Bagalkot: ಬಾದಾಮಿ ಬನಶಂಕರಿ ಜಾತ್ರೆ ರದ್ದು: ಕಂಗಾಲಾದ ಕಲಾವಿದರು

Bagalkot: ಬಾದಾಮಿ ಬನಶಂಕರಿ ಜಾತ್ರೆ ರದ್ದು: ಕಂಗಾಲಾದ ಕಲಾವಿದರು

Suvarna News   | Asianet News
Published : Jan 13, 2022, 12:15 PM IST

*  ಕಲಾವಿದರ ಬದುಕು ಕಸಿದುಕೊಂಡ ಕೊರೋನಾವೈರಸ್
*  ರದ್ದಾದ ತಿಂಗಳ ಪರ್ಯಂತ ನಡೆಯೋ ಬಾದಾಮಿ ಜಾತ್ರೆ
*  ಅವಕಾಶ ಕೊಡಿ, ನಿಯಮ ಪಾಲಿಸಿ ನಾಟಕ ಪ್ರದರ್ಶನ ಮಾಡ್ತೇವೆ 
 

ಬಾಗಲಕೋಟೆ(ಜ.13):   ಪ್ರತಿ ವರ್ಷ ನೂರಾರು ಜನ ರಂಗಭೂಮಿ ಕಲಾವಿದರಿಗೆ ವರದಾನವಾಗಿದ್ದ ಐತಿಹಾಸಿಕ ಬಾದಾಮಿಯ ಬನಶಂಕರಿ ಜಾತ್ರೆ ಈ ಬಾರಿ ಕೊರೋನಾ ಹಿನ್ನೆಲೆಯಲ್ಲಿ ರದ್ದಾಗಿದ್ದು, ಇದೀಗ ರಂಗಭೂಮಿ ಕಲಾವಿದರ ಬದುಕು ಬೀದಿಗೆ ಬಂದು ನಿಲ್ಲುವಂತಾಗಿದೆ. ಪ್ರತಿವರ್ಷ ಒಂದೂವರೆ ತಿಂಗಳ ಕಾಲ ದುಡಿದು ವರ್ಷವಿಡಿ ಬದುಕಿಗೆ ಆಸರೆಯಾಗುತ್ತಿದ್ದ ಬಾದಾಮಿ ಜಾತ್ರೆ ರದ್ದಾಗಿದ್ದರಿಂದ ಕಲಾವಿದರು ಕಂಗಾಲಾಗಿದ್ದಾರೆ. ಅಧಿಕಾರಿಗಳಿಗೆ ಮನವಿ ಸಲ್ಲಿಸಿ ನಾಟಕ ಪ್ರದರ್ಶನಕ್ಕೆ ಅವಕಾಶ ಕೊಡಿ ಅಂತ ಸುವರ್ಣನ್ಯೂಸ್ ಮೂಲಕ ಗೋಗರೆಯುತ್ತಿದ್ದಾರೆ. 

ಐತಿಹಾಸಿಕ ಬಾದಾಮಿ ಬನಶಂಕರಿ ದೇವಿ ಜಾತ್ರೆಯನ್ನು, ಕೊರೋನಾ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಂತೆ  ಈ ಬಾರಿಯೂ ಜಿಲ್ಲಾಡಳಿತ ರದ್ದು ಮಾಡಿದೆ. ಇದರೊಟ್ಟಿಗೆ ಜಾತ್ರೆಯಲ್ಲಿ ನಾಟಕ ಪ್ರದರ್ಶನವನ್ನೂ ಕೂಡಾ ನಿಷೇಧಿಸಿದೆ. ಹೀಗಾಗಿ ಪ್ರತಿವರ್ಷ 10 ರಿಂದ 15 ನಾಟಕ ಪ್ರದರ್ಶನದ ಮೂಲಕ ವರ್ಷವಿಡಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದ ನೂರಾರು ಜನ ಹವ್ಯಾಸಿ, ವೃತ್ತಿ ರಂಗಭೂಮಿ ಕಲಾವಿದರ ಬದುಕು ಈ ಬಾರಿ ಅಕ್ಷರಶ: ಬೀದಿಗೆ ಬರುವಂತಾಗಿದೆ. 

