ಕರಾವಳಿಯಲ್ಲಿ ಮತ್ತೊಮ್ಮೆ ಕನ್ನಡ VS ತುಳು ಫೈಟ್..! ಕನ್ನಡ ಸ್ಟಿಕರ್ ಅಭಿಯಾನಕ್ಕೆ ತುಳು ಭಾಷಾ ಪ್ರೇಮಿಗಳು ಗರಂ

ಕರಾವಳಿಯಲ್ಲಿ ಮತ್ತೊಮ್ಮೆ ಕನ್ನಡ VS ತುಳು ಫೈಟ್..! ಕನ್ನಡ ಸ್ಟಿಕರ್ ಅಭಿಯಾನಕ್ಕೆ ತುಳು ಭಾಷಾ ಪ್ರೇಮಿಗಳು ಗರಂ

Published : Dec 08, 2023, 10:43 AM IST

ಕಡಲ ನಗರಿ ಮಂಗಳೂರಿನಲ್ಲಿ ಮತ್ತೆ ಕನ್ನಡ ವರ್ಸಸ್ ತುಳು ಜಟಾಪಟಿ ಮುನ್ನಲೆಗೆ ಬಂದಿದೆ. ನಗರದ ಖಾಸಗಿ ಬಸ್ ಗಳ ನಾಮಫಲಕದಲ್ಲಿ ಆಂಗ್ಲ ಬಳಕೆ ಅತಿಯಾಗಿದ್ದು, ಬಸ್ ಗಳಿಗೆ ಕನ್ನಡ ರೂಟ್ ನಾಮಫಲಕ ಸ್ಟಿಕರ್ ಅಂಟಿಸುವ ಅಭಿಯಾನ ನಡೆದಿದ್ದು, ಇದು ತುಳು ಭಾಷಾ ಪ್ರೇಮಿಗಳನ್ನ ಕೆರಳಿಸಿದೆ. 

ಕಡಲ ನಗರಿ ಮಂಗಳೂರಿನಲ್ಲಿ ತುಳು ಭಾಷಿಕರೇ(Tulu Language) ಹೆಚ್ಚಿದ್ದಾರೆ. ಹೀಗಿದ್ದರೂ ಕನ್ನಡ ನೆಲದಲ್ಲಿ ಕನ್ನಡ ಉಳಿಸಿ ಅನ್ನೋ ಹೋರಾಟಗಳು ಹಿಂದಿನಿಂದಲೂ ನಡೆಯುತ್ತಲೇ ಇದೆ. ಜಿಲ್ಲೆಯ ಸಾರ್ವಜನಿಕ ಪ್ರದೇಶಗಳಲ್ಲಿ ಕನ್ನಡ ಬಳಕೆ ಕಡ್ಡಾಯ ಆಗ್ರಹವನ್ನು ಕನ್ನಡ ಪರ ಹೋರಾಟಗಾರರು ಮಾಡುತ್ತಲೇ ಬಂದಿದ್ದಾರೆ. ಆದ್ರೆ, ಇತ್ತೀಚಿನ ದಿನಗಳಲ್ಲಿ ಮಂಗಳೂರಿನ(Mangalore) ಜೀವನಾಡಿ ಎಂದು ಪರಿಗಣಿಸಲ್ಪಡುವ ಖಾಸಗಿ ಬಸ್‌ಗಳ(private buses) ರೂಟ್ ಬೋರ್ಡ್‌ನಲ್ಲಿ ಕನ್ನಡ ಹೊರತಾಗಿ ಇಂಗ್ಲಿಷ್(English) ಹಾಗೂ ಇತರೆ ಭಾಷೆಗಳ ಬಳಕೆ ಹೆಚ್ಚಾಗುತ್ತಿದೆ. ಹೀಗಾಗಿ ಡಿಸೆಂಬರ್ 5 ರಂದು ಸಾರಿಗೆ ಇಲಾಖೆ ಹಾಗೂ ಕನ್ನಡ ಪರ ಹೋರಾಟಗಾರರು ಜಂಟಿಯಾಗಿ ಬಸ್ಗಳಿಗೆ ಕನ್ನಡ ರೂಟ್ ಸ್ಟಿಕರ್ ಅಂಟಿಸುವ ಅಭಿಯಾನ ಆರಂಭಿಸಿದ್ದಾರೆ. ಡಿಸೆಂಬರ್ 10 ರಿಂದ ಪೂರ್ಣ ಪ್ರಮಾಣದಲ್ಲಿ ಈ ಅಭಿಯಾನ ಆರಂಭಿಸಲು ಕನ್ನಡಪರ ಸಂಘಟನೆಗಳು ಸಿದ್ಧತೆ ನಡೆಸುತ್ತಿವೆ. ಇದರ ನಡುವೆ ಕನ್ನಡ ಸ್ಟಿಕರ್ ಅಭಿಯಾನಕ್ಕೆ(Kannada Sticker Campaign) ಆಕ್ರೋಶ ವ್ಯಕ್ತವಾಗಿದೆ. ಬಸ್ಗಳಿಗೆ ಸ್ಟಿಕರ್ ಅಂಟಿಸಿ ಸ್ಥಳದಲ್ಲಿಯೇ ಬಸ್ ಸಿಬ್ಬಂದಿಯಿಂದ ಸ್ಟಿಕರ್ನ ಬಾಬ್ತು ಹಣವನ್ನು ವಸೂಲಿ ಮಾಡಲಾಗಿದೆ.ಇದು ಖಾಸಗಿ ಬಸ್ ಮಾಲೀಕರು ಹಾಗೂ ತುಳು ಭಾಷಾ ಪ್ರೇಮಿಗಳನ್ನು ಸಿಟ್ಟಿಗೆಬ್ಬಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾದೇಶಿಕ ಭಾಷೆಯಾಗಿ ತುಳು ಗುರುತಿಸಿಕೊಂಡಿದೆ. ಅಲ್ಲದೇ ದೇಶದ ವಿವಿಧ ರಾಜ್ಯಗಳಿಗೆ ಸೇರಿದ ಜನ ಮಂಗಳೂರಲ್ಲಿ ಉದ್ಯೋಗ ಮಾಡ್ತಿದ್ದಾರೆ. ಹೀಗಾಗಿ ತುಳು ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಬೋರ್ಡ್ ಇರೋದ್ರಲ್ಲಿ ತಪ್ಪೇನು ಎಂದು ಕನ್ನಡ ಸ್ಟಿಕರ್ ಅಭಿಯಾನದ ವಿರುದ್ಧ ಸಿಡಿದೆದ್ದಿದ್ದಾರೆ.

