ಲಾರಿ ನಡುವೆ ಅಪಘಾತ : ರಸ್ತೆಯಲ್ಲಿ ಬಿದ್ದ ಹಣ್ಣು ಕೊಂಡೊಯ್ಯಲು ಮುಗಿ ಬಿದ್ದ ಜನ

Jan 4, 2020, 2:57 PM IST

ಕಾರವಾರ (ಜ.04):  ಮಹಾರಾಷ್ಟ್ರ ನೋಂದಣಿಯ ಲಾರಿಗಳ ನಡುವೆ ಉತ್ತರ ಕನ್ನಡದ ಯಲ್ಲಾಪುರ ಪಟ್ಟಣದಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ಅಪಘಾತದಲ್ಲಿ ಹಣ್ಣಿನ ಲಾರಿ ಚಾಲಕನಿಗೆ ಗಂಭೀರ ಗಾಯವಾಗಿದ್ದು, ತಾಲೂಕು ಆಸ್ಪತ್ರೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ಕೆಲ ಗಂಟೆಗಳ ಕಾಲ ಹೆದ್ದಾರಿ ಬಂದ್ ಆಗಿ, ವಾಹನ ಸವಾರರು ಪರದಾಡುವಂತಾಯಿತು. 

ಮೇದಿನಿ ಗ್ರಾಮಕ್ಕೆ ಹೆಣ್ಣು ಕೊಡೋಕೂ ಹೆದರ್ತಾರೆ !...

ಅಪಘಾತದ ಪರಿಣಾಮ ಲಾರಿಯಲ್ಲಿದ್ದ ಹಣ್ಣುಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ‌ ಬಿದ್ದಿದ್ದು, ರಸ್ತೆ ಮೇಲೆ ಬಿದ್ದಿದ್ದ ದಾಳಿಂಬೆ, ಗ್ರೀನ್ ಆ್ಯಪಲ್,ದ್ರಾಕ್ಷಿ ಹಣ್ಣುಗಳನ್ನು ಕೊಂಡೊಯ್ಯಲು ಜನರು ಮುಗು ಬಿದ್ದರು.