Udupi: ಸೇಂಟ್ ಮೆರೀಸ್ ದೀಪದಲ್ಲಿ ವಾಚ್ ಟವರ್, ಸೆಲ್ಫಿ ಪಾಯಿಂಟ್ ನಿರ್ಮಿಸಲು ತೀರ್ಮಾನ

Udupi: ಸೇಂಟ್ ಮೆರೀಸ್ ದೀಪದಲ್ಲಿ ವಾಚ್ ಟವರ್, ಸೆಲ್ಫಿ ಪಾಯಿಂಟ್ ನಿರ್ಮಿಸಲು ತೀರ್ಮಾನ

Published : Apr 30, 2022, 11:24 AM ISTUpdated : Apr 30, 2022, 11:52 AM IST

 ಮಲ್ಪೆ ಸೈಂಟ್ ಮೇರಿಸ್ ದ್ವೀಪ (St. Mary's Island) ವನ್ನು ಭೂಲೋಕದ ಸ್ವರ್ಗ ಅಂತಾನೆ ಕರೀತಾರೆ. ಶಿಲ್ಪಿಯ ಅಪೂರ್ವ ಕೆತ್ತನೆಯಂತೆ ಕಾಣುವ ಇಲ್ಲಿನ ಕಲ್ಲು ಗೋಪುರಗಳು, ತೀರದ ಉದ್ದಕ್ಕೂ ಹರಡಿರುವ ಚಿಪ್ಪು ರಾಶಿ, ಮಂದವಾದ ಅಲೆಗಳ ಭೂಸ್ಪರ್ಶ, ಇವೆಲ್ಲವನ್ನೂ ಕಾಣುವುದು ಒಂದು ಅಪೂರ್ವ ಅನುಭವ. ಒಮ್ಮೆ ದ್ವೀಪದೊಳಗೆ ಕಾಲಿಟ್ಟರೆ ಸಾಕು ಪ್ರವಾಸಿಗರು ರೋಮಾಂಚನಗೊಳ್ಳುತ್ತಾರೆ.

ಉಡುಪಿ (ಏ.30):  ಮಲ್ಪೆ ಸೈಂಟ್ ಮೇರಿಸ್ ದ್ವೀಪ (St. Mary's Island) ವನ್ನು ಭೂಲೋಕದ ಸ್ವರ್ಗ ಅಂತಾನೆ ಕರೀತಾರೆ. ಶಿಲ್ಪಿಯ ಅಪೂರ್ವ ಕೆತ್ತನೆಯಂತೆ ಕಾಣುವ ಇಲ್ಲಿನ ಕಲ್ಲು ಗೋಪುರಗಳು, ತೀರದ ಉದ್ದಕ್ಕೂ ಹರಡಿರುವ ಚಿಪ್ಪು ರಾಶಿ, ಮಂದವಾದ ಅಲೆಗಳ ಭೂಸ್ಪರ್ಶ, ಇವೆಲ್ಲವನ್ನೂ ಕಾಣುವುದು ಒಂದು ಅಪೂರ್ವ ಅನುಭವ. ಒಮ್ಮೆ ದ್ವೀಪದೊಳಗೆ ಕಾಲಿಟ್ಟರೆ ಸಾಕು ಪ್ರವಾಸಿಗರು ರೋಮಾಂಚನಗೊಳ್ಳುತ್ತಾರೆ. ಅದರಲ್ಲೂ ಸಮುದ್ರವನ್ನು ಮೊದಲಬಾರಿ ಕಾಣುವ ಜನರಂತೂ ಅಪಾಯದ ಅರಿವಿಲ್ಲದೆ ನೀರಿಗೆ ಇಳಿದು ಬಿಡುತ್ತಾರೆ. 

ದ್ವೀಪದಲ್ಲಿ ಒಂದು ಸೆಲ್ಫಿ (Selfie) ತೆಗೆದುಕೊಳ್ಳಬೇಕು ಅನ್ನೋದು ಬಹುತೇಕರ ಆಸೆಯಾಗಿರುತ್ತದೆ. ಸೆಲ್ಫಿ ಹುಚ್ಚಿಗೆ ನೀರಿಗಿಳಿದ ಪ್ರವಾಸಿಗರು ಜೀವ ಕಳೆದುಕೊಳ್ಳುತ್ತಿರುವ ಘಟನೆ ಆತಂಕಕಾರಿಯಾಗಿದೆ. ಕೇವಲ ಹತ್ತು ದಿನಗಳ ಅಂತರದಲ್ಲಿ ಸೈಂಟ್ ಮೇರಿಸ್ ದ್ವೀಪ ಮತ್ತು ಮಲ್ಪೆ ಪರಿಸರದಲ್ಲಿ ಆರು ಮಂದಿ ಅಸುನೀಗಿದ್ದಾರೆ. ಸೆಲ್ಫಿ ತೆಗೆಯಲು ಹೋಗಿಯೇ ಇವರೆಲ್ಲ ಪ್ರಾಣ ಕಳೆದುಕೊಂಡಿದ್ದಾರೆ ಅನ್ನೋದು ನಿಜಕ್ಕೂ ಬೇಸರದ ಸಂಗತಿಯಾಗಿದೆ.

