Bagalkot: ಬಾದಾಮಿ ಬನಶಂಕರಿ ಜಾತ್ರೆ ರದ್ದು: ಕಂಗಾಲಾದ ಕಲಾವಿದರು

Bagalkot: ಬಾದಾಮಿ ಬನಶಂಕರಿ ಜಾತ್ರೆ ರದ್ದು: ಕಂಗಾಲಾದ ಕಲಾವಿದರು

Suvarna News   | Asianet News
Published : Jan 13, 2022, 12:15 PM IST

*  ಕಲಾವಿದರ ಬದುಕು ಕಸಿದುಕೊಂಡ ಕೊರೋನಾವೈರಸ್
*  ರದ್ದಾದ ತಿಂಗಳ ಪರ್ಯಂತ ನಡೆಯೋ ಬಾದಾಮಿ ಜಾತ್ರೆ
*  ಅವಕಾಶ ಕೊಡಿ, ನಿಯಮ ಪಾಲಿಸಿ ನಾಟಕ ಪ್ರದರ್ಶನ ಮಾಡ್ತೇವೆ 
 

ಬಾಗಲಕೋಟೆ(ಜ.13):   ಪ್ರತಿ ವರ್ಷ ನೂರಾರು ಜನ ರಂಗಭೂಮಿ ಕಲಾವಿದರಿಗೆ ವರದಾನವಾಗಿದ್ದ ಐತಿಹಾಸಿಕ ಬಾದಾಮಿಯ ಬನಶಂಕರಿ ಜಾತ್ರೆ ಈ ಬಾರಿ ಕೊರೋನಾ ಹಿನ್ನೆಲೆಯಲ್ಲಿ ರದ್ದಾಗಿದ್ದು, ಇದೀಗ ರಂಗಭೂಮಿ ಕಲಾವಿದರ ಬದುಕು ಬೀದಿಗೆ ಬಂದು ನಿಲ್ಲುವಂತಾಗಿದೆ. ಪ್ರತಿವರ್ಷ ಒಂದೂವರೆ ತಿಂಗಳ ಕಾಲ ದುಡಿದು ವರ್ಷವಿಡಿ ಬದುಕಿಗೆ ಆಸರೆಯಾಗುತ್ತಿದ್ದ ಬಾದಾಮಿ ಜಾತ್ರೆ ರದ್ದಾಗಿದ್ದರಿಂದ ಕಲಾವಿದರು ಕಂಗಾಲಾಗಿದ್ದಾರೆ. ಅಧಿಕಾರಿಗಳಿಗೆ ಮನವಿ ಸಲ್ಲಿಸಿ ನಾಟಕ ಪ್ರದರ್ಶನಕ್ಕೆ ಅವಕಾಶ ಕೊಡಿ ಅಂತ ಸುವರ್ಣನ್ಯೂಸ್ ಮೂಲಕ ಗೋಗರೆಯುತ್ತಿದ್ದಾರೆ. 

ಐತಿಹಾಸಿಕ ಬಾದಾಮಿ ಬನಶಂಕರಿ ದೇವಿ ಜಾತ್ರೆಯನ್ನು, ಕೊರೋನಾ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಂತೆ  ಈ ಬಾರಿಯೂ ಜಿಲ್ಲಾಡಳಿತ ರದ್ದು ಮಾಡಿದೆ. ಇದರೊಟ್ಟಿಗೆ ಜಾತ್ರೆಯಲ್ಲಿ ನಾಟಕ ಪ್ರದರ್ಶನವನ್ನೂ ಕೂಡಾ ನಿಷೇಧಿಸಿದೆ. ಹೀಗಾಗಿ ಪ್ರತಿವರ್ಷ 10 ರಿಂದ 15 ನಾಟಕ ಪ್ರದರ್ಶನದ ಮೂಲಕ ವರ್ಷವಿಡಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದ ನೂರಾರು ಜನ ಹವ್ಯಾಸಿ, ವೃತ್ತಿ ರಂಗಭೂಮಿ ಕಲಾವಿದರ ಬದುಕು ಈ ಬಾರಿ ಅಕ್ಷರಶ: ಬೀದಿಗೆ ಬರುವಂತಾಗಿದೆ. 

