ಬೆಂಗಳೂರು ರಸ್ತೆಗಿಳಿದ ಕ್ಯೂಟ್‌ ಟ್ಯಾಕ್ಸಿ, ಸಾರಿಗೆ ಇಲಾಖೆಯಿಂದಲೂ ಗ್ರೀನ್‌ ಸಿಗ್ನಲ್‌!

ಬೆಂಗಳೂರು ರಸ್ತೆಗಿಳಿದ ಕ್ಯೂಟ್‌ ಟ್ಯಾಕ್ಸಿ, ಸಾರಿಗೆ ಇಲಾಖೆಯಿಂದಲೂ ಗ್ರೀನ್‌ ಸಿಗ್ನಲ್‌!

Published : Apr 25, 2023, 06:27 PM IST

ಬೆಂಗಳೂರಿನಲ್ಲಿ ಪ್ರಯಾಣಿಕರಿಗೆ ಅನುಕೂಲ ಆಗುವಂತೆ ಹಳದಿ ಬಣ್ಣದ ಕ್ಯೂಟ್‌ ಟ್ಯಾಕ್ಸಿ ಸೇವೆಯು ಆರಂಭವಾಗಿದ್ದು, ಇದಕ್ಕೆ ಸಾರಿಗೆ ಇಲಾಖೆಯಿಂದಲೂ ಅನುಮತಿ ದೊರೆತಿದೆ.

ಬೆಂಗಳೂರು (ಏ.25): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರಯಾಣಿಕರಿಗೆ ಅನುಕೂಲ ಆಗುವಂತೆ ಟ್ಯಾಕ್ಸಿ ಸೇವೆ ಕಲ್ಪಿಸುತ್ತಿರುವ ಓಲಾ, ಉಬರ್‌ ಟ್ಯಾಕ್ಸಿ ಸೇವೆಯ ಜೊತೆಗೆ ಮತ್ತೊಂದು ಹೊಸದಾದ ಹಳದಿ ಬಣ್ಣದ ಕ್ಯೂಟ್‌ ಟ್ಯಾಕ್ಸಿ ಸೇವೆಯು ಆರಂಭವಾಗಿದೆ. ಇದಕ್ಕೆ ಸಾರಿಗೆ ಇಲಾಖೆಯಿಂದಲೂ ಅನುಮತಿ ನಿಡಿದ್ದು, ದರವನ್ನೂ ಕೂಡ ನಿಗದಿ ಮಾಡಿದೆ.

ಸಾರಿಗೆ ಇಲಾಖೆ ಅನುಮತಿ ಮೇರೆಗೆ ಹಳದಿ ಟ್ಯಾಕ್ಸಿ ರಸ್ತೆಗಿಳಿಯುತ್ತಿದೆ. ಸಾರಿಗೆ ಇಲಾಖೆಯು ಓಲಾ, ಊಬರ್ ನಂತೆ ಪ್ರತ್ಯೇಕ ಪ್ರಯಾಣ ದರ ‌ನಿಗದಿ ಮಾಡಿದೆ. ಪ್ರತಿ 1 ಕಿಲೋಮೀಟರ್ ಗೆ 16 ರೂ. ದರವನ್ನು ನಿಗದಿ ಮಾಡಲಾಗಿದೆ. ಇನ್ನು 4  ಕಿಲೋ ಮೀಟರ್‌ವರೆಗೆ ರೂ. 60 ರಷ್ಟು ಕನಿಷ್ಠ ದರ ನಿಗದಿ ಮಾಡಿ ಆದೇಶವನ್ನು ಹೊರಡಿಸಿದೆ. ಈ ಮೂಲಕ ಕೇವಲ ಮೂರ್ನಾಲ್ಕು ಕಿಲೋಮೀಟರ್‌ ಪ್ರಯಾಣದ ಸೇವೆಗೆ ನೂರಾರು ರೂ. ವಸೂಲಿ ಮಾಡುವ ಟ್ಯಾಕ್ಸಿಗಳಿಗೆ ಹೋಲಿಕೆ ಮಾಡಿದಲ್ಲಿ ಈ ಹೊಸ ಟ್ಯಾಕ್ಸಿಯ ದರ ಅತ್ಯಂತ ಕಡಿಮೆಯಾಗಿದೆ. ಇದನ್ನು ಪ್ರಯಾಣಿಕರ ಸ್ನೇಹಿ ಎಂದು ಹೇಳಲಾಗುತ್ತಿದೆ.

ಬಜಾಬ್‌ ಕಂಪನಿಯ ವಾಹನ: ನಾಲ್ಕು ಚಕ್ರದ ವಾಹನಗಳು ಮೀಟರ್ ಆಳವಡಿಕೆಯೊಂದಿಗೆ ರಸ್ತೆಗೆ ಇಳಿಯುತ್ತಿದೆ. ಬಜಾಬ್‌ ಕಂಪನಿಯ ಕ್ಯೂಟ್‌ (ಕ್ವಾಡ್ರಿ ಸೈಕಲ್‌) ವಾಹನಗಳು ನಗರದಲ್ಲಿ ಸೇವೆಯನ್ನು ಆರಂಭಿಸಲಿವೆ. ಕಾರು ಮಾದರಿಯ ಬಜಾಬ್‌ ಕ್ಯೂಟ್  ಕ್ವಾಡ್ರಿ ಸೈಕಲ್ ವಾಹನವು 2019 ರಲ್ಲೇ ಮಾರುಕಟ್ಟೆಗೆ ಬಂದಿದೆ. ಆದರೆ, ಹಲವು ವರ್ಷದಿಂದ ಬೆಂಗಳೂರಿನಲ್ಲಿ ಪ್ರಯಾಣಿಕರಿಗೆ ಸೇವೆಯನ್ನು ನೀಡಲು ಸಾರಿಗೆ ಇಲಾಖೆ ಅನುಮತಿ ನೀಡಿರಲಿಲ್ಲ. ಇದೀಗ ದರ ನಿಗದಿಪಡಿಸಿ ಸಾರ್ವಜನಿಕ ಸೇವೆಗೆ ಅನುಮತಿಯನ್ನು ನೀಡಿದೆ. ಆದ್ದರಿಂದ ಇಂದಿನಿಂದ ಕ್ಯೂಟ್‌ ಟ್ಯಾಕ್ಸಿ ಸಾರ್ವಜನಿಕರ ಸೇವೆಗೆ ಸಜ್ಜಾಗಿ ಆಗಮಿಸಿವೆ.

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more