ಮತ್ತೆ ಸದ್ದು ಮಾಡ್ತಿದೆ ಸ್ಯಾಂಡ್ ಮಾಫಿಯಾ: ನದಿ ಒಡಲನ್ನೇ ಕೊರೆಯತ್ತಿದ್ದಾರೆ ಮರಳು ಗಳ್ಳರು

ಮತ್ತೆ ಸದ್ದು ಮಾಡ್ತಿದೆ ಸ್ಯಾಂಡ್ ಮಾಫಿಯಾ: ನದಿ ಒಡಲನ್ನೇ ಕೊರೆಯತ್ತಿದ್ದಾರೆ ಮರಳು ಗಳ್ಳರು

Published : Oct 16, 2023, 11:23 AM IST

ಜಯಮಂಗಲಿ ನದಿ ತುಮಕೂರು ಜಿಲ್ಲೆಯ ಎರಡು ತಾಲೂಕುಗಳ ರೈತರ ಜೀವನಾಡಿಯಾಗಿದೆ. ಸುಮಾರು 30 ವರ್ಷಗಳ ಕಾಲ ನದಿಯಲ್ಲಿ ನೀರು ಕಾಣದಾಗಿತ್ತು. ಕಳೆದ ವರ್ಷ ವ್ಯಾಪಕ ಮಳೆಯಿಂದಾಗಿ ನೆರೆ ಉಂಟಾಗಿ ಮೈದುಂಬಿ ಹರಿದಿತ್ತು. ಈ ಭಾರಿ ಮಳೆ‌ ಬಾರದ‌ ಪರಿಣಾಮ‌ ನದಿ ಒಡಲು ನೀರಿಲದೆ ಮರಳಿನಿಂದ ತುಂಬಿ ಹೋಗಿದೆ.  ಇದೀಗ ಸಮೃದ್ಧಿಯಾಗಿ ಶೇಖರಣೆಯಾಗಿರುವ ಮರಳಿನ ಮೇಲೆ ದಂಧೆಕೋರರ ಕಣ್ಣು ಬಿದಿದೆ.
 

ಇಷ್ಟು ದಿನ ಸೈಲೆಂಟ್ ಆಗಿದ್ದ ಸ್ಯಾಂಡ್ ಮಾಫಿಯಾ(Sand Mafia) ಮತ್ತೆ ಸದ್ದು ಮಾಡ್ತಿದೆ. ನದಿಯ ಒಡಲನ್ನೇ ಬಗೆದು ಹಣ ಮಾಡಲು ಹೊರಟಿದ್ದಾರೆ.. ಇಲ್ನೋಡಿ ಟ್ರ್ಯಾಕ್ಟರ್ಗಳನ್ನು ತಂದು ಮರಳನ್ನ ತುಂಬಲು ರೆಡಿಯಾಗಿದ್ದಾರೆ.. ಇದು ತುಮಕೂರಿನ(Tumakuru) ದೇವರಾಯದುರ್ಗದಲ್ಲಿ ಜನಿಸುವ ಜಯಮಂಗಲಿ ನದಿ ತೀರದಲ್ಲಿ ಕಂಡುಬರುವ ದೃಶ್ಯ. ಜಯಮಂಗಲಿ ನದಿ ಮೇಲೆ ಮರಳು ಮಾಫಿಯಾ ದಂಧೆಕೋರರ ಕಣ್ಣು ಬಿದ್ದಿದೆ. ಕೊರಟೆಗೆರೆ ಹಾಗೂ ಮಧುಗಿರಿ ತಾಲೂಕಿನ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ. ಮಧುಗಿರಿಯ ಕೊಂಡವಾಡಿ, ಅಕ್ಕಲಾಪುರ, ಕುರುಡಿ, ಕೊಡ್ಲಾಪುರ, ಪುರವರ, ಕೊಡಿಗೇನಹಳ್ಳಿ  ಹಾಗೂ‌ ಕೊರಟಗೆರೆಯ ಮೊರ್ಗಾನಹಳ್ಳಿ ಕೆಜಿ. ಬೇವಿನಹಳ್ಳಿಯಲ್ಲಿ ಮರಳುಗಾರಿಕೆ ಮಾಡಲಾಗುತ್ತಿದೆ. ರಾತ್ರಿ-ಹಗಲು ರಾಜಾರೋಷವಾಗಿ ಮರಳನ್ನು ಬೆಂಗಳೂರಿಗೆ ಕಳುಹಿಸಲಾಗುತ್ತಿದೆ. ಅಕ್ರಮ‌ ಮರಳುಗಾರಿಕೆ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನಲೆ, ಕೊರಟಗೆರೆ ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಅಖಾಡಕ್ಕೆ ಇಳಿದಿದ್ದಾರೆ.‌ ಮಧ್ಯರಾತ್ರಿ ಖುದ್ದು ಜಯಮಂಗಲಿ ನದಿ ಹರಿಯುವ ಗ್ರಾಮಗಳಲ್ಲಿ ರೌಂಡ್ಸ್ ಹಾಕಿ, ಮರಳು ಅಡ್ಡೆಗಳ ಮೇಲೆ ದಾಳಿ ನಡೆಸಿದ್ದಾರೆ.  ತಹಶೀಲ್ದಾರ್ ದಾಳಿ ವೇಳೆ ಮರಳು ತುಂಬುತ್ತಿದ್ದ ದಂಧೆಕೋರರು ಟ್ರ್ಯಾಕ್ಟರ್ ಬಿಟ್ಟು ಪರಾರಿಯಾಗಿದ್ದಾರೆ. 

24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
Read more