Uttara Kannada: ಅರಣ್ಯ ಇಲಾಖೆಯೂ ಸಂಗ್ರಹಿಸಿಲ್ಲ, ಬಿದ್ದ ಸ್ಥಳಗಳಲ್ಲೂ ಇಲ್ಲ, ಮರಗಳು ಮಂಗಮಾಯ!

Uttara Kannada: ಅರಣ್ಯ ಇಲಾಖೆಯೂ ಸಂಗ್ರಹಿಸಿಲ್ಲ, ಬಿದ್ದ ಸ್ಥಳಗಳಲ್ಲೂ ಇಲ್ಲ, ಮರಗಳು ಮಂಗಮಾಯ!

Suvarna News   | Asianet News
Published : Dec 10, 2021, 04:36 PM ISTUpdated : Dec 10, 2021, 04:47 PM IST

- ಭೂ ಕುಸಿತ, ಗುಡ್ಡ ಕುಸಿತದಲ್ಲಿ ನೆಲಕ್ಕುರುಳಿದ್ದವು ಭಾರೀ ಪ್ರಮಾಣದ ಬೆಲೆ ಬಾಳುವ ಮರಗಳು 

- ಅರಣ್ಯ ಇಲಾಖೆಯೂ ಸಂಗ್ರಹಿಸಿಲ್ಲ, ಬಿದ್ದ ಸ್ಥಳಗಳಲ್ಲೂ ಇಲ್ಲ ನೆಲಕಚ್ಚಿದ್ದ ಮರಗಳು! 

- ಮರಗಳ್ಳರು ಇವುಗಳನ್ನು ನುಂಗಿ ಹಾಕಿದ್ದಾರೆ ಅನ್ನೋ ಆರೋಪ ಮಾಡಿದ್ದಾರೆ ಜನರು

ಉತ್ತರ ಕನ್ನಡ (ಡಿ. 10):  ಕಳೆದ ಜುಲೈ ತಿಂಗಳಿನಿಂದ ಅಕ್ಟೋಬರ್‌ವರೆಗೆ ಕಾಣಿಸಿಕೊಂಡ ಮಹಾಮಳೆಗೆ (Heavy Rainfall) ಜನಜೀವನವೇ ಅಸ್ತವ್ಯಸ್ತಗೊಂಡಿತ್ತು. ಈ ನಡುವೆ ಮಲೆನಾಡು (Malenadu) ಹಾಗೂ ಕರಾವಳಿ ಭಾಗದ ಕೆಲವೆಡೆ ಗುಡ್ಡ ಕುಸಿತ, ಭೂ ಕುಸಿತವಾಗಿ ಭಾರೀ ಪ್ರಮಾಣದಲ್ಲಿ ಬೃಹತ್ ಮರಗಳು (Trees) ನೆಲಕಚ್ಚಿದ್ದವು.  ನೆಲಕ್ಕಿರುಳಿದ್ದ ಈ ಮರಗಳು ಸರಕಾರಕ್ಕೆ ಉತ್ತಮ ಆದಾಯವಾಗುವ ಮುನ್ನವೇ ಕಾಣೆಯಾಗಿದ್ದು, ಅರಣ್ಯಾಧಿಕಾರಿಗಳ (Forest Department) ಹಾಗೂ ಜನಪ್ರತಿನಿಧಿಗಳ ಕೃಪಾಕಟಾಕ್ಷದಿಂದ ಮರಗಳ್ಳರು ಇವುಗಳನ್ನು ನುಂಗಿ ಹಾಕಿದ್ದಾರೆ ಅನ್ನೋ ಆರೋಪ ವ್ಯಕ್ತವಾಗಿವೆ.

ಅರಣ್ಯ ಇಲಾಖೆ ಸಿಬ್ಬಂದಿ ಇವುಗಳನ್ನು ಸಂಗ್ರಹಿಸಿ ಡಿಪೋಗೆ ನೀಡಿ ಹಣವನ್ನು ಸರಕಾರಕ್ಕೆ ನೀಡಿದಿದ್ದಲ್ಲಿ ಸರಕಾರಕ್ಕೂ‌ ಒಂದು ಆದಾಯವಾಗುತ್ತಿತ್ತು.‌ ಆದರೆ,ಅರಣ್ಯ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಕೇಳಿದರೆ ನಾವು ಯಾವ ಮರಗಳನ್ನೂ ಸಂಗ್ರಹಿಸಿಯೇ ಇಲ್ಲ ಅಂತಾರೆ. ಹಾಗಿದ್ದರೆ, ಈ ಮರಗಳು ಎಲ್ಲಿಗೆ ಹೋಯ್ತು ಅನ್ನೋದು ದೊಡ್ಡ ಪ್ರಶ್ನೆಯಾಗಿ ಉಳಿದಿದೆ. ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಕೃಪಾ ಕಟಾಕ್ಷದಿಂದ ಮರಗಳ್ಳರು ಇವುಗಳನ್ನು ನುಂಗಿ ಹಾಕಿದ್ದಾರೆ ಅನ್ನೋ ಆರೋಪ ಎದುರಾಗಿದ್ದು, ಈ ಬಗ್ಗೆ ಆರ್‌ಟಿಐ ಮೂಲಕ ಮಾಹಿತಿ ಸಂಗ್ರಹ ಮಾಡಲು ಹೋರಾಟಗಾರರು ಅಣಿಯಾಗಿದ್ದಾರೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more