ಬೆಂಗಳೂರು ರಸ್ತೆಗಿಳಿದ ಕ್ಯೂಟ್‌ ಟ್ಯಾಕ್ಸಿ, ಸಾರಿಗೆ ಇಲಾಖೆಯಿಂದಲೂ ಗ್ರೀನ್‌ ಸಿಗ್ನಲ್‌!

ಬೆಂಗಳೂರು ರಸ್ತೆಗಿಳಿದ ಕ್ಯೂಟ್‌ ಟ್ಯಾಕ್ಸಿ, ಸಾರಿಗೆ ಇಲಾಖೆಯಿಂದಲೂ ಗ್ರೀನ್‌ ಸಿಗ್ನಲ್‌!

Published : Apr 25, 2023, 06:27 PM IST

ಬೆಂಗಳೂರಿನಲ್ಲಿ ಪ್ರಯಾಣಿಕರಿಗೆ ಅನುಕೂಲ ಆಗುವಂತೆ ಹಳದಿ ಬಣ್ಣದ ಕ್ಯೂಟ್‌ ಟ್ಯಾಕ್ಸಿ ಸೇವೆಯು ಆರಂಭವಾಗಿದ್ದು, ಇದಕ್ಕೆ ಸಾರಿಗೆ ಇಲಾಖೆಯಿಂದಲೂ ಅನುಮತಿ ದೊರೆತಿದೆ.

ಬೆಂಗಳೂರು (ಏ.25): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರಯಾಣಿಕರಿಗೆ ಅನುಕೂಲ ಆಗುವಂತೆ ಟ್ಯಾಕ್ಸಿ ಸೇವೆ ಕಲ್ಪಿಸುತ್ತಿರುವ ಓಲಾ, ಉಬರ್‌ ಟ್ಯಾಕ್ಸಿ ಸೇವೆಯ ಜೊತೆಗೆ ಮತ್ತೊಂದು ಹೊಸದಾದ ಹಳದಿ ಬಣ್ಣದ ಕ್ಯೂಟ್‌ ಟ್ಯಾಕ್ಸಿ ಸೇವೆಯು ಆರಂಭವಾಗಿದೆ. ಇದಕ್ಕೆ ಸಾರಿಗೆ ಇಲಾಖೆಯಿಂದಲೂ ಅನುಮತಿ ನಿಡಿದ್ದು, ದರವನ್ನೂ ಕೂಡ ನಿಗದಿ ಮಾಡಿದೆ.

ಸಾರಿಗೆ ಇಲಾಖೆ ಅನುಮತಿ ಮೇರೆಗೆ ಹಳದಿ ಟ್ಯಾಕ್ಸಿ ರಸ್ತೆಗಿಳಿಯುತ್ತಿದೆ. ಸಾರಿಗೆ ಇಲಾಖೆಯು ಓಲಾ, ಊಬರ್ ನಂತೆ ಪ್ರತ್ಯೇಕ ಪ್ರಯಾಣ ದರ ‌ನಿಗದಿ ಮಾಡಿದೆ. ಪ್ರತಿ 1 ಕಿಲೋಮೀಟರ್ ಗೆ 16 ರೂ. ದರವನ್ನು ನಿಗದಿ ಮಾಡಲಾಗಿದೆ. ಇನ್ನು 4  ಕಿಲೋ ಮೀಟರ್‌ವರೆಗೆ ರೂ. 60 ರಷ್ಟು ಕನಿಷ್ಠ ದರ ನಿಗದಿ ಮಾಡಿ ಆದೇಶವನ್ನು ಹೊರಡಿಸಿದೆ. ಈ ಮೂಲಕ ಕೇವಲ ಮೂರ್ನಾಲ್ಕು ಕಿಲೋಮೀಟರ್‌ ಪ್ರಯಾಣದ ಸೇವೆಗೆ ನೂರಾರು ರೂ. ವಸೂಲಿ ಮಾಡುವ ಟ್ಯಾಕ್ಸಿಗಳಿಗೆ ಹೋಲಿಕೆ ಮಾಡಿದಲ್ಲಿ ಈ ಹೊಸ ಟ್ಯಾಕ್ಸಿಯ ದರ ಅತ್ಯಂತ ಕಡಿಮೆಯಾಗಿದೆ. ಇದನ್ನು ಪ್ರಯಾಣಿಕರ ಸ್ನೇಹಿ ಎಂದು ಹೇಳಲಾಗುತ್ತಿದೆ.

ಬಜಾಬ್‌ ಕಂಪನಿಯ ವಾಹನ: ನಾಲ್ಕು ಚಕ್ರದ ವಾಹನಗಳು ಮೀಟರ್ ಆಳವಡಿಕೆಯೊಂದಿಗೆ ರಸ್ತೆಗೆ ಇಳಿಯುತ್ತಿದೆ. ಬಜಾಬ್‌ ಕಂಪನಿಯ ಕ್ಯೂಟ್‌ (ಕ್ವಾಡ್ರಿ ಸೈಕಲ್‌) ವಾಹನಗಳು ನಗರದಲ್ಲಿ ಸೇವೆಯನ್ನು ಆರಂಭಿಸಲಿವೆ. ಕಾರು ಮಾದರಿಯ ಬಜಾಬ್‌ ಕ್ಯೂಟ್  ಕ್ವಾಡ್ರಿ ಸೈಕಲ್ ವಾಹನವು 2019 ರಲ್ಲೇ ಮಾರುಕಟ್ಟೆಗೆ ಬಂದಿದೆ. ಆದರೆ, ಹಲವು ವರ್ಷದಿಂದ ಬೆಂಗಳೂರಿನಲ್ಲಿ ಪ್ರಯಾಣಿಕರಿಗೆ ಸೇವೆಯನ್ನು ನೀಡಲು ಸಾರಿಗೆ ಇಲಾಖೆ ಅನುಮತಿ ನೀಡಿರಲಿಲ್ಲ. ಇದೀಗ ದರ ನಿಗದಿಪಡಿಸಿ ಸಾರ್ವಜನಿಕ ಸೇವೆಗೆ ಅನುಮತಿಯನ್ನು ನೀಡಿದೆ. ಆದ್ದರಿಂದ ಇಂದಿನಿಂದ ಕ್ಯೂಟ್‌ ಟ್ಯಾಕ್ಸಿ ಸಾರ್ವಜನಿಕರ ಸೇವೆಗೆ ಸಜ್ಜಾಗಿ ಆಗಮಿಸಿವೆ.

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more