AI ಕ್ಯಾಮೆರಾ ಮೊರೆ ಹೋದ ಸಾರಿಗೆ ಇಲಾಖೆ: ಸವಾರರ ಪಿನ್ ಟು ಪಿನ್ ಮಾಹಿತಿ ಸೆರೆ ಹಿಡಿಯುವ ಕ್ಯಾಮೆರಾ

AI ಕ್ಯಾಮೆರಾ ಮೊರೆ ಹೋದ ಸಾರಿಗೆ ಇಲಾಖೆ: ಸವಾರರ ಪಿನ್ ಟು ಪಿನ್ ಮಾಹಿತಿ ಸೆರೆ ಹಿಡಿಯುವ ಕ್ಯಾಮೆರಾ

Published : Oct 16, 2023, 11:40 AM IST

ಉದ್ಯಾನನಗರಿಯಲ್ಲಿ ಬೇಕಾಬಿಟ್ಟಿ ವಾಹನ ಚಲಾಯಿಸುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಮನಸೋ ಇಚ್ಛೆ ವಾಹನ ಚಲಾಯಿಸುವುದರಿಂದ ಅಪಘಾತ ಪ್ರಮಾಣ, ಸಂಚಾರ ದಟ್ಟಣೆ ಕೂಡ ಹೆಚ್ಚಾಗ್ತಿದೆ. ಇದನ್ನು ಮಟ್ಟಹಾಕಲು ಸಾರಿಗೆ ಇಲಾಖೆ ಹೊಸ ಅಸ್ತ್ರದ ಮೊರೆ ಹೊಗಲಿದೆಯಂತೆ. ಅದೇ ಎಐ ಅಸ್ತ್ರ.
 

