ನಾಟಕಗಳು ಶುರು ಮಾಡಿದ್ರೂ ನೋಡಲು ಬರುತ್ತಿಲ್ಲ ಜನರು,  ಕಂಪನಿಗಳು ಕಂಗಾಲು!

ನಾಟಕಗಳು ಶುರು ಮಾಡಿದ್ರೂ ನೋಡಲು ಬರುತ್ತಿಲ್ಲ ಜನರು, ಕಂಪನಿಗಳು ಕಂಗಾಲು!

Suvarna News   | Asianet News
Published : Nov 19, 2021, 11:28 AM ISTUpdated : Nov 19, 2021, 12:20 PM IST

- ಅಳಿವಿನ ಅಂಚಿನತ್ತ ಸಾಗಿದೆ ವೃತ್ತಿರಂಗಭೂಮಿ

- ಕೊರೋನಾ ಇಳಿಕೆಯಾದರೂ ನಾಟಕ ಕಂಪನಿಗಳು ಕಂಗಾಲು!

- ಊಟ, ವಸತಿ ಹಾಗೂ ಸಂಬಳ ನೀಡಲೂ ಹಣವಿಲ್ಲದ ದುಸ್ಥಿತಿ
 

ಬೆಂಗಳೂರು (ನ. 19): ಇಂದಿನ ಆಧುನಿಕ ಯುಗದಲ್ಲಿ ಮೊದಲೇ ಪ್ರೇಕ್ಷಕರ ಕೊರತೆ ಎದುರಿಸುತ್ತಿದ್ದ ನಾಟಕ ಕಂಪನಿಗಳು, ಕೊರೋನಾ ಬಂದ ಬಳಿಕ ನಾಟಕಗಳ ಪ್ರದರ್ಶನವೇ ಇಲ್ಲದಂತೆ ಆಗಿತ್ತು. ಇದೀಗ ನಾಟಕಗಳ ಪ್ರದರ್ಶನಕ್ಕೆ ಸರ್ಕಾರ ಅನುಮತಿ ನೀಡಿದೆ. ಇನ್ನಾದರೂ ನಮ್ಮ ಬದಕು ಸರಿಹೋಗುತ್ತೆ ಎಂದು ತಿಳಿದಿದ್ದ ನಾಟಕ ಕಂಪನಿಗಳ ಮಾಲೀಕರು ಮತ್ತು ಕಲಾವಿದರಿಗೆ ನಿರಾಸೆಯಾಗಿದೆ. ನಿರೀಕ್ಷಿತ ಮಟ್ಟದಲ್ಲಿ ಪ್ರೇಕ್ಷಕರು ಬಾರದೇ ನಾಟಕ ಕಂಪನಿ ಮಾಲೀಕರು ಮತ್ತು ಕಲಾವಿದರು ಪರದಾಡುವಂತಹ ಸ್ಥಿತಿ ಮುಂದುವರಿದಿದೆ.

ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಕಲಬುರಗಿ ಮುಖ್ಯರಸ್ತೆಗೆ ಹೊಂದಿಕೊ೦ಡಿರುವ ಅನ್ನದಾನಗೌಡ ಬಯ್ಯಾಪೂರ ಆಸ್ಪತ್ರೆ ಮುಂಭಾಗದಲ್ಲಿ ನಾಟ್ಯ ಸಂಘವೊ೦ದು ಠಿಕಾಣಿ ಹೂಡಿದ್ದು ಹವ್ಯಾಸಿ, ಸಾಂಸಾರಿಕ ಹಾಗೂ ಸಾಮಾಜಿಕ ನಾಟಕಗಳ ಪ್ರದರ್ಶನ ನಡೆಯುತ್ತಿದೆ. ಮೂಲತಃ ಕಲಬುರಗಿ ಜಿಲ್ಲೆಯ ಜೇವರ್ಗಿಯವರಾದ ರಾಜಣ್ಣ ರಂಗಭೂಮಿಕಲಾವಿದರು. ನಾಟಕ ಸಾಹಿತ್ಯ ಬರೆಯುತ್ತ ನಿರ್ದೇಶನ ಮಾಡುತ್ತ ರಂಗಭೂಮಿಯಲ್ಲೇ ಬದುಕು ಕಟ್ಟಿಕೊಂಡವರು. ಸದ್ಯ ರಾಜಣ್ಣ ಜೇವರ್ಗಿಯವರ ಇಡೀ ಕುಟುಂಬವೇ ರಂಗಭೂಮಿ ಕಲೆಗೆ ಜೀವನ ಮುಡಿಪಾಗಿಟ್ಟಿದೆ. ಒಟ್ಟಿನಲ್ಲಿ ಕೊರೊನಾ ಬಳಿಕ ಕಲಾವಿದರೂ ನಾಟಕಗಳು ಶುರು ಮಾಡಿದ್ದಾರೆ. ಆದ್ರೆ ಜನರು ಮಾತ್ರ ನಾಟಕ ಕಂಪನಿಗಳ ಕಡೆಗೆ ಮುಖ ಮಾಡುತ್ತಿಲ್ಲ. ಅತ್ತ ಪ್ರೇಕ್ಷಕರು ಇಲ್ಲದೆ ಇತ್ತ ಸರ್ಕಾರದ ಸಹಾಯವೂ ಇಲ್ಲದೆ ನಾಟಕ ಕಂಪನಿಗಳು ಹಾಗೂ ರಂಗಭೂಮಿ ಕಲಾವಿದರೂ ಕಂಗಾಲಾಗಿದ್ದಾರೆ. ಹೀಗಾಗಿ ಇನ್ನಾದ್ರೂ ಸರ್ಕಾರಗಳು ರಂಗಭೂಮಿ ಉಳಿವಿಗೆ ಮುಂದಾಗಬೇಕಿದೆ..
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more