Yakshagana : 2 ವರ್ಷಗಳ ಬಳಿಕ ಯಕ್ಷಗಾನ ಮೇಳಗಳ ತಿರುಗಾಟ ಆರಂಭ

Yakshagana : 2 ವರ್ಷಗಳ ಬಳಿಕ ಯಕ್ಷಗಾನ ಮೇಳಗಳ ತಿರುಗಾಟ ಆರಂಭ

Suvarna News   | Asianet News
Published : Nov 20, 2021, 12:54 PM ISTUpdated : Nov 20, 2021, 03:54 PM IST

- ಎರಡು ವರ್ಷಗಳ ಬಳಿಕ ರಂಗೇರಿದ ಯಕ್ಷಗಾನ ವೇದಿಕೆಗಳು 

-ಕೊರೋನಾ ಕಾಲದಲ್ಲಿ ಕಳೆಗುಂದಿದ್ದ ಯಕ್ಷಗಾನ ಕಲಾಕ್ಷೇತ್ರ

- ಕೊರೋನಾ, ಲಾಕ್‌ಡೌನ್‌ಗೆ ತತ್ತರಿಸಿದ್ದ ಮೇಳದ ಕಲಾವಿದರು
 

ಉಡುಪಿ (ನ. 20): ರಂಗದಮೇಲೆ ರಾಜರಂತೆ ಮೆರೆದವರೆಲ್ಲಾ, ಒಪ್ಪತ್ತಿನ ಊಟಕ್ಕೂ ಕಷ್ಟಪಡುವ ಸ್ಥಿತಿ ಇತ್ತು. ಅವಿಭಜಿತ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಎರಡೂವರೆ ಸಾವಿರಕ್ಕೂ ಅಧಿಕ ಯಕ್ಷಗಾನ ಕಲಾವಿದರು, ಪ್ರದರ್ಶನಕ್ಕೆ ಅವಕಾಶವಿಲ್ಲದೆ ಕಷ್ಟ ಅನುಭವಿಸುತ್ತಿದ್ದರು. ಇದೀಗ ಕೊರೋನಾ ಹದ್ದುಬಸ್ತಿಗೆ ಬಂದಿದೆ. ಯಕ್ಷಗಾನದ ರಂಗ ಮಂಚಕ್ಕೆ ಮತ್ತೆ ಜೀವ ಬಂದಿದೆ. 

ಎರಡು ಜಿಲ್ಲೆಗಳ 50ಕ್ಕೂ ಅಧಿಕ ಯಕ್ಷಗಾನ ಮೇಳಗಳು (Yakshagana Mela) ತಿರುಗಾಟದ ತಯಾರಿ ಆರಂಭಿಸಿದೆ. ಕುಂದಾಪುರದ ಹಟ್ಟಿಯಂಗಡಿ ಮೇಳ ಈಗಾಗಲೇ ಪ್ರದರ್ಶನ ಯಾತ್ರೆ ಶುರು ಮಾಡಿದೆ. ರಾತ್ರಿಪೂರ್ತಿ ಪ್ರದರ್ಶನ, ಕಾಲಮಿತಿಯ ಪ್ರದರ್ಶನ ಗಳಿಗೆ ವೇದಿಕೆ ಸಿದ್ಧವಾಗಿದೆ. ಹರಕೆಯ ಬಯಲಾಟ ಗಳಿಗೂ ದೇವಸ್ಥಾನಗಳು ಸಜ್ಜಾಗಿದೆ. ದೇವರಿಗೆ ಹರಕೆ ಹೊತ್ತು ಬೆಳಕಿನ ಸೇವೆ ನೀಡಲು ಕಾಯುತ್ತಿದ್ದ ಭಕ್ತರಿಗೂ ಸಂತೋಷವಾಗಿದೆ. ಕೊನೆಗೂ ಕಷ್ಟ ಬಗೆಹರಿಯುವ ಲಕ್ಷಣಗಳು ಕಾಣುತ್ತಿವೆ. ಚೌಕಿ ಮನೆಯಲ್ಲಿ ಬಣ್ಣ- ರಂಗದ ಮೇಲೆ ಬೆಳಕು  ಕಂಗೊಳಿಸುತ್ತಿದೆ. ಕರಾವಳಿಯ ಯಕ್ಷ ಪ್ರಿಯರು ಯಕ್ಷಗಾನಂ ಗೆಲ್ಗೆ ಎನ್ನುತ್ತಿದ್ದಾರೆ.
 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more