Bagalkot: ಬಾದಾಮಿ ಬನಶಂಕರಿ ಜಾತ್ರೆ ರದ್ದು: ಕಂಗಾಲಾದ ಕಲಾವಿದರು

Bagalkot: ಬಾದಾಮಿ ಬನಶಂಕರಿ ಜಾತ್ರೆ ರದ್ದು: ಕಂಗಾಲಾದ ಕಲಾವಿದರು

Suvarna News   | Asianet News
Published : Jan 13, 2022, 12:15 PM IST

*  ಕಲಾವಿದರ ಬದುಕು ಕಸಿದುಕೊಂಡ ಕೊರೋನಾವೈರಸ್
*  ರದ್ದಾದ ತಿಂಗಳ ಪರ್ಯಂತ ನಡೆಯೋ ಬಾದಾಮಿ ಜಾತ್ರೆ
*  ಅವಕಾಶ ಕೊಡಿ, ನಿಯಮ ಪಾಲಿಸಿ ನಾಟಕ ಪ್ರದರ್ಶನ ಮಾಡ್ತೇವೆ 
 

ಬಾಗಲಕೋಟೆ(ಜ.13):   ಪ್ರತಿ ವರ್ಷ ನೂರಾರು ಜನ ರಂಗಭೂಮಿ ಕಲಾವಿದರಿಗೆ ವರದಾನವಾಗಿದ್ದ ಐತಿಹಾಸಿಕ ಬಾದಾಮಿಯ ಬನಶಂಕರಿ ಜಾತ್ರೆ ಈ ಬಾರಿ ಕೊರೋನಾ ಹಿನ್ನೆಲೆಯಲ್ಲಿ ರದ್ದಾಗಿದ್ದು, ಇದೀಗ ರಂಗಭೂಮಿ ಕಲಾವಿದರ ಬದುಕು ಬೀದಿಗೆ ಬಂದು ನಿಲ್ಲುವಂತಾಗಿದೆ. ಪ್ರತಿವರ್ಷ ಒಂದೂವರೆ ತಿಂಗಳ ಕಾಲ ದುಡಿದು ವರ್ಷವಿಡಿ ಬದುಕಿಗೆ ಆಸರೆಯಾಗುತ್ತಿದ್ದ ಬಾದಾಮಿ ಜಾತ್ರೆ ರದ್ದಾಗಿದ್ದರಿಂದ ಕಲಾವಿದರು ಕಂಗಾಲಾಗಿದ್ದಾರೆ. ಅಧಿಕಾರಿಗಳಿಗೆ ಮನವಿ ಸಲ್ಲಿಸಿ ನಾಟಕ ಪ್ರದರ್ಶನಕ್ಕೆ ಅವಕಾಶ ಕೊಡಿ ಅಂತ ಸುವರ್ಣನ್ಯೂಸ್ ಮೂಲಕ ಗೋಗರೆಯುತ್ತಿದ್ದಾರೆ. 

ಐತಿಹಾಸಿಕ ಬಾದಾಮಿ ಬನಶಂಕರಿ ದೇವಿ ಜಾತ್ರೆಯನ್ನು, ಕೊರೋನಾ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಂತೆ  ಈ ಬಾರಿಯೂ ಜಿಲ್ಲಾಡಳಿತ ರದ್ದು ಮಾಡಿದೆ. ಇದರೊಟ್ಟಿಗೆ ಜಾತ್ರೆಯಲ್ಲಿ ನಾಟಕ ಪ್ರದರ್ಶನವನ್ನೂ ಕೂಡಾ ನಿಷೇಧಿಸಿದೆ. ಹೀಗಾಗಿ ಪ್ರತಿವರ್ಷ 10 ರಿಂದ 15 ನಾಟಕ ಪ್ರದರ್ಶನದ ಮೂಲಕ ವರ್ಷವಿಡಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದ ನೂರಾರು ಜನ ಹವ್ಯಾಸಿ, ವೃತ್ತಿ ರಂಗಭೂಮಿ ಕಲಾವಿದರ ಬದುಕು ಈ ಬಾರಿ ಅಕ್ಷರಶ: ಬೀದಿಗೆ ಬರುವಂತಾಗಿದೆ. 