ಬೆಂಗಳೂರು ಬೆಳೆಯುತ್ತಿದ್ದಂತೆ ವಾಹನ ದಟ್ಟನೆ ಕೂಡ ಹೆಚ್ಚಾಗ್ತಿದೆ. ಒಂದೂವರೆ ಕೋಟಿ ಜನ ಇರೋ ರಾಜಧಾನಿಯಲ್ಲಿ ಒಂದು ಕೋಟಿಗಿಂತ ಅಧಿಕ ವಾಹನಗಳಿವೆ. ವಾಹನಗಳು ಹೆಚ್ಚಾದಂತೆ ನಿಯಮ ಉಲ್ಲಂಘನೆ ಕೂಡ ಮಿತಿ ಮೀರಿದೆ. ಇದ್ರಿಂದ ಅಪಘಾತ ಸಂಖ್ಯೆಯೂ ಏರತೊಡಗಿದೆ. ಈ ಸಮಸ್ಯೆ ಬಗೆಹರಿಸೋದು ಹೇಗಪ್ಪಾ ಅಂತಾ ತಲೆ ಮೇಲೆ ಕೈಹೊತ್ತು ಕುಳಿತಿದ್ದ ಸಾರಿಗೆ ಇಲಾಖೆ ಹೊಸ ಐಡಿಯಾ ಮಾಡಿದೆ. ಮುಖ್ಯರಸ್ತೆಯಲ್ಲೇನೊ  ಪೊಲೀಸರು(Police) ಇರ್ತಿದ್ರು, ರೂಲ್ಸ್ ಬ್ರೇಕ್ ಮಾಡಿದವರನ್ನ ಸೆರೆ ಹಿಡಿತಿದ್ರು. ಆದ್ರೆ ಏರಿಯಾ ಒಳಗಿನ ರಸ್ತೆಗಳಲ್ಲಿ ಕೆಲವು ಪುಂಡರನ್ನ ಹೇಳೋರು ಕೇಳೋರೆ ಇರಲಿಲ್ಲ. ಇಂಥವೆಕ್ಕೆಲ್ಲ ಬ್ರೇಕ್ ಹಾಕಲು ಮುಂದಾದ ಸಾರಿಗೆ ಇಲಾಖೆ ಮತ್ತು ಟ್ರಾಫಿಕ್ ಪೊಲೀಸರು(Traffic Police), ಜಂಟಿಯಾಗಿ ಕಾರ್ಯಾಚರಣೆಗಿಳಿದಿದ್ದಾರೆ. ನಗರದ ಹಲವೆಡೆ AI  ಕ್ಯಾಮೆರಾ(AI Camera) ಅಳವಡಿಸುವ ಮೂಲಕ ನಿಯಮ ಉಲ್ಲಂಘಿಸುವವರ ಮೇಲೆ ಹದ್ದಿನ ಕಣ್ಣಿಡೋಕೆ ಪ್ಲಾನ್ ಮಾಡಿದೆ. ಸಾಮಾನ್ಯ ಕ್ಯಾಮೆರಾಗಳು ಸವಾರರ ಚಲನವಲನ ಮಾತ್ರ ಸೆರೆ ಹಿಡಿಯುತ್ತವೆ. ಆದರೆ ಎಐ ಕ್ಯಾಮೆರಾ ವಾಹನದ ವೇಗ, ಪಥ, ಶಿಸ್ತು ಉಲ್ಲಂಘನೆ, ಚಾಲಕರ ಸೀಟ್ ಬೆಲ್ಟ್ ಸೇರಿದಂತೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ವಾಹನದ ನಂಬರ್ ಪ್ಲೇಟ್ ಸಮೇತ ಕ್ಯಾಪ್ಚರ್ ಮಾಡಲಿದೆ. ಎಐ ಸರಿಸುಮಾರು 200-250 ಮೀಟರ್ ದೂರದವರೆಗೂ ದೃಶ್ಯಾವಳಿಯನ್ನ ಸೆರೆಹಿಡಿಯಬಲ್ಲದು. ಎಐ ಕ್ಯಾಮೆರಾಗಳನ್ನು ಸಾರಿಗೆ ಇಲಾಖೆಯ ವೆಬ್‌ ಆಧಾರಿತ ಸಾರಥಿ-4 ಮತ್ತು ವಾಹನ್‌-4 ತಂತ್ರಾಂಶದ ಜೊತೆ ಕನೆಕ್ಟ್ ಮಾಡಲಾಗುತ್ತೆ. ಎಐ ಕ್ಯಾಮೆರಾಗಳಲ್ಲಿ ವಾಹನದ ನೋಂದಣಿ ಸಂಖ್ಯೆ ಸೆರೆಯಾದ ತಕ್ಷಣ, ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ವ್ಯಕ್ತಿಯ ಸಂಪೂರ್ಣ ವಿವರ ಇಲಾಖೆ ಸಿಬ್ಬಂದಿಗೆ ಬೆರಳ ತುದಿಯಲ್ಲೇ ಸಿಗಲಿದೆ. ಎಐ ಕ್ಯಾಮೆರಾದಿಂದ ವಾಹನದ ಪರವಾನಗಿ, ಕಾರ್ಯಕ್ಷಮತೆ ಪ್ರಮಾಣಪತ್ರ, ವಿಮೆ ಸೇರಿದಂತೆ ಇತರೆ ದಾಖಲೆಗಳು ಚಾಲ್ತಿಯಲ್ಲಿವೆಯೇ ಅಥವಾ ಇಲ್ಲವೇ ಎಂಬುದು ಗೊತ್ತಾಗಲಿದೆ. ಹಿಂದಿನ ನಿಯಮ ಉಲ್ಲಂಘನೆ ಪ್ರಕರಣಗಳ ಮಾಹಿತಿಯೂ ಕ್ಷಣ ಮಾತ್ರದಲ್ಲಿ ಸಿಗಲಿದೆ.

ಇದನ್ನೂ ವೀಕ್ಷಿಸಿ:  ಮತ್ತೆ ಸದ್ದು ಮಾಡ್ತಿದೆ ಸ್ಯಾಂಡ್ ಮಾಫಿಯಾ: ನದಿ ಒಡಲನ್ನೇ ಕೊರೆಯತ್ತಿದ್ದಾರೆ ಮರಳು ಗಳ್ಳರು

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more