Uttara Kannada: ಅರಣ್ಯ ಇಲಾಖೆಯೂ ಸಂಗ್ರಹಿಸಿಲ್ಲ, ಬಿದ್ದ ಸ್ಥಳಗಳಲ್ಲೂ ಇಲ್ಲ, ಮರಗಳು ಮಂಗಮಾಯ!

Uttara Kannada: ಅರಣ್ಯ ಇಲಾಖೆಯೂ ಸಂಗ್ರಹಿಸಿಲ್ಲ, ಬಿದ್ದ ಸ್ಥಳಗಳಲ್ಲೂ ಇಲ್ಲ, ಮರಗಳು ಮಂಗಮಾಯ!

Suvarna News   | Asianet News
Published : Dec 10, 2021, 04:36 PM ISTUpdated : Dec 10, 2021, 04:47 PM IST

- ಭೂ ಕುಸಿತ, ಗುಡ್ಡ ಕುಸಿತದಲ್ಲಿ ನೆಲಕ್ಕುರುಳಿದ್ದವು ಭಾರೀ ಪ್ರಮಾಣದ ಬೆಲೆ ಬಾಳುವ ಮರಗಳು 

- ಅರಣ್ಯ ಇಲಾಖೆಯೂ ಸಂಗ್ರಹಿಸಿಲ್ಲ, ಬಿದ್ದ ಸ್ಥಳಗಳಲ್ಲೂ ಇಲ್ಲ ನೆಲಕಚ್ಚಿದ್ದ ಮರಗಳು! 

- ಮರಗಳ್ಳರು ಇವುಗಳನ್ನು ನುಂಗಿ ಹಾಕಿದ್ದಾರೆ ಅನ್ನೋ ಆರೋಪ ಮಾಡಿದ್ದಾರೆ ಜನರು

ಉತ್ತರ ಕನ್ನಡ (ಡಿ. 10):  ಕಳೆದ ಜುಲೈ ತಿಂಗಳಿನಿಂದ ಅಕ್ಟೋಬರ್‌ವರೆಗೆ ಕಾಣಿಸಿಕೊಂಡ ಮಹಾಮಳೆಗೆ (Heavy Rainfall) ಜನಜೀವನವೇ ಅಸ್ತವ್ಯಸ್ತಗೊಂಡಿತ್ತು. ಈ ನಡುವೆ ಮಲೆನಾಡು (Malenadu) ಹಾಗೂ ಕರಾವಳಿ ಭಾಗದ ಕೆಲವೆಡೆ ಗುಡ್ಡ ಕುಸಿತ, ಭೂ ಕುಸಿತವಾಗಿ ಭಾರೀ ಪ್ರಮಾಣದಲ್ಲಿ ಬೃಹತ್ ಮರಗಳು (Trees) ನೆಲಕಚ್ಚಿದ್ದವು.  ನೆಲಕ್ಕಿರುಳಿದ್ದ ಈ ಮರಗಳು ಸರಕಾರಕ್ಕೆ ಉತ್ತಮ ಆದಾಯವಾಗುವ ಮುನ್ನವೇ ಕಾಣೆಯಾಗಿದ್ದು, ಅರಣ್ಯಾಧಿಕಾರಿಗಳ (Forest Department) ಹಾಗೂ ಜನಪ್ರತಿನಿಧಿಗಳ ಕೃಪಾಕಟಾಕ್ಷದಿಂದ ಮರಗಳ್ಳರು ಇವುಗಳನ್ನು ನುಂಗಿ ಹಾಕಿದ್ದಾರೆ ಅನ್ನೋ ಆರೋಪ ವ್ಯಕ್ತವಾಗಿವೆ.

ಅರಣ್ಯ ಇಲಾಖೆ ಸಿಬ್ಬಂದಿ ಇವುಗಳನ್ನು ಸಂಗ್ರಹಿಸಿ ಡಿಪೋಗೆ ನೀಡಿ ಹಣವನ್ನು ಸರಕಾರಕ್ಕೆ ನೀಡಿದಿದ್ದಲ್ಲಿ ಸರಕಾರಕ್ಕೂ‌ ಒಂದು ಆದಾಯವಾಗುತ್ತಿತ್ತು.‌ ಆದರೆ,ಅರಣ್ಯ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಕೇಳಿದರೆ ನಾವು ಯಾವ ಮರಗಳನ್ನೂ ಸಂಗ್ರಹಿಸಿಯೇ ಇಲ್ಲ ಅಂತಾರೆ. ಹಾಗಿದ್ದರೆ, ಈ ಮರಗಳು ಎಲ್ಲಿಗೆ ಹೋಯ್ತು ಅನ್ನೋದು ದೊಡ್ಡ ಪ್ರಶ್ನೆಯಾಗಿ ಉಳಿದಿದೆ. ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಕೃಪಾ ಕಟಾಕ್ಷದಿಂದ ಮರಗಳ್ಳರು ಇವುಗಳನ್ನು ನುಂಗಿ ಹಾಕಿದ್ದಾರೆ ಅನ್ನೋ ಆರೋಪ ಎದುರಾಗಿದ್ದು, ಈ ಬಗ್ಗೆ ಆರ್‌ಟಿಐ ಮೂಲಕ ಮಾಹಿತಿ ಸಂಗ್ರಹ ಮಾಡಲು ಹೋರಾಟಗಾರರು ಅಣಿಯಾಗಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more