ಮತ್ತೆ ಸದ್ದು ಮಾಡ್ತಿದೆ ಸ್ಯಾಂಡ್ ಮಾಫಿಯಾ: ನದಿ ಒಡಲನ್ನೇ ಕೊರೆಯತ್ತಿದ್ದಾರೆ ಮರಳು ಗಳ್ಳರು

ಮತ್ತೆ ಸದ್ದು ಮಾಡ್ತಿದೆ ಸ್ಯಾಂಡ್ ಮಾಫಿಯಾ: ನದಿ ಒಡಲನ್ನೇ ಕೊರೆಯತ್ತಿದ್ದಾರೆ ಮರಳು ಗಳ್ಳರು

Published : Oct 16, 2023, 11:23 AM IST

ಜಯಮಂಗಲಿ ನದಿ ತುಮಕೂರು ಜಿಲ್ಲೆಯ ಎರಡು ತಾಲೂಕುಗಳ ರೈತರ ಜೀವನಾಡಿಯಾಗಿದೆ. ಸುಮಾರು 30 ವರ್ಷಗಳ ಕಾಲ ನದಿಯಲ್ಲಿ ನೀರು ಕಾಣದಾಗಿತ್ತು. ಕಳೆದ ವರ್ಷ ವ್ಯಾಪಕ ಮಳೆಯಿಂದಾಗಿ ನೆರೆ ಉಂಟಾಗಿ ಮೈದುಂಬಿ ಹರಿದಿತ್ತು. ಈ ಭಾರಿ ಮಳೆ‌ ಬಾರದ‌ ಪರಿಣಾಮ‌ ನದಿ ಒಡಲು ನೀರಿಲದೆ ಮರಳಿನಿಂದ ತುಂಬಿ ಹೋಗಿದೆ.  ಇದೀಗ ಸಮೃದ್ಧಿಯಾಗಿ ಶೇಖರಣೆಯಾಗಿರುವ ಮರಳಿನ ಮೇಲೆ ದಂಧೆಕೋರರ ಕಣ್ಣು ಬಿದಿದೆ.
 

ಇಷ್ಟು ದಿನ ಸೈಲೆಂಟ್ ಆಗಿದ್ದ ಸ್ಯಾಂಡ್ ಮಾಫಿಯಾ(Sand Mafia) ಮತ್ತೆ ಸದ್ದು ಮಾಡ್ತಿದೆ. ನದಿಯ ಒಡಲನ್ನೇ ಬಗೆದು ಹಣ ಮಾಡಲು ಹೊರಟಿದ್ದಾರೆ.. ಇಲ್ನೋಡಿ ಟ್ರ್ಯಾಕ್ಟರ್ಗಳನ್ನು ತಂದು ಮರಳನ್ನ ತುಂಬಲು ರೆಡಿಯಾಗಿದ್ದಾರೆ.. ಇದು ತುಮಕೂರಿನ(Tumakuru) ದೇವರಾಯದುರ್ಗದಲ್ಲಿ ಜನಿಸುವ ಜಯಮಂಗಲಿ ನದಿ ತೀರದಲ್ಲಿ ಕಂಡುಬರುವ ದೃಶ್ಯ. ಜಯಮಂಗಲಿ ನದಿ ಮೇಲೆ ಮರಳು ಮಾಫಿಯಾ ದಂಧೆಕೋರರ ಕಣ್ಣು ಬಿದ್ದಿದೆ. ಕೊರಟೆಗೆರೆ ಹಾಗೂ ಮಧುಗಿರಿ ತಾಲೂಕಿನ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ. ಮಧುಗಿರಿಯ ಕೊಂಡವಾಡಿ, ಅಕ್ಕಲಾಪುರ, ಕುರುಡಿ, ಕೊಡ್ಲಾಪುರ, ಪುರವರ, ಕೊಡಿಗೇನಹಳ್ಳಿ  ಹಾಗೂ‌ ಕೊರಟಗೆರೆಯ ಮೊರ್ಗಾನಹಳ್ಳಿ ಕೆಜಿ. ಬೇವಿನಹಳ್ಳಿಯಲ್ಲಿ ಮರಳುಗಾರಿಕೆ ಮಾಡಲಾಗುತ್ತಿದೆ. ರಾತ್ರಿ-ಹಗಲು ರಾಜಾರೋಷವಾಗಿ ಮರಳನ್ನು ಬೆಂಗಳೂರಿಗೆ ಕಳುಹಿಸಲಾಗುತ್ತಿದೆ. ಅಕ್ರಮ‌ ಮರಳುಗಾರಿಕೆ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನಲೆ, ಕೊರಟಗೆರೆ ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಅಖಾಡಕ್ಕೆ ಇಳಿದಿದ್ದಾರೆ.‌ ಮಧ್ಯರಾತ್ರಿ ಖುದ್ದು ಜಯಮಂಗಲಿ ನದಿ ಹರಿಯುವ ಗ್ರಾಮಗಳಲ್ಲಿ ರೌಂಡ್ಸ್ ಹಾಕಿ, ಮರಳು ಅಡ್ಡೆಗಳ ಮೇಲೆ ದಾಳಿ ನಡೆಸಿದ್ದಾರೆ.  ತಹಶೀಲ್ದಾರ್ ದಾಳಿ ವೇಳೆ ಮರಳು ತುಂಬುತ್ತಿದ್ದ ದಂಧೆಕೋರರು ಟ್ರ್ಯಾಕ್ಟರ್ ಬಿಟ್ಟು ಪರಾರಿಯಾಗಿದ್ದಾರೆ. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more