ದೈವ ಸನ್ನಿಧಿಯಲ್ಲಿ ಮತ್ತೊಂದು ಪವಾಡ: 24 ಗಂಟೆಯೊಳಗೆ ಕಳ್ಳನನ್ನು ಹುಡುಕಿಕೊಟ್ಟ ಬಬ್ಬು ಸ್ವಾಮಿ ದೈವ!

ದೈವ ಸನ್ನಿಧಿಯಲ್ಲಿ ಮತ್ತೊಂದು ಪವಾಡ: 24 ಗಂಟೆಯೊಳಗೆ ಕಳ್ಳನನ್ನು ಹುಡುಕಿಕೊಟ್ಟ ಬಬ್ಬು ಸ್ವಾಮಿ ದೈವ!

Published : Jul 13, 2024, 03:41 PM IST

ಉಡುಪಿಯ ದೈವ ಸನ್ನಿಧಿಯಲ್ಲಿ ಪವಾಡವೊಂದು ನಡೆದಿದ್ದು, 24 ಗಂಟೆಯೊಳಗೆ ಕಳ್ಳನನ್ನು ಹುಡುಕಿ ಕೊಡುವುದಾಗಿ ದೈವ ಅಭಯ ನೀಡಿತ್ತು. ಅದರಂತೆ ಇದೀಗ ಕಳ್ಳ ಸಿಕ್ಕಿಬಿದ್ದಿದ್ದಾನೆ.

ಉಡುಪಿ: ದೈವ ಸನ್ನಿಧಿಯಲ್ಲಿ ಮತ್ತೊಂದು ಪವಾಡ ನಡೆದಿದೆ. ಉಡುಪಿಯ(Udupi) ಚಿಟ್ಪಾಡಿ ಕಸ್ತೂರಬಾ ನಗರ ಬಬ್ಬು ಸ್ವಾಮಿ(Babbu swamy) ಸನ್ನಿಧಾನ ಈ ಘಟನೆ ನಡೆದಿದೆ. 24 ಗಂಟೆಯೊಳಗೆ ಕಳ್ಳನನ್ನು(Theft) ದೈವ ಹುಡುಕಿಕೊಟ್ಟಿದೆ. ಜು.4 ರ ನಡುರಾತ್ರಿ ದೈವಸ್ಥಾನದ ಕಾಣಿಕೆ ಡಬ್ಬಿ ಒಡೆದು ಕಳ್ಳತನ ಮಾಡಲಾಗಿತ್ತು. ಜು.5 ಕಳ್ಳತನ ಪ್ರಕರಣ ಬೆಳಕಿಗೆ ಬಂದಿತ್ತು. ಕಳ್ಳತನ ಬೆಳಕಿಗೆ ಬರುತ್ತಿದ್ದಂತೆ ಭಕ್ತರಿಂದ ಸಾಮೂಹಿಕ ಪ್ರಾರ್ಥನೆ ಮಾಡಲಾಗಿತ್ತು. ಸನ್ನಿಧಾನದಲ್ಲಿ ಕಳ್ಳತನ ಮಾಡಿದರೆ ಅಪಚಾರವಾಗುವುದಿಲ್ಲವೇ ಎಂದು ದೈವಕ್ಕೆ ಪ್ರಶ್ನೆ? ಇಡಲಾಗಿತ್ತು. ಊರಿನ ಸಂಕಷ್ಟ ಬಗೆಹರಿಸುವ ದೈವ ಸನ್ನಿಧಾನದಲ್ಲಿ ಕಳ್ಳತನವಾಗಿದ್ದಕ್ಕೆ ಬೇಸರವಾಗಿದ್ದು, 24 ಗಂಟೆಯೊಳಗೆ ಕಳ್ಳನನ್ನು ಹುಡುಕಿ ಕೊಡುವುದಾಗಿ ದೈವ ಅಭಯ ನೀಡಿತ್ತು. ಜು. 6ರ ಬೆಳಗ್ಗೆ ಕಳ್ಳ ಪತ್ತೆಯಾಗಿದ್ದು, ನಗರದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಲಗಿದ್ದ. ಬಸ್ ನಿಲ್ದಾಣ ಪರಿಸರದಲ್ಲಿ ಆಟೋ ಚಾಲಕನಿಂದ ಗುರುತು ಪತ್ತೆಯಾಗಿದೆ. ಸಿಸಿಟಿವಿಯಲ್ಲಿ ಕಳ್ಳನ ವಿಡಿಯೋ ನೋಡಿದ್ದ ಆಟೋ ಚಾಲಕ, ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಬಾಗಲಕೋಟೆ ಮೂಲದ ಮುದುಕಪ್ಪ ಪೊಲೀಸರಿಗೆ ಸೆರೆಯಾದ ಕಳ್ಳ. ಬೆಳಗ್ಗೆ ಎಂಟು ಗಂಟೆಯಾದರೂ ಮಂಪರಿನಲ್ಲಿ ಮಲಗಿದ್ದ ಕಳ್ಳ, ಕೊನೆಗೂ ಬಬ್ಬು ಸ್ವಾಮಿ ದೈವ ಮಾತು ಉಳಿಸಿಕೊಂಡಿದೆ. ದೈವದ ಕಾರ್ಣಿಕಕ್ಕೆ ಭಕ್ತರು ಅಚ್ಚರಿಗೊಂಡಿದ್ದಾರೆ. 

ಇದನ್ನೂ ವೀಕ್ಷಿಸಿ:  Bengaluru News: ಆಟೋ ಚಾಲಕನಿಂದ ರ್‍ಯಾಶ್ ಡ್ರೈವಿಂಗ್‌: ಬೈಕ್‌,ಪಾದಚಾರಿಗೆ ಗುದ್ದಿ ಎಸ್ಕೇಪ್‌..ವಿಡಿಯೋ

24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
Read more