ಅಭಿವೃದ್ಧಿ ವಿಚಾರದಲ್ಲಿ ಸರ್ಕಾರದ ವಿರುದ್ಧ ಸಮರಕ್ಕೆ ಬಿಜೆಪಿ ಸಿದ್ಧ! ಇಂದು ಸಭೆ

ಅಭಿವೃದ್ಧಿ ವಿಚಾರದಲ್ಲಿ ಸರ್ಕಾರದ ವಿರುದ್ಧ ಸಮರಕ್ಕೆ ಬಿಜೆಪಿ ಸಿದ್ಧ! ಇಂದು ಸಭೆ

Published : May 24, 2024, 11:22 AM IST

ಸರ್ಕಾರದ ವಿರುದ್ಧ ಸಮರಕ್ಕೆ ಸಿದ್ಧವಾಗಿರುವ ಬಿಜೆಪಿ ಇಂದು ಈ ಸಂಬಂಧ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಭೆ ಆಯೋಜನೆ ಮಾಡಿದೆ.  ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಈ ಸಭೆ ಜರುಗಲಿದೆ. 

ಬೆಂಗಳೂರು ಅಭಿವೃದ್ಧಿ ಕುಂಠಿತ ಸಂಬಂಧ ಚರ್ಚೆ ನಡೆಯಲಿದ್ದು, ಸರ್ಕಾರದ ವಿರುದ್ಧ ಸಮರಕ್ಕೆ ಬಿಜೆಪಿ(BJP) ರೆಡಿಯಾಗಿದೆ. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಭೆ(Meeting) ಆಯೋಜನೆ ಮಾಡಲಾಗಿದ್ದು, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ(BY Vijayendra) ನೇತೃತ್ವದಲ್ಲಿ ಸಭೆ ಜರುಗಲಿದೆ. ಸರ್ಕಾರದ ಬ್ರ್ಯಾಂಡ್ ಬೆಂಗಳೂರು(Brand Bengaluru) ವಿಫಲ ಎಂದು ಬಿಜೆಪಿ ಆರೋಪ ಮಾಡುತ್ತಿದ್ದು, ಮಳೆಗಾಲಕ್ಕೆ(Rain) ಮುನ್ನೆಚ್ಚರಿಕೆ ಇಲ್ಲ ಎಂದು ಟೀಕೆ ಮಾಡಿದೆ. ಈ ಮೂಲಕ ಬಿಬಿಎಂಪಿ ಚುನಾವಣೆಗೆ ಮುನ್ನ ಜನರ ಗಮನ ಸೆಳೆಯಲು ಪ್ರಯತ್ನ ನಡೆಸುತ್ತಿದೆ ಎಂದು ತಿಳಿದುಬಂದಿದೆ. 
 
ಬ್ರಾಂಡ್ ಬೆಂಗಳೂರು ಘೋಷಣೆ ಮಾಡಿರುವ ರಾಜ್ಯ ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ ಮಾಡಲಿದೆ. ಅಲ್ಲದೆ  ಬ್ರಾಂಡ್ ಬೆಂಗಳೂರು ಕಾಮಗಾರಿ ಏನು..? ರಾಜ್ಯ ಸರ್ಕಾರ ಇಲ್ಲಿ ತನಕ ಏನು ಮಾಡಿದೆ‌  ? ಎಂಬ ಪ್ರಶ್ನೆಯನ್ನು ಹಾಕಲಿದ್ದು, ಟನಲ್ ನಿರ್ಮಾಣಕ್ಕೆ 36 ಸಾವಿರ ಕೋಟಿ ಮೀಸಲಿಟ್ಟಿದ್ದಕ್ಕೆ ಟೀಕೆ ಮಾಡಲು ಸಜ್ಜಾಗಿದೆ. ಅಂದರೆ ಇದು ಕಮಿಷನ್‌ಗಾಗಿ ಇಟ್ಟ ಹಣ ಎಂದು ಆರೋಪ ಮಾಡಿದೆ.  ಜೊತೆಗೆ ಬ್ರಾಂಡ್ ಬೆಂಗಳೂರು ಅಭಿವೃದ್ಧಿಗೆ ಶಾಸಕರನ್ನು ವಿಶ್ವಾಸಕ್ಕೆ ಪಡೆದಿಲ್ಲ ಎನ್ನುವ ಬಾಣವನ್ನೂ ಸಹ ಬಿಡಲಿದೆ ಬಿಜೆಪಿ.

ಇದನ್ನೂ ವೀಕ್ಷಿಸಿ:  Swati Maliwal Assault Case: ದೆಹಲಿ ಸಿಎಂ ಕೇಜ್ರಿವಾಲ್ ಆಪ್ತನಿಂದ ಹಲ್ಲೆ ಪ್ರಕರಣ: ಈ ಬಗ್ಗೆ ಸ್ವಾತಿ ಮಲಿವಾಲ ಹೇಳಿದ್ದೇನು..?

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more