AI ಕ್ಯಾಮೆರಾ ಮೊರೆ ಹೋದ ಸಾರಿಗೆ ಇಲಾಖೆ: ಸವಾರರ ಪಿನ್ ಟು ಪಿನ್ ಮಾಹಿತಿ ಸೆರೆ ಹಿಡಿಯುವ ಕ್ಯಾಮೆರಾ

AI ಕ್ಯಾಮೆರಾ ಮೊರೆ ಹೋದ ಸಾರಿಗೆ ಇಲಾಖೆ: ಸವಾರರ ಪಿನ್ ಟು ಪಿನ್ ಮಾಹಿತಿ ಸೆರೆ ಹಿಡಿಯುವ ಕ್ಯಾಮೆರಾ

Published : Oct 16, 2023, 11:40 AM IST

ಉದ್ಯಾನನಗರಿಯಲ್ಲಿ ಬೇಕಾಬಿಟ್ಟಿ ವಾಹನ ಚಲಾಯಿಸುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಮನಸೋ ಇಚ್ಛೆ ವಾಹನ ಚಲಾಯಿಸುವುದರಿಂದ ಅಪಘಾತ ಪ್ರಮಾಣ, ಸಂಚಾರ ದಟ್ಟಣೆ ಕೂಡ ಹೆಚ್ಚಾಗ್ತಿದೆ. ಇದನ್ನು ಮಟ್ಟಹಾಕಲು ಸಾರಿಗೆ ಇಲಾಖೆ ಹೊಸ ಅಸ್ತ್ರದ ಮೊರೆ ಹೊಗಲಿದೆಯಂತೆ. ಅದೇ ಎಐ ಅಸ್ತ್ರ.
 