Raichur: ಶಿಕ್ಷಣ ಸಚಿವರೇ ಇತ್ತ ಒಮ್ಮೆ ತಿರುಗಿ ನೋಡಿ: 1053 ಮಕ್ಕಳಿಗೆ ಒಂದೇ ಶೌಚಾಲಯ..!

ಬಾಗಲಕೋಟೆ ಜಿಲ್ಲೆಯಲ್ಲಿಯೇ ಹವ್ಯಾಸಿ,ವೃತ್ತಿ ರಂಗಭೂಮಿ ಕಲಾವಿದರು ಸೇರಿ ಅಂದಾಜು 4,500 ಜನರಿದ್ದಾರೆ. ಬಾದಾಮಿಯ ಹಂಸನೂರು ಸೇರಿದಂತೆ ಗ್ರಾಮೀಣ ಭಾಗದ ಕಲಾವಿದರು ಹೆಚ್ಚು ಉತ್ತರ ಕರ್ನಾಟಕ ಭಾಗದಲ್ಲಿ ನಾಟಕ ಪ್ರದರ್ಶನಕ್ಕೆ ಹೋಗುತ್ತಿದ್ದು, ಇವರಿಗೆ ಕಲೆಯೇ ಜೀವನಾಧಾರ, ಆದರೆ ಕಳೆದ ಎರಡು ವರ್ಷಗಳಿಂದ ಕೊರೊನಾ ಮಹಾಮಾರಿ ಕಲಾವಿದರ ಪಾಲಿಗೆ ಅಕ್ಷರಶಃ ಕಣ್ಣೀರು ತರಿಸಿದೆ. ಕಳೆದ ಬಾರಿಯೂ ಕೆಲಸವಿಲ್ಲದೆ ಕಲಾವಿದರು ಅತಂತ್ರರಾಗಿದ್ದರು. ನಮಗೆ ನಾಟಕ ಪ್ರದರ್ಶನಕ್ಕೆ ಅವಕಾಶ ಕೊಡಿ, ನಾವು ಕೋವಿಡ್ ನಿಯಮಾವಳಿಯಂತೆಯೇ ಪ್ರದರ್ಶನ ನೀಡುತ್ತೇವೆ. ನಮಗೆ ಬದುಕಲು ಅವಕಾಶ ಕೊಡಿ ಅಂತ ಗೋಗರೆದಿದ್ದಾರೆ.

ಒಟ್ಟಿನಲ್ಲಿ ಸರ್ಕಾರ ರಾಜ್ಯದಲ್ಲಿ ಓಮಿಕ್ರಾನ್ ಹಾವಳಿ ಹಿನ್ನೆಲೆಯಲ್ಲಿ ಜಾತ್ರೆಗಳನ್ನ ರದ್ದುಪಡಿಸಿದಂತೆ ಇತ್ತ ಬಾದಾಮಿ ಜಾತ್ರೆ ಸಹ ರದ್ದಾಗಿದ್ದು, ಇವುಗಳ ಮಧ್ಯೆ ನಾಟಕ ಪ್ರದರ್ಶನಕ್ಕೆ ಅವಕಾಶ ಕೊಡಿ ಅಂತ ಕಲಾವಿದರು ಗೋಗರೆಯುತ್ತಿದ್ದಾರೆ. ಇತ್ತ ಕೊರೊನಾ ನಿಯಮಾವಳಿ ಪಾಲನೆ ಜೊತೆಗೆ ಜಿಲ್ಲಾಡಳಿತ ಕಲೆ ,ನಾಟಕ ಪ್ರದರ್ಶನಕ್ಕೆ ಅವಕಾಶ ಕೊಡುತ್ತಾ ಅಂತ ಕಾದು ನೋಡಬೇಕಿದೆ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!