ಬೆಂಗಳೂರು ರಸ್ತೆಗಿಳಿದ ಕ್ಯೂಟ್‌ ಟ್ಯಾಕ್ಸಿ, ಸಾರಿಗೆ ಇಲಾಖೆಯಿಂದಲೂ ಗ್ರೀನ್‌ ಸಿಗ್ನಲ್‌!

ಬೆಂಗಳೂರು ರಸ್ತೆಗಿಳಿದ ಕ್ಯೂಟ್‌ ಟ್ಯಾಕ್ಸಿ, ಸಾರಿಗೆ ಇಲಾಖೆಯಿಂದಲೂ ಗ್ರೀನ್‌ ಸಿಗ್ನಲ್‌!

Published : Apr 25, 2023, 06:27 PM IST

ಬೆಂಗಳೂರಿನಲ್ಲಿ ಪ್ರಯಾಣಿಕರಿಗೆ ಅನುಕೂಲ ಆಗುವಂತೆ ಹಳದಿ ಬಣ್ಣದ ಕ್ಯೂಟ್‌ ಟ್ಯಾಕ್ಸಿ ಸೇವೆಯು ಆರಂಭವಾಗಿದ್ದು, ಇದಕ್ಕೆ ಸಾರಿಗೆ ಇಲಾಖೆಯಿಂದಲೂ ಅನುಮತಿ ದೊರೆತಿದೆ.

ಬೆಂಗಳೂರು (ಏ.25): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರಯಾಣಿಕರಿಗೆ ಅನುಕೂಲ ಆಗುವಂತೆ ಟ್ಯಾಕ್ಸಿ ಸೇವೆ ಕಲ್ಪಿಸುತ್ತಿರುವ ಓಲಾ, ಉಬರ್‌ ಟ್ಯಾಕ್ಸಿ ಸೇವೆಯ ಜೊತೆಗೆ ಮತ್ತೊಂದು ಹೊಸದಾದ ಹಳದಿ ಬಣ್ಣದ ಕ್ಯೂಟ್‌ ಟ್ಯಾಕ್ಸಿ ಸೇವೆಯು ಆರಂಭವಾಗಿದೆ. ಇದಕ್ಕೆ ಸಾರಿಗೆ ಇಲಾಖೆಯಿಂದಲೂ ಅನುಮತಿ ನಿಡಿದ್ದು, ದರವನ್ನೂ ಕೂಡ ನಿಗದಿ ಮಾಡಿದೆ.

ಸಾರಿಗೆ ಇಲಾಖೆ ಅನುಮತಿ ಮೇರೆಗೆ ಹಳದಿ ಟ್ಯಾಕ್ಸಿ ರಸ್ತೆಗಿಳಿಯುತ್ತಿದೆ. ಸಾರಿಗೆ ಇಲಾಖೆಯು ಓಲಾ, ಊಬರ್ ನಂತೆ ಪ್ರತ್ಯೇಕ ಪ್ರಯಾಣ ದರ ‌ನಿಗದಿ ಮಾಡಿದೆ. ಪ್ರತಿ 1 ಕಿಲೋಮೀಟರ್ ಗೆ 16 ರೂ. ದರವನ್ನು ನಿಗದಿ ಮಾಡಲಾಗಿದೆ. ಇನ್ನು 4  ಕಿಲೋ ಮೀಟರ್‌ವರೆಗೆ ರೂ. 60 ರಷ್ಟು ಕನಿಷ್ಠ ದರ ನಿಗದಿ ಮಾಡಿ ಆದೇಶವನ್ನು ಹೊರಡಿಸಿದೆ. ಈ ಮೂಲಕ ಕೇವಲ ಮೂರ್ನಾಲ್ಕು ಕಿಲೋಮೀಟರ್‌ ಪ್ರಯಾಣದ ಸೇವೆಗೆ ನೂರಾರು ರೂ. ವಸೂಲಿ ಮಾಡುವ ಟ್ಯಾಕ್ಸಿಗಳಿಗೆ ಹೋಲಿಕೆ ಮಾಡಿದಲ್ಲಿ ಈ ಹೊಸ ಟ್ಯಾಕ್ಸಿಯ ದರ ಅತ್ಯಂತ ಕಡಿಮೆಯಾಗಿದೆ. ಇದನ್ನು ಪ್ರಯಾಣಿಕರ ಸ್ನೇಹಿ ಎಂದು ಹೇಳಲಾಗುತ್ತಿದೆ.

ಬಜಾಬ್‌ ಕಂಪನಿಯ ವಾಹನ: ನಾಲ್ಕು ಚಕ್ರದ ವಾಹನಗಳು ಮೀಟರ್ ಆಳವಡಿಕೆಯೊಂದಿಗೆ ರಸ್ತೆಗೆ ಇಳಿಯುತ್ತಿದೆ. ಬಜಾಬ್‌ ಕಂಪನಿಯ ಕ್ಯೂಟ್‌ (ಕ್ವಾಡ್ರಿ ಸೈಕಲ್‌) ವಾಹನಗಳು ನಗರದಲ್ಲಿ ಸೇವೆಯನ್ನು ಆರಂಭಿಸಲಿವೆ. ಕಾರು ಮಾದರಿಯ ಬಜಾಬ್‌ ಕ್ಯೂಟ್  ಕ್ವಾಡ್ರಿ ಸೈಕಲ್ ವಾಹನವು 2019 ರಲ್ಲೇ ಮಾರುಕಟ್ಟೆಗೆ ಬಂದಿದೆ. ಆದರೆ, ಹಲವು ವರ್ಷದಿಂದ ಬೆಂಗಳೂರಿನಲ್ಲಿ ಪ್ರಯಾಣಿಕರಿಗೆ ಸೇವೆಯನ್ನು ನೀಡಲು ಸಾರಿಗೆ ಇಲಾಖೆ ಅನುಮತಿ ನೀಡಿರಲಿಲ್ಲ. ಇದೀಗ ದರ ನಿಗದಿಪಡಿಸಿ ಸಾರ್ವಜನಿಕ ಸೇವೆಗೆ ಅನುಮತಿಯನ್ನು ನೀಡಿದೆ. ಆದ್ದರಿಂದ ಇಂದಿನಿಂದ ಕ್ಯೂಟ್‌ ಟ್ಯಾಕ್ಸಿ ಸಾರ್ವಜನಿಕರ ಸೇವೆಗೆ ಸಜ್ಜಾಗಿ ಆಗಮಿಸಿವೆ.

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more