ಬೆಂಗಳೂರು ಬೆಳೆಯುತ್ತಿದ್ದಂತೆ ವಾಹನ ದಟ್ಟನೆ ಕೂಡ ಹೆಚ್ಚಾಗ್ತಿದೆ. ಒಂದೂವರೆ ಕೋಟಿ ಜನ ಇರೋ ರಾಜಧಾನಿಯಲ್ಲಿ ಒಂದು ಕೋಟಿಗಿಂತ ಅಧಿಕ ವಾಹನಗಳಿವೆ. ವಾಹನಗಳು ಹೆಚ್ಚಾದಂತೆ ನಿಯಮ ಉಲ್ಲಂಘನೆ ಕೂಡ ಮಿತಿ ಮೀರಿದೆ. ಇದ್ರಿಂದ ಅಪಘಾತ ಸಂಖ್ಯೆಯೂ ಏರತೊಡಗಿದೆ. ಈ ಸಮಸ್ಯೆ ಬಗೆಹರಿಸೋದು ಹೇಗಪ್ಪಾ ಅಂತಾ ತಲೆ ಮೇಲೆ ಕೈಹೊತ್ತು ಕುಳಿತಿದ್ದ ಸಾರಿಗೆ ಇಲಾಖೆ ಹೊಸ ಐಡಿಯಾ ಮಾಡಿದೆ. ಮುಖ್ಯರಸ್ತೆಯಲ್ಲೇನೊ  ಪೊಲೀಸರು(Police) ಇರ್ತಿದ್ರು, ರೂಲ್ಸ್ ಬ್ರೇಕ್ ಮಾಡಿದವರನ್ನ ಸೆರೆ ಹಿಡಿತಿದ್ರು. ಆದ್ರೆ ಏರಿಯಾ ಒಳಗಿನ ರಸ್ತೆಗಳಲ್ಲಿ ಕೆಲವು ಪುಂಡರನ್ನ ಹೇಳೋರು ಕೇಳೋರೆ ಇರಲಿಲ್ಲ. ಇಂಥವೆಕ್ಕೆಲ್ಲ ಬ್ರೇಕ್ ಹಾಕಲು ಮುಂದಾದ ಸಾರಿಗೆ ಇಲಾಖೆ ಮತ್ತು ಟ್ರಾಫಿಕ್ ಪೊಲೀಸರು(Traffic Police), ಜಂಟಿಯಾಗಿ ಕಾರ್ಯಾಚರಣೆಗಿಳಿದಿದ್ದಾರೆ. ನಗರದ ಹಲವೆಡೆ AI  ಕ್ಯಾಮೆರಾ(AI Camera) ಅಳವಡಿಸುವ ಮೂಲಕ ನಿಯಮ ಉಲ್ಲಂಘಿಸುವವರ ಮೇಲೆ ಹದ್ದಿನ ಕಣ್ಣಿಡೋಕೆ ಪ್ಲಾನ್ ಮಾಡಿದೆ. ಸಾಮಾನ್ಯ ಕ್ಯಾಮೆರಾಗಳು ಸವಾರರ ಚಲನವಲನ ಮಾತ್ರ ಸೆರೆ ಹಿಡಿಯುತ್ತವೆ. ಆದರೆ ಎಐ ಕ್ಯಾಮೆರಾ ವಾಹನದ ವೇಗ, ಪಥ, ಶಿಸ್ತು ಉಲ್ಲಂಘನೆ, ಚಾಲಕರ ಸೀಟ್ ಬೆಲ್ಟ್ ಸೇರಿದಂತೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ವಾಹನದ ನಂಬರ್ ಪ್ಲೇಟ್ ಸಮೇತ ಕ್ಯಾಪ್ಚರ್ ಮಾಡಲಿದೆ. ಎಐ ಸರಿಸುಮಾರು 200-250 ಮೀಟರ್ ದೂರದವರೆಗೂ ದೃಶ್ಯಾವಳಿಯನ್ನ ಸೆರೆಹಿಡಿಯಬಲ್ಲದು. ಎಐ ಕ್ಯಾಮೆರಾಗಳನ್ನು ಸಾರಿಗೆ ಇಲಾಖೆಯ ವೆಬ್‌ ಆಧಾರಿತ ಸಾರಥಿ-4 ಮತ್ತು ವಾಹನ್‌-4 ತಂತ್ರಾಂಶದ ಜೊತೆ ಕನೆಕ್ಟ್ ಮಾಡಲಾಗುತ್ತೆ. ಎಐ ಕ್ಯಾಮೆರಾಗಳಲ್ಲಿ ವಾಹನದ ನೋಂದಣಿ ಸಂಖ್ಯೆ ಸೆರೆಯಾದ ತಕ್ಷಣ, ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ವ್ಯಕ್ತಿಯ ಸಂಪೂರ್ಣ ವಿವರ ಇಲಾಖೆ ಸಿಬ್ಬಂದಿಗೆ ಬೆರಳ ತುದಿಯಲ್ಲೇ ಸಿಗಲಿದೆ. ಎಐ ಕ್ಯಾಮೆರಾದಿಂದ ವಾಹನದ ಪರವಾನಗಿ, ಕಾರ್ಯಕ್ಷಮತೆ ಪ್ರಮಾಣಪತ್ರ, ವಿಮೆ ಸೇರಿದಂತೆ ಇತರೆ ದಾಖಲೆಗಳು ಚಾಲ್ತಿಯಲ್ಲಿವೆಯೇ ಅಥವಾ ಇಲ್ಲವೇ ಎಂಬುದು ಗೊತ್ತಾಗಲಿದೆ. ಹಿಂದಿನ ನಿಯಮ ಉಲ್ಲಂಘನೆ ಪ್ರಕರಣಗಳ ಮಾಹಿತಿಯೂ ಕ್ಷಣ ಮಾತ್ರದಲ್ಲಿ ಸಿಗಲಿದೆ.

ಇದನ್ನೂ ವೀಕ್ಷಿಸಿ:  ಮತ್ತೆ ಸದ್ದು ಮಾಡ್ತಿದೆ ಸ್ಯಾಂಡ್ ಮಾಫಿಯಾ: ನದಿ ಒಡಲನ್ನೇ ಕೊರೆಯತ್ತಿದ್ದಾರೆ ಮರಳು ಗಳ್ಳರು

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more