ನಾಟಕಗಳು ಶುರು ಮಾಡಿದ್ರೂ ನೋಡಲು ಬರುತ್ತಿಲ್ಲ ಜನರು,  ಕಂಪನಿಗಳು ಕಂಗಾಲು!

ನಾಟಕಗಳು ಶುರು ಮಾಡಿದ್ರೂ ನೋಡಲು ಬರುತ್ತಿಲ್ಲ ಜನರು, ಕಂಪನಿಗಳು ಕಂಗಾಲು!

Suvarna News   | Asianet News
Published : Nov 19, 2021, 11:28 AM ISTUpdated : Nov 19, 2021, 12:20 PM IST

- ಅಳಿವಿನ ಅಂಚಿನತ್ತ ಸಾಗಿದೆ ವೃತ್ತಿರಂಗಭೂಮಿ

- ಕೊರೋನಾ ಇಳಿಕೆಯಾದರೂ ನಾಟಕ ಕಂಪನಿಗಳು ಕಂಗಾಲು!

- ಊಟ, ವಸತಿ ಹಾಗೂ ಸಂಬಳ ನೀಡಲೂ ಹಣವಿಲ್ಲದ ದುಸ್ಥಿತಿ
 

ಬೆಂಗಳೂರು (ನ. 19): ಇಂದಿನ ಆಧುನಿಕ ಯುಗದಲ್ಲಿ ಮೊದಲೇ ಪ್ರೇಕ್ಷಕರ ಕೊರತೆ ಎದುರಿಸುತ್ತಿದ್ದ ನಾಟಕ ಕಂಪನಿಗಳು, ಕೊರೋನಾ ಬಂದ ಬಳಿಕ ನಾಟಕಗಳ ಪ್ರದರ್ಶನವೇ ಇಲ್ಲದಂತೆ ಆಗಿತ್ತು. ಇದೀಗ ನಾಟಕಗಳ ಪ್ರದರ್ಶನಕ್ಕೆ ಸರ್ಕಾರ ಅನುಮತಿ ನೀಡಿದೆ. ಇನ್ನಾದರೂ ನಮ್ಮ ಬದಕು ಸರಿಹೋಗುತ್ತೆ ಎಂದು ತಿಳಿದಿದ್ದ ನಾಟಕ ಕಂಪನಿಗಳ ಮಾಲೀಕರು ಮತ್ತು ಕಲಾವಿದರಿಗೆ ನಿರಾಸೆಯಾಗಿದೆ. ನಿರೀಕ್ಷಿತ ಮಟ್ಟದಲ್ಲಿ ಪ್ರೇಕ್ಷಕರು ಬಾರದೇ ನಾಟಕ ಕಂಪನಿ ಮಾಲೀಕರು ಮತ್ತು ಕಲಾವಿದರು ಪರದಾಡುವಂತಹ ಸ್ಥಿತಿ ಮುಂದುವರಿದಿದೆ.

ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಕಲಬುರಗಿ ಮುಖ್ಯರಸ್ತೆಗೆ ಹೊಂದಿಕೊ೦ಡಿರುವ ಅನ್ನದಾನಗೌಡ ಬಯ್ಯಾಪೂರ ಆಸ್ಪತ್ರೆ ಮುಂಭಾಗದಲ್ಲಿ ನಾಟ್ಯ ಸಂಘವೊ೦ದು ಠಿಕಾಣಿ ಹೂಡಿದ್ದು ಹವ್ಯಾಸಿ, ಸಾಂಸಾರಿಕ ಹಾಗೂ ಸಾಮಾಜಿಕ ನಾಟಕಗಳ ಪ್ರದರ್ಶನ ನಡೆಯುತ್ತಿದೆ. ಮೂಲತಃ ಕಲಬುರಗಿ ಜಿಲ್ಲೆಯ ಜೇವರ್ಗಿಯವರಾದ ರಾಜಣ್ಣ ರಂಗಭೂಮಿಕಲಾವಿದರು. ನಾಟಕ ಸಾಹಿತ್ಯ ಬರೆಯುತ್ತ ನಿರ್ದೇಶನ ಮಾಡುತ್ತ ರಂಗಭೂಮಿಯಲ್ಲೇ ಬದುಕು ಕಟ್ಟಿಕೊಂಡವರು. ಸದ್ಯ ರಾಜಣ್ಣ ಜೇವರ್ಗಿಯವರ ಇಡೀ ಕುಟುಂಬವೇ ರಂಗಭೂಮಿ ಕಲೆಗೆ ಜೀವನ ಮುಡಿಪಾಗಿಟ್ಟಿದೆ. ಒಟ್ಟಿನಲ್ಲಿ ಕೊರೊನಾ ಬಳಿಕ ಕಲಾವಿದರೂ ನಾಟಕಗಳು ಶುರು ಮಾಡಿದ್ದಾರೆ. ಆದ್ರೆ ಜನರು ಮಾತ್ರ ನಾಟಕ ಕಂಪನಿಗಳ ಕಡೆಗೆ ಮುಖ ಮಾಡುತ್ತಿಲ್ಲ. ಅತ್ತ ಪ್ರೇಕ್ಷಕರು ಇಲ್ಲದೆ ಇತ್ತ ಸರ್ಕಾರದ ಸಹಾಯವೂ ಇಲ್ಲದೆ ನಾಟಕ ಕಂಪನಿಗಳು ಹಾಗೂ ರಂಗಭೂಮಿ ಕಲಾವಿದರೂ ಕಂಗಾಲಾಗಿದ್ದಾರೆ. ಹೀಗಾಗಿ ಇನ್ನಾದ್ರೂ ಸರ್ಕಾರಗಳು ರಂಗಭೂಮಿ ಉಳಿವಿಗೆ ಮುಂದಾಗಬೇಕಿದೆ..
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more