Raichur: ಶಿಕ್ಷಣ ಸಚಿವರೇ ಇತ್ತ ಒಮ್ಮೆ ತಿರುಗಿ ನೋಡಿ: 1053 ಮಕ್ಕಳಿಗೆ ಒಂದೇ ಶೌಚಾಲಯ..!

ಬಾಗಲಕೋಟೆ ಜಿಲ್ಲೆಯಲ್ಲಿಯೇ ಹವ್ಯಾಸಿ,ವೃತ್ತಿ ರಂಗಭೂಮಿ ಕಲಾವಿದರು ಸೇರಿ ಅಂದಾಜು 4,500 ಜನರಿದ್ದಾರೆ. ಬಾದಾಮಿಯ ಹಂಸನೂರು ಸೇರಿದಂತೆ ಗ್ರಾಮೀಣ ಭಾಗದ ಕಲಾವಿದರು ಹೆಚ್ಚು ಉತ್ತರ ಕರ್ನಾಟಕ ಭಾಗದಲ್ಲಿ ನಾಟಕ ಪ್ರದರ್ಶನಕ್ಕೆ ಹೋಗುತ್ತಿದ್ದು, ಇವರಿಗೆ ಕಲೆಯೇ ಜೀವನಾಧಾರ, ಆದರೆ ಕಳೆದ ಎರಡು ವರ್ಷಗಳಿಂದ ಕೊರೊನಾ ಮಹಾಮಾರಿ ಕಲಾವಿದರ ಪಾಲಿಗೆ ಅಕ್ಷರಶಃ ಕಣ್ಣೀರು ತರಿಸಿದೆ. ಕಳೆದ ಬಾರಿಯೂ ಕೆಲಸವಿಲ್ಲದೆ ಕಲಾವಿದರು ಅತಂತ್ರರಾಗಿದ್ದರು. ನಮಗೆ ನಾಟಕ ಪ್ರದರ್ಶನಕ್ಕೆ ಅವಕಾಶ ಕೊಡಿ, ನಾವು ಕೋವಿಡ್ ನಿಯಮಾವಳಿಯಂತೆಯೇ ಪ್ರದರ್ಶನ ನೀಡುತ್ತೇವೆ. ನಮಗೆ ಬದುಕಲು ಅವಕಾಶ ಕೊಡಿ ಅಂತ ಗೋಗರೆದಿದ್ದಾರೆ.

ಒಟ್ಟಿನಲ್ಲಿ ಸರ್ಕಾರ ರಾಜ್ಯದಲ್ಲಿ ಓಮಿಕ್ರಾನ್ ಹಾವಳಿ ಹಿನ್ನೆಲೆಯಲ್ಲಿ ಜಾತ್ರೆಗಳನ್ನ ರದ್ದುಪಡಿಸಿದಂತೆ ಇತ್ತ ಬಾದಾಮಿ ಜಾತ್ರೆ ಸಹ ರದ್ದಾಗಿದ್ದು, ಇವುಗಳ ಮಧ್ಯೆ ನಾಟಕ ಪ್ರದರ್ಶನಕ್ಕೆ ಅವಕಾಶ ಕೊಡಿ ಅಂತ ಕಲಾವಿದರು ಗೋಗರೆಯುತ್ತಿದ್ದಾರೆ. ಇತ್ತ ಕೊರೊನಾ ನಿಯಮಾವಳಿ ಪಾಲನೆ ಜೊತೆಗೆ ಜಿಲ್ಲಾಡಳಿತ ಕಲೆ ,ನಾಟಕ ಪ್ರದರ್ಶನಕ್ಕೆ ಅವಕಾಶ ಕೊಡುತ್ತಾ ಅಂತ ಕಾದು ನೋಡಬೇಕಿದೆ.
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!