ಮಂತ್ರಾಲಯದಲ್ಲಿ ತುಂಗಾರತಿ & ತೆಪ್ಪೋತ್ಸವ ಸಂಭ್ರಮ..ಲಕ್ಷಾಂತರ ಭಕ್ತರಿಂದ ತುಂಬಿ ತುಳುಕಿದ ರಾಯರ ಮಠ

ಮಂತ್ರಾಲಯದಲ್ಲಿ ತುಂಗಾರತಿ & ತೆಪ್ಪೋತ್ಸವ ಸಂಭ್ರಮ..ಲಕ್ಷಾಂತರ ಭಕ್ತರಿಂದ ತುಂಬಿ ತುಳುಕಿದ ರಾಯರ ಮಠ

Published : Nov 28, 2023, 11:02 AM IST

ರಾಯರು ಅಂದ್ರೆ ಮೊದಲು ನೆನಪಾಗುವುದೇ ಮಂತ್ರಾಲಯ ಸನ್ನಿಧಿ. ಮಂತ್ರಾಲಯದಲ್ಲಿ ತುಂಗಾರತಿ & ತೆಪ್ಪೋತ್ಸವ ಸಂಭ್ರಮ ಮನೆ ಮಾಡಿತ್ತು.
 

ಕಾರ್ತಿಕ ಪೂರ್ಣಿಮೆ ಅಂಗವಾಗಿ ಶ್ರೀ ರಾಘವೇಂದ್ರ ಸ್ವಾಮಿ(Shri Raghavendra Swami) ನೆಲೆಸಿರುವ  ಮಂತ್ರಾಲಯದಲ್ಲಿ(Mantralaya) ತುಂಗಾರತಿ ಹಾಗೂ ತೆಪ್ಪೋತ್ಸವ ಅದ್ದೂರಿಯಾಗಿ ನಡೆಯಿತು.ಶ್ರೀ ಸುಭುದೇಂದ್ರ ತೀರ್ಥರು ದೀಪ ಹಚ್ಚುವ ಮೂಲಕ ತುಂಗಾರತಿಗೆ(Tungarathi) ಚಾಲನೆ ನೀಡಿದ್ರು. ತುಂಗಾರತಿ ಪ್ರಯುಕ್ತ ಮಂತ್ರಾಲಯಕ್ಕೆ ಭಕ್ತಸಾಗರ ಹರಿದುಬಂದಿತ್ತು. ತುಂಗಭದ್ರಾ ನದಿ ತೀರದಲ್ಲಿ ನಡೆದ ತುಂಗಾರತಿ ಉತ್ಸವದಲ್ಲಿ ಭಾಗವಹಿಸಿದ ಭಕ್ತರು ನದಿಯಲ್ಲಿ ದೀಪಗಳನ್ನು ತೇಲಿಬಿಟ್ಟರು. ಬಳಿಕ ತುಂಗಭದ್ರಾ ನದಿಗೆ ಆರತಿ ನೆರವೇರಿಸಿದ್ರು. ಸಾವಿರಾರು ಭಕ್ತರ ಸಮ್ಮುಖದಲ್ಲಿ ತೆಪ್ಪೋತ್ಸವವೂ ವಿಜೃಂಭಣೆಯಿಂದ ಜರುಗಿತು. ಇನ್ನು ಶ್ರೀಮಠದಿಂದ ತುಂಗಭದ್ರಾ ನದಿಯವರೆಗೆ ಶ್ರೀಪ್ರಹ್ಲಾದ್ ರಾಜರ ಉತ್ಸವ ಮೂರ್ತಿಯನ್ನ ಹೊತ್ತ ಪಲ್ಲಕ್ಕಿ ಮೆರವಣಿಗೆ ನಡೆಯಿತು. ಆ ಬಳಿಕ ಮಂತ್ರಾಲಯ ಮಠದ ಪೀಠಾಧಿಪತಿಗಳು ಭಕ್ತರನ್ನು ಉದ್ದೇಶಿಸಿ ಅನುಗ್ರಹ ಸಂದೇಶ ನೀಡಿದ್ರು.ಕಾರ್ತಿಕ ಪೂರ್ಣಿಮೆಯ ನಿಮಿತ್ತ ತುಂಗಾರತಿ ಮತ್ತು ತೆಪ್ಪೋತ್ಸವದ ಸಂಭ್ರಮ ಮನೆಮಾಡಿತ್ತು.. ಸಾವಿರಾರು ಬಖ್ತರು ಉತ್ಸವದಲ್ಲಿ ಬಾಗಿಯಾಗಿ ರಾಯರ ಆರಾಧನೆಯೊಂದಿಗೆ ಸಂಭ್ರಮದಲ್ಲಿ ಭಾಗಿಯಾದರು. 

ಇದನ್ನೂ ವೀಕ್ಷಿಸಿ:  ಅನ್ನಭಾಗ್ಯದ 6 ಸಾವಿರ ಕ್ವಿಂಟಾಲ್ ಅಕ್ಕಿಯೇ ಮಾಯ..! 6 ತಿಂಗಳಲ್ಲಿ ಎರಡನೇ ಬಾರಿ ನಡೆಯಿತು ಕಳ್ಳತನ..!

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more