ತುಳು ಭಾಷಿಕರೇ ಹೆಚ್ಚಿರುವ ಅವಿಭಜಿತ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ತುಳು ಭಾಷೆಗೆ ಅಧಿಕೃತ ಸ್ಥಾನಮಾನಕ್ಕಾಗಿ ಹೋರಾಟಗಳು ನಡೆಯುತ್ತಲೇ ಇವೆ. ಹೀಗಿರುವಾಗ ಈಗ ಕನ್ನಡ ಸ್ಟಿಕರ್ ಅಭಿಯಾನ ಹಾಗೂ ಅದಕ್ಕೆ ಬಾಬ್ತು ವಸೂಲಿಗೆ ಇಳಿದಿದ್ದು ಆಕ್ರೋಶಕ್ಕೆ ಕಾರಣವಾಗಿದೆ. ಒತ್ತಾಯಪೂರ್ವಕ ಕನ್ನಡ ಹೇರಿಕೆಯನ್ನ ನಾವು ಒಪ್ಪಲ್ಲ ಅನ್ನೋದು ಖಾಸಗಿ ಬಸ್ ಮಾಲೀಕರು ಹಾಗು ತುಳು ಭಾಷಿಕರ ವಾದ.  ಈ ಬೆಳವಣಿಗೆ ಮತ್ತೊಮ್ಮೆ ಕರಾವಳಿಯಲ್ಲಿ ಕನ್ನಡ ವರ್ಸಸ್ ತುಳು ಫೈಟ್ ಹುಟ್ಟುಹಾಕಿದೆ. ಇದರ ನಡುವೆಯೂ ಸಾರಿಗೆ ಇಲಾಖೆ ಕನ್ನಡ ಸ್ಟಿಕರ್ ಅಭಿಯಾನ ಮುಂದುವರೆಸುತ್ತಾ ಅನ್ನೋದು ಸದ್ಯದ ಕುತೂಹಲವಾಗಿದೆ.

ಇದನ್ನೂ ವೀಕ್ಷಿಸಿ:  ಐತಿಹಾಸಿಕ ತಾಣಗಳ ಅಭಿವೃದ್ದಿಗೆ ಮುಂದಾದ ಸರ್ಕಾರ: ಸ್ಮಾರಕ ಮಿತ್ರ ಯೋಜನೆಗೆ ಕೆಲವರ ವಿರೋಧ

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more