Uttara Kannada: ಅರಣ್ಯ ಇಲಾಖೆಯೂ ಸಂಗ್ರಹಿಸಿಲ್ಲ, ಬಿದ್ದ ಸ್ಥಳಗಳಲ್ಲೂ ಇಲ್ಲ, ಮರಗಳು ಮಂಗಮಾಯ!

Uttara Kannada: ಅರಣ್ಯ ಇಲಾಖೆಯೂ ಸಂಗ್ರಹಿಸಿಲ್ಲ, ಬಿದ್ದ ಸ್ಥಳಗಳಲ್ಲೂ ಇಲ್ಲ, ಮರಗಳು ಮಂಗಮಾಯ!

Suvarna News   | Asianet News
Published : Dec 10, 2021, 04:36 PM ISTUpdated : Dec 10, 2021, 04:47 PM IST

- ಭೂ ಕುಸಿತ, ಗುಡ್ಡ ಕುಸಿತದಲ್ಲಿ ನೆಲಕ್ಕುರುಳಿದ್ದವು ಭಾರೀ ಪ್ರಮಾಣದ ಬೆಲೆ ಬಾಳುವ ಮರಗಳು 

- ಅರಣ್ಯ ಇಲಾಖೆಯೂ ಸಂಗ್ರಹಿಸಿಲ್ಲ, ಬಿದ್ದ ಸ್ಥಳಗಳಲ್ಲೂ ಇಲ್ಲ ನೆಲಕಚ್ಚಿದ್ದ ಮರಗಳು! 

- ಮರಗಳ್ಳರು ಇವುಗಳನ್ನು ನುಂಗಿ ಹಾಕಿದ್ದಾರೆ ಅನ್ನೋ ಆರೋಪ ಮಾಡಿದ್ದಾರೆ ಜನರು

ಉತ್ತರ ಕನ್ನಡ (ಡಿ. 10):  ಕಳೆದ ಜುಲೈ ತಿಂಗಳಿನಿಂದ ಅಕ್ಟೋಬರ್‌ವರೆಗೆ ಕಾಣಿಸಿಕೊಂಡ ಮಹಾಮಳೆಗೆ (Heavy Rainfall) ಜನಜೀವನವೇ ಅಸ್ತವ್ಯಸ್ತಗೊಂಡಿತ್ತು. ಈ ನಡುವೆ ಮಲೆನಾಡು (Malenadu) ಹಾಗೂ ಕರಾವಳಿ ಭಾಗದ ಕೆಲವೆಡೆ ಗುಡ್ಡ ಕುಸಿತ, ಭೂ ಕುಸಿತವಾಗಿ ಭಾರೀ ಪ್ರಮಾಣದಲ್ಲಿ ಬೃಹತ್ ಮರಗಳು (Trees) ನೆಲಕಚ್ಚಿದ್ದವು.  ನೆಲಕ್ಕಿರುಳಿದ್ದ ಈ ಮರಗಳು ಸರಕಾರಕ್ಕೆ ಉತ್ತಮ ಆದಾಯವಾಗುವ ಮುನ್ನವೇ ಕಾಣೆಯಾಗಿದ್ದು, ಅರಣ್ಯಾಧಿಕಾರಿಗಳ (Forest Department) ಹಾಗೂ ಜನಪ್ರತಿನಿಧಿಗಳ ಕೃಪಾಕಟಾಕ್ಷದಿಂದ ಮರಗಳ್ಳರು ಇವುಗಳನ್ನು ನುಂಗಿ ಹಾಕಿದ್ದಾರೆ ಅನ್ನೋ ಆರೋಪ ವ್ಯಕ್ತವಾಗಿವೆ.

ಅರಣ್ಯ ಇಲಾಖೆ ಸಿಬ್ಬಂದಿ ಇವುಗಳನ್ನು ಸಂಗ್ರಹಿಸಿ ಡಿಪೋಗೆ ನೀಡಿ ಹಣವನ್ನು ಸರಕಾರಕ್ಕೆ ನೀಡಿದಿದ್ದಲ್ಲಿ ಸರಕಾರಕ್ಕೂ‌ ಒಂದು ಆದಾಯವಾಗುತ್ತಿತ್ತು.‌ ಆದರೆ,ಅರಣ್ಯ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಕೇಳಿದರೆ ನಾವು ಯಾವ ಮರಗಳನ್ನೂ ಸಂಗ್ರಹಿಸಿಯೇ ಇಲ್ಲ ಅಂತಾರೆ. ಹಾಗಿದ್ದರೆ, ಈ ಮರಗಳು ಎಲ್ಲಿಗೆ ಹೋಯ್ತು ಅನ್ನೋದು ದೊಡ್ಡ ಪ್ರಶ್ನೆಯಾಗಿ ಉಳಿದಿದೆ. ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಕೃಪಾ ಕಟಾಕ್ಷದಿಂದ ಮರಗಳ್ಳರು ಇವುಗಳನ್ನು ನುಂಗಿ ಹಾಕಿದ್ದಾರೆ ಅನ್ನೋ ಆರೋಪ ಎದುರಾಗಿದ್ದು, ಈ ಬಗ್ಗೆ ಆರ್‌ಟಿಐ ಮೂಲಕ ಮಾಹಿತಿ ಸಂಗ್ರಹ ಮಾಡಲು ಹೋರಾಟಗಾರರು ಅಣಿಯಾಗಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more