 

ಪ್ರವಾಸದ ನೆನಪನ್ನು ಶಾಶ್ವತಗೊಳಿಸಲು ಹೊರಟವರು, ನೆನಪಿನ ಪುಟ ಸೇರಿ ಬಿಟ್ಟಿದ್ದಾರೆ. ಇನ್ನೂ ಹದಿಹರೆಯದ ಯುವಕ-ಯುವತಿಯರು ಕಾಲೇಜು ಪ್ರವಾಸಕ್ಕೆಂದು ಈ ದ್ವೀಪಕ್ಕೆ ಬಂದಿದ್ದರು. ಈ ರೀತಿ ಬಂದವರಲ್ಲಿ ಕೇರಳದ ಮೂವರು ವಿದ್ಯಾರ್ಥಿಗಳು, ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳು, ಹಾಗೂ ಮತ್ತೋರ್ವ ಪ್ರವಾಸಿಗ ಪ್ರತ್ಯೇಕ ಘಟನೆಗಳಲ್ಲಿ ಜೀವ ಕಳೆದುಕೊಂಡಿದ್ದಾರೆ. ಪ್ರವಾಸಿಗರನ್ನು ನಿಯಂತ್ರಿಸುವುದೇ ಜಿಲ್ಲಾಡಳಿತಕ್ಕೆ ತಲೆನೋವಾಗಿದೆ.

ಇದೀಗ ಸೈಂಟ್ ಮೇರಿಸ್ ದ್ವೀಪದ ಅಪಾಯವನ್ನು ಕಡಿಮೆಗೊಳಿಸಲು ಜಿಲ್ಲಾಡಳಿತ ಮುಂದಾಗಿದೆ. ಬಹುತೇಕ ಜನರು ಸೆಲ್ಫಿ ಕ್ರೇಜಿಗೆ ಬಲಿಯಾಗುತ್ತಿರುವುದು ಮನಗಂಡ ಜಿಲ್ಲಾಡಳಿತ, ಸುರಕ್ಷಿತ ಸ್ಥಳದಲ್ಲಿ ಸೆಲ್ಫಿ ಪಾಯಿಂಟ್ (Selfie Point) ನಿರ್ಮಾಣ ಮಾಡಲು ಮುಂದಾಗಿದೆ. ತಂಡವಾಗಿ ಪ್ರವಾಸಕ್ಕೆ ಬರುವ ಕಾಲೇಜಿನ ಸಿಬ್ಬಂದಿಗಳನ್ನು, ಮೊದಲೇ ಗುರುತಿಸಿ ಅವರಿಗೆ ಮಕ್ಕಳ ಜವಾಬ್ದಾರಿಯನ್ನು ನಿಭಾಯಿಸಲು ಮಾರ್ಗದರ್ಶನ ನೀಡಲು ತೀರ್ಮಾನಿಸಲಾಗಿದೆ.

ಬಹಳ ಮುಖ್ಯವಾಗಿ ಅಪಾಯಕಾರಿ ಸ್ಥಳಗಳನ್ನು ಗುರುತು ಮಾಡಿ ಬೋರ್ಡ್ ಹಾಕಲು ತೀರ್ಮಾನಿಸಲಾಗಿದೆ. ದ್ವೀಪದಲ್ಲಿ ವಾಚ್ ಟವರ್ ನಿರ್ಮಾಣ ಮಾಡಿ ಪ್ರವಾಸಿಗರ ಚಲನವಲನದ ಮೇಲೆ ಗಮನವಿಡಲು ನಿರ್ಧರಿಸಿದೆ. ಎಲ್ಲಕ್ಕೂ ಮುಖ್ಯವಾಗಿ, ಮೋಜು ಮಸ್ತಿಯ ಪ್ರವಾಸವನ್ನು ಕಡಿಮೆಗೊಳಿಸಿ, ಅಧ್ಯಯನ ಪ್ರವಾಸಕ್ಕೆ ಹೆಚ್ಚು ಒತ್ತು ನೀಡಲು ತೀರ್ಮಾನಿಸಲಾಗಿದೆ. ಇಲ್ಲಿದೆ ಅಪರೂಪದ ಭೂರಚನೆ ಅಧ್ಯಯನ ಯೋಗ್ಯವಾಗಿದ್ದು ಈ ದೃಷ್ಟಿಯಿಂದಲೇ ಬರುವ ಪ್ರವಾಸಿಗರಿಗೆ ಒತ್ತು ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more