ನಾಟಕಗಳು ಶುರು ಮಾಡಿದ್ರೂ ನೋಡಲು ಬರುತ್ತಿಲ್ಲ ಜನರು,  ಕಂಪನಿಗಳು ಕಂಗಾಲು!

ನಾಟಕಗಳು ಶುರು ಮಾಡಿದ್ರೂ ನೋಡಲು ಬರುತ್ತಿಲ್ಲ ಜನರು, ಕಂಪನಿಗಳು ಕಂಗಾಲು!

Suvarna News   | Asianet News
Published : Nov 19, 2021, 11:28 AM ISTUpdated : Nov 19, 2021, 12:20 PM IST

- ಅಳಿವಿನ ಅಂಚಿನತ್ತ ಸಾಗಿದೆ ವೃತ್ತಿರಂಗಭೂಮಿ

- ಕೊರೋನಾ ಇಳಿಕೆಯಾದರೂ ನಾಟಕ ಕಂಪನಿಗಳು ಕಂಗಾಲು!

- ಊಟ, ವಸತಿ ಹಾಗೂ ಸಂಬಳ ನೀಡಲೂ ಹಣವಿಲ್ಲದ ದುಸ್ಥಿತಿ
 

ಬೆಂಗಳೂರು (ನ. 19): ಇಂದಿನ ಆಧುನಿಕ ಯುಗದಲ್ಲಿ ಮೊದಲೇ ಪ್ರೇಕ್ಷಕರ ಕೊರತೆ ಎದುರಿಸುತ್ತಿದ್ದ ನಾಟಕ ಕಂಪನಿಗಳು, ಕೊರೋನಾ ಬಂದ ಬಳಿಕ ನಾಟಕಗಳ ಪ್ರದರ್ಶನವೇ ಇಲ್ಲದಂತೆ ಆಗಿತ್ತು. ಇದೀಗ ನಾಟಕಗಳ ಪ್ರದರ್ಶನಕ್ಕೆ ಸರ್ಕಾರ ಅನುಮತಿ ನೀಡಿದೆ. ಇನ್ನಾದರೂ ನಮ್ಮ ಬದಕು ಸರಿಹೋಗುತ್ತೆ ಎಂದು ತಿಳಿದಿದ್ದ ನಾಟಕ ಕಂಪನಿಗಳ ಮಾಲೀಕರು ಮತ್ತು ಕಲಾವಿದರಿಗೆ ನಿರಾಸೆಯಾಗಿದೆ. ನಿರೀಕ್ಷಿತ ಮಟ್ಟದಲ್ಲಿ ಪ್ರೇಕ್ಷಕರು ಬಾರದೇ ನಾಟಕ ಕಂಪನಿ ಮಾಲೀಕರು ಮತ್ತು ಕಲಾವಿದರು ಪರದಾಡುವಂತಹ ಸ್ಥಿತಿ ಮುಂದುವರಿದಿದೆ.

ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಕಲಬುರಗಿ ಮುಖ್ಯರಸ್ತೆಗೆ ಹೊಂದಿಕೊ೦ಡಿರುವ ಅನ್ನದಾನಗೌಡ ಬಯ್ಯಾಪೂರ ಆಸ್ಪತ್ರೆ ಮುಂಭಾಗದಲ್ಲಿ ನಾಟ್ಯ ಸಂಘವೊ೦ದು ಠಿಕಾಣಿ ಹೂಡಿದ್ದು ಹವ್ಯಾಸಿ, ಸಾಂಸಾರಿಕ ಹಾಗೂ ಸಾಮಾಜಿಕ ನಾಟಕಗಳ ಪ್ರದರ್ಶನ ನಡೆಯುತ್ತಿದೆ. ಮೂಲತಃ ಕಲಬುರಗಿ ಜಿಲ್ಲೆಯ ಜೇವರ್ಗಿಯವರಾದ ರಾಜಣ್ಣ ರಂಗಭೂಮಿಕಲಾವಿದರು. ನಾಟಕ ಸಾಹಿತ್ಯ ಬರೆಯುತ್ತ ನಿರ್ದೇಶನ ಮಾಡುತ್ತ ರಂಗಭೂಮಿಯಲ್ಲೇ ಬದುಕು ಕಟ್ಟಿಕೊಂಡವರು. ಸದ್ಯ ರಾಜಣ್ಣ ಜೇವರ್ಗಿಯವರ ಇಡೀ ಕುಟುಂಬವೇ ರಂಗಭೂಮಿ ಕಲೆಗೆ ಜೀವನ ಮುಡಿಪಾಗಿಟ್ಟಿದೆ. ಒಟ್ಟಿನಲ್ಲಿ ಕೊರೊನಾ ಬಳಿಕ ಕಲಾವಿದರೂ ನಾಟಕಗಳು ಶುರು ಮಾಡಿದ್ದಾರೆ. ಆದ್ರೆ ಜನರು ಮಾತ್ರ ನಾಟಕ ಕಂಪನಿಗಳ ಕಡೆಗೆ ಮುಖ ಮಾಡುತ್ತಿಲ್ಲ. ಅತ್ತ ಪ್ರೇಕ್ಷಕರು ಇಲ್ಲದೆ ಇತ್ತ ಸರ್ಕಾರದ ಸಹಾಯವೂ ಇಲ್ಲದೆ ನಾಟಕ ಕಂಪನಿಗಳು ಹಾಗೂ ರಂಗಭೂಮಿ ಕಲಾವಿದರೂ ಕಂಗಾಲಾಗಿದ್ದಾರೆ. ಹೀಗಾಗಿ ಇನ್ನಾದ್ರೂ ಸರ್ಕಾರಗಳು ರಂಗಭೂಮಿ ಉಳಿವಿಗೆ ಮುಂದಾಗಬೇಕಿದೆ..
 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more