ಬೆಂಗಳೂರು ರಸ್ತೆಗಿಳಿದ ಕ್ಯೂಟ್‌ ಟ್ಯಾಕ್ಸಿ, ಸಾರಿಗೆ ಇಲಾಖೆಯಿಂದಲೂ ಗ್ರೀನ್‌ ಸಿಗ್ನಲ್‌!

ಬೆಂಗಳೂರು ರಸ್ತೆಗಿಳಿದ ಕ್ಯೂಟ್‌ ಟ್ಯಾಕ್ಸಿ, ಸಾರಿಗೆ ಇಲಾಖೆಯಿಂದಲೂ ಗ್ರೀನ್‌ ಸಿಗ್ನಲ್‌!

Published : Apr 25, 2023, 06:27 PM IST

ಬೆಂಗಳೂರಿನಲ್ಲಿ ಪ್ರಯಾಣಿಕರಿಗೆ ಅನುಕೂಲ ಆಗುವಂತೆ ಹಳದಿ ಬಣ್ಣದ ಕ್ಯೂಟ್‌ ಟ್ಯಾಕ್ಸಿ ಸೇವೆಯು ಆರಂಭವಾಗಿದ್ದು, ಇದಕ್ಕೆ ಸಾರಿಗೆ ಇಲಾಖೆಯಿಂದಲೂ ಅನುಮತಿ ದೊರೆತಿದೆ.

ಬೆಂಗಳೂರು (ಏ.25): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರಯಾಣಿಕರಿಗೆ ಅನುಕೂಲ ಆಗುವಂತೆ ಟ್ಯಾಕ್ಸಿ ಸೇವೆ ಕಲ್ಪಿಸುತ್ತಿರುವ ಓಲಾ, ಉಬರ್‌ ಟ್ಯಾಕ್ಸಿ ಸೇವೆಯ ಜೊತೆಗೆ ಮತ್ತೊಂದು ಹೊಸದಾದ ಹಳದಿ ಬಣ್ಣದ ಕ್ಯೂಟ್‌ ಟ್ಯಾಕ್ಸಿ ಸೇವೆಯು ಆರಂಭವಾಗಿದೆ. ಇದಕ್ಕೆ ಸಾರಿಗೆ ಇಲಾಖೆಯಿಂದಲೂ ಅನುಮತಿ ನಿಡಿದ್ದು, ದರವನ್ನೂ ಕೂಡ ನಿಗದಿ ಮಾಡಿದೆ.

ಸಾರಿಗೆ ಇಲಾಖೆ ಅನುಮತಿ ಮೇರೆಗೆ ಹಳದಿ ಟ್ಯಾಕ್ಸಿ ರಸ್ತೆಗಿಳಿಯುತ್ತಿದೆ. ಸಾರಿಗೆ ಇಲಾಖೆಯು ಓಲಾ, ಊಬರ್ ನಂತೆ ಪ್ರತ್ಯೇಕ ಪ್ರಯಾಣ ದರ ‌ನಿಗದಿ ಮಾಡಿದೆ. ಪ್ರತಿ 1 ಕಿಲೋಮೀಟರ್ ಗೆ 16 ರೂ. ದರವನ್ನು ನಿಗದಿ ಮಾಡಲಾಗಿದೆ. ಇನ್ನು 4  ಕಿಲೋ ಮೀಟರ್‌ವರೆಗೆ ರೂ. 60 ರಷ್ಟು ಕನಿಷ್ಠ ದರ ನಿಗದಿ ಮಾಡಿ ಆದೇಶವನ್ನು ಹೊರಡಿಸಿದೆ. ಈ ಮೂಲಕ ಕೇವಲ ಮೂರ್ನಾಲ್ಕು ಕಿಲೋಮೀಟರ್‌ ಪ್ರಯಾಣದ ಸೇವೆಗೆ ನೂರಾರು ರೂ. ವಸೂಲಿ ಮಾಡುವ ಟ್ಯಾಕ್ಸಿಗಳಿಗೆ ಹೋಲಿಕೆ ಮಾಡಿದಲ್ಲಿ ಈ ಹೊಸ ಟ್ಯಾಕ್ಸಿಯ ದರ ಅತ್ಯಂತ ಕಡಿಮೆಯಾಗಿದೆ. ಇದನ್ನು ಪ್ರಯಾಣಿಕರ ಸ್ನೇಹಿ ಎಂದು ಹೇಳಲಾಗುತ್ತಿದೆ.

ಬಜಾಬ್‌ ಕಂಪನಿಯ ವಾಹನ: ನಾಲ್ಕು ಚಕ್ರದ ವಾಹನಗಳು ಮೀಟರ್ ಆಳವಡಿಕೆಯೊಂದಿಗೆ ರಸ್ತೆಗೆ ಇಳಿಯುತ್ತಿದೆ. ಬಜಾಬ್‌ ಕಂಪನಿಯ ಕ್ಯೂಟ್‌ (ಕ್ವಾಡ್ರಿ ಸೈಕಲ್‌) ವಾಹನಗಳು ನಗರದಲ್ಲಿ ಸೇವೆಯನ್ನು ಆರಂಭಿಸಲಿವೆ. ಕಾರು ಮಾದರಿಯ ಬಜಾಬ್‌ ಕ್ಯೂಟ್  ಕ್ವಾಡ್ರಿ ಸೈಕಲ್ ವಾಹನವು 2019 ರಲ್ಲೇ ಮಾರುಕಟ್ಟೆಗೆ ಬಂದಿದೆ. ಆದರೆ, ಹಲವು ವರ್ಷದಿಂದ ಬೆಂಗಳೂರಿನಲ್ಲಿ ಪ್ರಯಾಣಿಕರಿಗೆ ಸೇವೆಯನ್ನು ನೀಡಲು ಸಾರಿಗೆ ಇಲಾಖೆ ಅನುಮತಿ ನೀಡಿರಲಿಲ್ಲ. ಇದೀಗ ದರ ನಿಗದಿಪಡಿಸಿ ಸಾರ್ವಜನಿಕ ಸೇವೆಗೆ ಅನುಮತಿಯನ್ನು ನೀಡಿದೆ. ಆದ್ದರಿಂದ ಇಂದಿನಿಂದ ಕ್ಯೂಟ್‌ ಟ್ಯಾಕ್ಸಿ ಸಾರ್ವಜನಿಕರ ಸೇವೆಗೆ ಸಜ್ಜಾಗಿ ಆಗಮಿಸಿವೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more