ಮತ್ತೆ ಸದ್ದು ಮಾಡ್ತಿದೆ ಸ್ಯಾಂಡ್ ಮಾಫಿಯಾ: ನದಿ ಒಡಲನ್ನೇ ಕೊರೆಯತ್ತಿದ್ದಾರೆ ಮರಳು ಗಳ್ಳರು

ಮತ್ತೆ ಸದ್ದು ಮಾಡ್ತಿದೆ ಸ್ಯಾಂಡ್ ಮಾಫಿಯಾ: ನದಿ ಒಡಲನ್ನೇ ಕೊರೆಯತ್ತಿದ್ದಾರೆ ಮರಳು ಗಳ್ಳರು

Published : Oct 16, 2023, 11:23 AM IST

ಜಯಮಂಗಲಿ ನದಿ ತುಮಕೂರು ಜಿಲ್ಲೆಯ ಎರಡು ತಾಲೂಕುಗಳ ರೈತರ ಜೀವನಾಡಿಯಾಗಿದೆ. ಸುಮಾರು 30 ವರ್ಷಗಳ ಕಾಲ ನದಿಯಲ್ಲಿ ನೀರು ಕಾಣದಾಗಿತ್ತು. ಕಳೆದ ವರ್ಷ ವ್ಯಾಪಕ ಮಳೆಯಿಂದಾಗಿ ನೆರೆ ಉಂಟಾಗಿ ಮೈದುಂಬಿ ಹರಿದಿತ್ತು. ಈ ಭಾರಿ ಮಳೆ‌ ಬಾರದ‌ ಪರಿಣಾಮ‌ ನದಿ ಒಡಲು ನೀರಿಲದೆ ಮರಳಿನಿಂದ ತುಂಬಿ ಹೋಗಿದೆ.  ಇದೀಗ ಸಮೃದ್ಧಿಯಾಗಿ ಶೇಖರಣೆಯಾಗಿರುವ ಮರಳಿನ ಮೇಲೆ ದಂಧೆಕೋರರ ಕಣ್ಣು ಬಿದಿದೆ.
 

ಇಷ್ಟು ದಿನ ಸೈಲೆಂಟ್ ಆಗಿದ್ದ ಸ್ಯಾಂಡ್ ಮಾಫಿಯಾ(Sand Mafia) ಮತ್ತೆ ಸದ್ದು ಮಾಡ್ತಿದೆ. ನದಿಯ ಒಡಲನ್ನೇ ಬಗೆದು ಹಣ ಮಾಡಲು ಹೊರಟಿದ್ದಾರೆ.. ಇಲ್ನೋಡಿ ಟ್ರ್ಯಾಕ್ಟರ್ಗಳನ್ನು ತಂದು ಮರಳನ್ನ ತುಂಬಲು ರೆಡಿಯಾಗಿದ್ದಾರೆ.. ಇದು ತುಮಕೂರಿನ(Tumakuru) ದೇವರಾಯದುರ್ಗದಲ್ಲಿ ಜನಿಸುವ ಜಯಮಂಗಲಿ ನದಿ ತೀರದಲ್ಲಿ ಕಂಡುಬರುವ ದೃಶ್ಯ. ಜಯಮಂಗಲಿ ನದಿ ಮೇಲೆ ಮರಳು ಮಾಫಿಯಾ ದಂಧೆಕೋರರ ಕಣ್ಣು ಬಿದ್ದಿದೆ. ಕೊರಟೆಗೆರೆ ಹಾಗೂ ಮಧುಗಿರಿ ತಾಲೂಕಿನ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ. ಮಧುಗಿರಿಯ ಕೊಂಡವಾಡಿ, ಅಕ್ಕಲಾಪುರ, ಕುರುಡಿ, ಕೊಡ್ಲಾಪುರ, ಪುರವರ, ಕೊಡಿಗೇನಹಳ್ಳಿ  ಹಾಗೂ‌ ಕೊರಟಗೆರೆಯ ಮೊರ್ಗಾನಹಳ್ಳಿ ಕೆಜಿ. ಬೇವಿನಹಳ್ಳಿಯಲ್ಲಿ ಮರಳುಗಾರಿಕೆ ಮಾಡಲಾಗುತ್ತಿದೆ. ರಾತ್ರಿ-ಹಗಲು ರಾಜಾರೋಷವಾಗಿ ಮರಳನ್ನು ಬೆಂಗಳೂರಿಗೆ ಕಳುಹಿಸಲಾಗುತ್ತಿದೆ. ಅಕ್ರಮ‌ ಮರಳುಗಾರಿಕೆ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನಲೆ, ಕೊರಟಗೆರೆ ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಅಖಾಡಕ್ಕೆ ಇಳಿದಿದ್ದಾರೆ.‌ ಮಧ್ಯರಾತ್ರಿ ಖುದ್ದು ಜಯಮಂಗಲಿ ನದಿ ಹರಿಯುವ ಗ್ರಾಮಗಳಲ್ಲಿ ರೌಂಡ್ಸ್ ಹಾಕಿ, ಮರಳು ಅಡ್ಡೆಗಳ ಮೇಲೆ ದಾಳಿ ನಡೆಸಿದ್ದಾರೆ.  ತಹಶೀಲ್ದಾರ್ ದಾಳಿ ವೇಳೆ ಮರಳು ತುಂಬುತ್ತಿದ್ದ ದಂಧೆಕೋರರು ಟ್ರ್ಯಾಕ್ಟರ್ ಬಿಟ್ಟು ಪರಾರಿಯಾಗಿದ್ದಾರೆ. 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more