ಬೆಂಗಳೂರು ರಸ್ತೆಗಿಳಿದ ಕ್ಯೂಟ್‌ ಟ್ಯಾಕ್ಸಿ, ಸಾರಿಗೆ ಇಲಾಖೆಯಿಂದಲೂ ಗ್ರೀನ್‌ ಸಿಗ್ನಲ್‌!

ಬೆಂಗಳೂರು ರಸ್ತೆಗಿಳಿದ ಕ್ಯೂಟ್‌ ಟ್ಯಾಕ್ಸಿ, ಸಾರಿಗೆ ಇಲಾಖೆಯಿಂದಲೂ ಗ್ರೀನ್‌ ಸಿಗ್ನಲ್‌!

Published : Apr 25, 2023, 06:27 PM IST

ಬೆಂಗಳೂರಿನಲ್ಲಿ ಪ್ರಯಾಣಿಕರಿಗೆ ಅನುಕೂಲ ಆಗುವಂತೆ ಹಳದಿ ಬಣ್ಣದ ಕ್ಯೂಟ್‌ ಟ್ಯಾಕ್ಸಿ ಸೇವೆಯು ಆರಂಭವಾಗಿದ್ದು, ಇದಕ್ಕೆ ಸಾರಿಗೆ ಇಲಾಖೆಯಿಂದಲೂ ಅನುಮತಿ ದೊರೆತಿದೆ.

ಬೆಂಗಳೂರು (ಏ.25): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರಯಾಣಿಕರಿಗೆ ಅನುಕೂಲ ಆಗುವಂತೆ ಟ್ಯಾಕ್ಸಿ ಸೇವೆ ಕಲ್ಪಿಸುತ್ತಿರುವ ಓಲಾ, ಉಬರ್‌ ಟ್ಯಾಕ್ಸಿ ಸೇವೆಯ ಜೊತೆಗೆ ಮತ್ತೊಂದು ಹೊಸದಾದ ಹಳದಿ ಬಣ್ಣದ ಕ್ಯೂಟ್‌ ಟ್ಯಾಕ್ಸಿ ಸೇವೆಯು ಆರಂಭವಾಗಿದೆ. ಇದಕ್ಕೆ ಸಾರಿಗೆ ಇಲಾಖೆಯಿಂದಲೂ ಅನುಮತಿ ನಿಡಿದ್ದು, ದರವನ್ನೂ ಕೂಡ ನಿಗದಿ ಮಾಡಿದೆ.

ಸಾರಿಗೆ ಇಲಾಖೆ ಅನುಮತಿ ಮೇರೆಗೆ ಹಳದಿ ಟ್ಯಾಕ್ಸಿ ರಸ್ತೆಗಿಳಿಯುತ್ತಿದೆ. ಸಾರಿಗೆ ಇಲಾಖೆಯು ಓಲಾ, ಊಬರ್ ನಂತೆ ಪ್ರತ್ಯೇಕ ಪ್ರಯಾಣ ದರ ‌ನಿಗದಿ ಮಾಡಿದೆ. ಪ್ರತಿ 1 ಕಿಲೋಮೀಟರ್ ಗೆ 16 ರೂ. ದರವನ್ನು ನಿಗದಿ ಮಾಡಲಾಗಿದೆ. ಇನ್ನು 4  ಕಿಲೋ ಮೀಟರ್‌ವರೆಗೆ ರೂ. 60 ರಷ್ಟು ಕನಿಷ್ಠ ದರ ನಿಗದಿ ಮಾಡಿ ಆದೇಶವನ್ನು ಹೊರಡಿಸಿದೆ. ಈ ಮೂಲಕ ಕೇವಲ ಮೂರ್ನಾಲ್ಕು ಕಿಲೋಮೀಟರ್‌ ಪ್ರಯಾಣದ ಸೇವೆಗೆ ನೂರಾರು ರೂ. ವಸೂಲಿ ಮಾಡುವ ಟ್ಯಾಕ್ಸಿಗಳಿಗೆ ಹೋಲಿಕೆ ಮಾಡಿದಲ್ಲಿ ಈ ಹೊಸ ಟ್ಯಾಕ್ಸಿಯ ದರ ಅತ್ಯಂತ ಕಡಿಮೆಯಾಗಿದೆ. ಇದನ್ನು ಪ್ರಯಾಣಿಕರ ಸ್ನೇಹಿ ಎಂದು ಹೇಳಲಾಗುತ್ತಿದೆ.

ಬಜಾಬ್‌ ಕಂಪನಿಯ ವಾಹನ: ನಾಲ್ಕು ಚಕ್ರದ ವಾಹನಗಳು ಮೀಟರ್ ಆಳವಡಿಕೆಯೊಂದಿಗೆ ರಸ್ತೆಗೆ ಇಳಿಯುತ್ತಿದೆ. ಬಜಾಬ್‌ ಕಂಪನಿಯ ಕ್ಯೂಟ್‌ (ಕ್ವಾಡ್ರಿ ಸೈಕಲ್‌) ವಾಹನಗಳು ನಗರದಲ್ಲಿ ಸೇವೆಯನ್ನು ಆರಂಭಿಸಲಿವೆ. ಕಾರು ಮಾದರಿಯ ಬಜಾಬ್‌ ಕ್ಯೂಟ್  ಕ್ವಾಡ್ರಿ ಸೈಕಲ್ ವಾಹನವು 2019 ರಲ್ಲೇ ಮಾರುಕಟ್ಟೆಗೆ ಬಂದಿದೆ. ಆದರೆ, ಹಲವು ವರ್ಷದಿಂದ ಬೆಂಗಳೂರಿನಲ್ಲಿ ಪ್ರಯಾಣಿಕರಿಗೆ ಸೇವೆಯನ್ನು ನೀಡಲು ಸಾರಿಗೆ ಇಲಾಖೆ ಅನುಮತಿ ನೀಡಿರಲಿಲ್ಲ. ಇದೀಗ ದರ ನಿಗದಿಪಡಿಸಿ ಸಾರ್ವಜನಿಕ ಸೇವೆಗೆ ಅನುಮತಿಯನ್ನು ನೀಡಿದೆ. ಆದ್ದರಿಂದ ಇಂದಿನಿಂದ ಕ್ಯೂಟ್‌ ಟ್ಯಾಕ್ಸಿ ಸಾರ್ವಜನಿಕರ ಸೇವೆಗೆ ಸಜ್ಜಾಗಿ ಆಗಮಿಸಿವೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more