Raichur: ಶಿಕ್ಷಣ ಸಚಿವರೇ ಇತ್ತ ಒಮ್ಮೆ ತಿರುಗಿ ನೋಡಿ: 1053 ಮಕ್ಕಳಿಗೆ ಒಂದೇ ಶೌಚಾಲಯ..!

ಬಾಗಲಕೋಟೆ ಜಿಲ್ಲೆಯಲ್ಲಿಯೇ ಹವ್ಯಾಸಿ,ವೃತ್ತಿ ರಂಗಭೂಮಿ ಕಲಾವಿದರು ಸೇರಿ ಅಂದಾಜು 4,500 ಜನರಿದ್ದಾರೆ. ಬಾದಾಮಿಯ ಹಂಸನೂರು ಸೇರಿದಂತೆ ಗ್ರಾಮೀಣ ಭಾಗದ ಕಲಾವಿದರು ಹೆಚ್ಚು ಉತ್ತರ ಕರ್ನಾಟಕ ಭಾಗದಲ್ಲಿ ನಾಟಕ ಪ್ರದರ್ಶನಕ್ಕೆ ಹೋಗುತ್ತಿದ್ದು, ಇವರಿಗೆ ಕಲೆಯೇ ಜೀವನಾಧಾರ, ಆದರೆ ಕಳೆದ ಎರಡು ವರ್ಷಗಳಿಂದ ಕೊರೊನಾ ಮಹಾಮಾರಿ ಕಲಾವಿದರ ಪಾಲಿಗೆ ಅಕ್ಷರಶಃ ಕಣ್ಣೀರು ತರಿಸಿದೆ. ಕಳೆದ ಬಾರಿಯೂ ಕೆಲಸವಿಲ್ಲದೆ ಕಲಾವಿದರು ಅತಂತ್ರರಾಗಿದ್ದರು. ನಮಗೆ ನಾಟಕ ಪ್ರದರ್ಶನಕ್ಕೆ ಅವಕಾಶ ಕೊಡಿ, ನಾವು ಕೋವಿಡ್ ನಿಯಮಾವಳಿಯಂತೆಯೇ ಪ್ರದರ್ಶನ ನೀಡುತ್ತೇವೆ. ನಮಗೆ ಬದುಕಲು ಅವಕಾಶ ಕೊಡಿ ಅಂತ ಗೋಗರೆದಿದ್ದಾರೆ.

ಒಟ್ಟಿನಲ್ಲಿ ಸರ್ಕಾರ ರಾಜ್ಯದಲ್ಲಿ ಓಮಿಕ್ರಾನ್ ಹಾವಳಿ ಹಿನ್ನೆಲೆಯಲ್ಲಿ ಜಾತ್ರೆಗಳನ್ನ ರದ್ದುಪಡಿಸಿದಂತೆ ಇತ್ತ ಬಾದಾಮಿ ಜಾತ್ರೆ ಸಹ ರದ್ದಾಗಿದ್ದು, ಇವುಗಳ ಮಧ್ಯೆ ನಾಟಕ ಪ್ರದರ್ಶನಕ್ಕೆ ಅವಕಾಶ ಕೊಡಿ ಅಂತ ಕಲಾವಿದರು ಗೋಗರೆಯುತ್ತಿದ್ದಾರೆ. ಇತ್ತ ಕೊರೊನಾ ನಿಯಮಾವಳಿ ಪಾಲನೆ ಜೊತೆಗೆ ಜಿಲ್ಲಾಡಳಿತ ಕಲೆ ,ನಾಟಕ ಪ್ರದರ್ಶನಕ್ಕೆ ಅವಕಾಶ ಕೊಡುತ್ತಾ ಅಂತ ಕಾದು ನೋಡಬೇಕಿದೆ.
 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್