ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ: ಕಾಲೇಜು, ಆಫೀಸ್‌ಗೆ ಹೊರಟ ಪ್ರಯಾಣಿಕರ ಪರದಾಟ

Bindushree N  | Published: Jul 4, 2023, 11:48 AM IST

ಬೆಂಗಳೂರು: ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಕೆಂಗೇರಿ ಟು ಬೈಯ್ಯಪ್ಪನಹಳ್ಳಿ ಮೆಟ್ರೋ ಸಂಚಾರ ಸ್ಥಗಿತವಾಗಿದೆ. ತಾಂತ್ರಿಕ ಕಾರಣದಿಂದ ಸಂಚಾರ ಸ್ಥಗಿತವಾಗಿದ್ದು, ಪ್ರಯಾಣಿಕರು ಪರದಾಡುವಂತಾಯಿತು. ಪೀಕ್ ಹವರ್‌ನಲ್ಲೇ ಮೆಟ್ರೋ ಕೈಕೊಟ್ಟಿದೆ. ಹೀಗಾಗಿ ಆಫೀಸ್‌ಗೆ ಹೊರಟವರೆಲ್ಲಾ ನಿಲ್ದಾಣದಲ್ಲೇ ಮೆಟ್ರೋಗಾಗಿ ಕಾಯೋ ಪರಿಸ್ಥಿತಿ ಉಂಟಾಗಿದೆ. ಈ ಸಂಬಂಧ ನಮ್ಮ ಮೆಟ್ರೋ ಟ್ವೀಟ್‌ ಮಾಡಿದ್ದು, ಸಿಗ್ನಲ್‌ ಸಮಸ್ಯೆಯಿಂದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಇದನ್ನು ಆದಷ್ಟು ಬೇಗ ಬಗೆಹರಿಸಲಾಗುವುದು ಎಂದು ಹೇಳಿದೆ.

ಇದನ್ನೂ ವೀಕ್ಷಿಸಿ:  ದೆಹಲಿಯಲ್ಲಿನ ನಿರ್ಣಯ ಶಾಸಕರ ಸಭೆಯಲ್ಲಿ ಘೋಷಣೆ ಮಾಡ್ತಾರಾ ?: ಯಾರ ಪಾಲಾಗುತ್ತೆ ಕೇಸರಿ ಲೀಡರ್‌ ಕಿರೀಟ..?