ದೈವ ಸನ್ನಿಧಿಯಲ್ಲಿ ಮತ್ತೊಂದು ಪವಾಡ: 24 ಗಂಟೆಯೊಳಗೆ ಕಳ್ಳನನ್ನು ಹುಡುಕಿಕೊಟ್ಟ ಬಬ್ಬು ಸ್ವಾಮಿ ದೈವ!

ದೈವ ಸನ್ನಿಧಿಯಲ್ಲಿ ಮತ್ತೊಂದು ಪವಾಡ: 24 ಗಂಟೆಯೊಳಗೆ ಕಳ್ಳನನ್ನು ಹುಡುಕಿಕೊಟ್ಟ ಬಬ್ಬು ಸ್ವಾಮಿ ದೈವ!

Published : Jul 13, 2024, 03:41 PM IST

ಉಡುಪಿಯ ದೈವ ಸನ್ನಿಧಿಯಲ್ಲಿ ಪವಾಡವೊಂದು ನಡೆದಿದ್ದು, 24 ಗಂಟೆಯೊಳಗೆ ಕಳ್ಳನನ್ನು ಹುಡುಕಿ ಕೊಡುವುದಾಗಿ ದೈವ ಅಭಯ ನೀಡಿತ್ತು. ಅದರಂತೆ ಇದೀಗ ಕಳ್ಳ ಸಿಕ್ಕಿಬಿದ್ದಿದ್ದಾನೆ.

ಉಡುಪಿ: ದೈವ ಸನ್ನಿಧಿಯಲ್ಲಿ ಮತ್ತೊಂದು ಪವಾಡ ನಡೆದಿದೆ. ಉಡುಪಿಯ(Udupi) ಚಿಟ್ಪಾಡಿ ಕಸ್ತೂರಬಾ ನಗರ ಬಬ್ಬು ಸ್ವಾಮಿ(Babbu swamy) ಸನ್ನಿಧಾನ ಈ ಘಟನೆ ನಡೆದಿದೆ. 24 ಗಂಟೆಯೊಳಗೆ ಕಳ್ಳನನ್ನು(Theft) ದೈವ ಹುಡುಕಿಕೊಟ್ಟಿದೆ. ಜು.4 ರ ನಡುರಾತ್ರಿ ದೈವಸ್ಥಾನದ ಕಾಣಿಕೆ ಡಬ್ಬಿ ಒಡೆದು ಕಳ್ಳತನ ಮಾಡಲಾಗಿತ್ತು. ಜು.5 ಕಳ್ಳತನ ಪ್ರಕರಣ ಬೆಳಕಿಗೆ ಬಂದಿತ್ತು. ಕಳ್ಳತನ ಬೆಳಕಿಗೆ ಬರುತ್ತಿದ್ದಂತೆ ಭಕ್ತರಿಂದ ಸಾಮೂಹಿಕ ಪ್ರಾರ್ಥನೆ ಮಾಡಲಾಗಿತ್ತು. ಸನ್ನಿಧಾನದಲ್ಲಿ ಕಳ್ಳತನ ಮಾಡಿದರೆ ಅಪಚಾರವಾಗುವುದಿಲ್ಲವೇ ಎಂದು ದೈವಕ್ಕೆ ಪ್ರಶ್ನೆ? ಇಡಲಾಗಿತ್ತು. ಊರಿನ ಸಂಕಷ್ಟ ಬಗೆಹರಿಸುವ ದೈವ ಸನ್ನಿಧಾನದಲ್ಲಿ ಕಳ್ಳತನವಾಗಿದ್ದಕ್ಕೆ ಬೇಸರವಾಗಿದ್ದು, 24 ಗಂಟೆಯೊಳಗೆ ಕಳ್ಳನನ್ನು ಹುಡುಕಿ ಕೊಡುವುದಾಗಿ ದೈವ ಅಭಯ ನೀಡಿತ್ತು. ಜು. 6ರ ಬೆಳಗ್ಗೆ ಕಳ್ಳ ಪತ್ತೆಯಾಗಿದ್ದು, ನಗರದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಲಗಿದ್ದ. ಬಸ್ ನಿಲ್ದಾಣ ಪರಿಸರದಲ್ಲಿ ಆಟೋ ಚಾಲಕನಿಂದ ಗುರುತು ಪತ್ತೆಯಾಗಿದೆ. ಸಿಸಿಟಿವಿಯಲ್ಲಿ ಕಳ್ಳನ ವಿಡಿಯೋ ನೋಡಿದ್ದ ಆಟೋ ಚಾಲಕ, ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಬಾಗಲಕೋಟೆ ಮೂಲದ ಮುದುಕಪ್ಪ ಪೊಲೀಸರಿಗೆ ಸೆರೆಯಾದ ಕಳ್ಳ. ಬೆಳಗ್ಗೆ ಎಂಟು ಗಂಟೆಯಾದರೂ ಮಂಪರಿನಲ್ಲಿ ಮಲಗಿದ್ದ ಕಳ್ಳ, ಕೊನೆಗೂ ಬಬ್ಬು ಸ್ವಾಮಿ ದೈವ ಮಾತು ಉಳಿಸಿಕೊಂಡಿದೆ. ದೈವದ ಕಾರ್ಣಿಕಕ್ಕೆ ಭಕ್ತರು ಅಚ್ಚರಿಗೊಂಡಿದ್ದಾರೆ. 

ಇದನ್ನೂ ವೀಕ್ಷಿಸಿ:  Bengaluru News: ಆಟೋ ಚಾಲಕನಿಂದ ರ್‍ಯಾಶ್ ಡ್ರೈವಿಂಗ್‌: ಬೈಕ್‌,ಪಾದಚಾರಿಗೆ ಗುದ್ದಿ ಎಸ್ಕೇಪ್‌..ವಿಡಿಯೋ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more