟು ದಿನ ಸೈಲೆಂಟ್ ಆಗಿದ್ದ ಸ್ಯಾಂಡ್ ಮಾಫಿಯಾ(Sand Mafia) ಮತ್ತೆ ಸದ್ದು ಮಾಡ್ತಿದೆ. ನದಿಯ ಒಡಲನ್ನೇ ಬಗೆದು ಹಣ ಮಾಡಲು ಹೊರಟಿದ್ದಾರೆ.. ಇಲ್ನೋಡಿ ಟ್ರ್ಯಾಕ್ಟರ್ಗಳನ್ನು ತಂದು ಮರಳನ್ನ ತುಂಬಲು ರೆಡಿಯಾಗಿದ್ದಾರೆ.. ಇದು ತುಮಕೂರಿನ(Tumakuru) ದೇವರಾಯದುರ್ಗದಲ್ಲಿ ಜನಿಸುವ ಜಯಮಂಗಲಿ ನದಿ ತೀರದಲ್ಲಿ ಕಂಡುಬರುವ ದೃಶ್ಯ. ಜಯಮಂಗಲಿ ನದಿ ಮೇಲೆ ಮರಳು ಮಾಫಿಯಾ ದಂಧೆಕೋರರ ಕಣ್ಣು ಬಿದ್ದಿದೆ. ಕೊರಟೆಗೆರೆ ಹಾಗೂ ಮಧುಗಿರಿ ತಾಲೂಕಿನ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ. ಮಧುಗಿರಿಯ ಕೊಂಡವಾಡಿ, ಅಕ್ಕಲಾಪುರ, ಕುರುಡಿ, ಕೊಡ್ಲಾಪುರ, ಪುರವರ, ಕೊಡಿಗೇನಹಳ್ಳಿ  ಹಾಗೂ‌ ಕೊರಟಗೆರೆಯ ಮೊರ್ಗಾನಹಳ್ಳಿ ಕೆಜಿ. ಬೇವಿನಹಳ್ಳಿಯಲ್ಲಿ ಮರಳುಗಾರಿಕೆ ಮಾಡಲಾಗುತ್ತಿದೆ. ರಾತ್ರಿ-ಹಗಲು ರಾಜಾರೋಷವಾಗಿ ಮರಳನ್ನು ಬೆಂಗಳೂರಿಗೆ ಕಳುಹಿಸಲಾಗುತ್ತಿದೆ. ಅಕ್ರಮ‌ ಮರಳುಗಾರಿಕೆ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನಲೆ, ಕೊರಟಗೆರೆ ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಅಖಾಡಕ್ಕೆ ಇಳಿದಿದ್ದಾರೆ.‌ ಮಧ್ಯರಾತ್ರಿ ಖುದ್ದು ಜಯಮಂಗಲಿ ನದಿ ಹರಿಯುವ ಗ್ರಾಮಗಳಲ್ಲಿ ರೌಂಡ್ಸ್ ಹಾಕಿ, ಮರಳು ಅಡ್ಡೆಗಳ ಮೇಲೆ ದಾಳಿ ನಡೆಸಿದ್ದಾರೆ.  ತಹಶೀಲ್ದಾರ್ ದಾಳಿ ವೇಳೆ ಮರಳು ತುಂಬುತ್ತಿದ್ದ ದಂಧೆಕೋರರು ಟ್ರ್ಯಾಕ್ಟರ್ ಬಿಟ್ಟು ಪರಾರಿಯಾಗಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more