ಮಂತ್ರಾಲಯದಲ್ಲಿ ತುಂಗಾರತಿ & ತೆಪ್ಪೋತ್ಸವ ಸಂಭ್ರಮ..ಲಕ್ಷಾಂತರ ಭಕ್ತರಿಂದ ತುಂಬಿ ತುಳುಕಿದ ರಾಯರ ಮಠ

ಮಂತ್ರಾಲಯದಲ್ಲಿ ತುಂಗಾರತಿ & ತೆಪ್ಪೋತ್ಸವ ಸಂಭ್ರಮ..ಲಕ್ಷಾಂತರ ಭಕ್ತರಿಂದ ತುಂಬಿ ತುಳುಕಿದ ರಾಯರ ಮಠ

Published : Nov 28, 2023, 11:02 AM IST

ರಾಯರು ಅಂದ್ರೆ ಮೊದಲು ನೆನಪಾಗುವುದೇ ಮಂತ್ರಾಲಯ ಸನ್ನಿಧಿ. ಮಂತ್ರಾಲಯದಲ್ಲಿ ತುಂಗಾರತಿ & ತೆಪ್ಪೋತ್ಸವ ಸಂಭ್ರಮ ಮನೆ ಮಾಡಿತ್ತು.
 

ಕಾರ್ತಿಕ ಪೂರ್ಣಿಮೆ ಅಂಗವಾಗಿ ಶ್ರೀ ರಾಘವೇಂದ್ರ ಸ್ವಾಮಿ(Shri Raghavendra Swami) ನೆಲೆಸಿರುವ  ಮಂತ್ರಾಲಯದಲ್ಲಿ(Mantralaya) ತುಂಗಾರತಿ ಹಾಗೂ ತೆಪ್ಪೋತ್ಸವ ಅದ್ದೂರಿಯಾಗಿ ನಡೆಯಿತು.ಶ್ರೀ ಸುಭುದೇಂದ್ರ ತೀರ್ಥರು ದೀಪ ಹಚ್ಚುವ ಮೂಲಕ ತುಂಗಾರತಿಗೆ(Tungarathi) ಚಾಲನೆ ನೀಡಿದ್ರು. ತುಂಗಾರತಿ ಪ್ರಯುಕ್ತ ಮಂತ್ರಾಲಯಕ್ಕೆ ಭಕ್ತಸಾಗರ ಹರಿದುಬಂದಿತ್ತು. ತುಂಗಭದ್ರಾ ನದಿ ತೀರದಲ್ಲಿ ನಡೆದ ತುಂಗಾರತಿ ಉತ್ಸವದಲ್ಲಿ ಭಾಗವಹಿಸಿದ ಭಕ್ತರು ನದಿಯಲ್ಲಿ ದೀಪಗಳನ್ನು ತೇಲಿಬಿಟ್ಟರು. ಬಳಿಕ ತುಂಗಭದ್ರಾ ನದಿಗೆ ಆರತಿ ನೆರವೇರಿಸಿದ್ರು. ಸಾವಿರಾರು ಭಕ್ತರ ಸಮ್ಮುಖದಲ್ಲಿ ತೆಪ್ಪೋತ್ಸವವೂ ವಿಜೃಂಭಣೆಯಿಂದ ಜರುಗಿತು. ಇನ್ನು ಶ್ರೀಮಠದಿಂದ ತುಂಗಭದ್ರಾ ನದಿಯವರೆಗೆ ಶ್ರೀಪ್ರಹ್ಲಾದ್ ರಾಜರ ಉತ್ಸವ ಮೂರ್ತಿಯನ್ನ ಹೊತ್ತ ಪಲ್ಲಕ್ಕಿ ಮೆರವಣಿಗೆ ನಡೆಯಿತು. ಆ ಬಳಿಕ ಮಂತ್ರಾಲಯ ಮಠದ ಪೀಠಾಧಿಪತಿಗಳು ಭಕ್ತರನ್ನು ಉದ್ದೇಶಿಸಿ ಅನುಗ್ರಹ ಸಂದೇಶ ನೀಡಿದ್ರು.ಕಾರ್ತಿಕ ಪೂರ್ಣಿಮೆಯ ನಿಮಿತ್ತ ತುಂಗಾರತಿ ಮತ್ತು ತೆಪ್ಪೋತ್ಸವದ ಸಂಭ್ರಮ ಮನೆಮಾಡಿತ್ತು.. ಸಾವಿರಾರು ಬಖ್ತರು ಉತ್ಸವದಲ್ಲಿ ಬಾಗಿಯಾಗಿ ರಾಯರ ಆರಾಧನೆಯೊಂದಿಗೆ ಸಂಭ್ರಮದಲ್ಲಿ ಭಾಗಿಯಾದರು. 

ಇದನ್ನೂ ವೀಕ್ಷಿಸಿ:  ಅನ್ನಭಾಗ್ಯದ 6 ಸಾವಿರ ಕ್ವಿಂಟಾಲ್ ಅಕ್ಕಿಯೇ ಮಾಯ..! 6 ತಿಂಗಳಲ್ಲಿ ಎರಡನೇ ಬಾರಿ ನಡೆಯಿತು ಕಳ್ಳತನ..!

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more