Udupi: ಸೇಂಟ್ ಮೆರೀಸ್ ದೀಪದಲ್ಲಿ ವಾಚ್ ಟವರ್, ಸೆಲ್ಫಿ ಪಾಯಿಂಟ್ ನಿರ್ಮಿಸಲು ತೀರ್ಮಾನ

Udupi: ಸೇಂಟ್ ಮೆರೀಸ್ ದೀಪದಲ್ಲಿ ವಾಚ್ ಟವರ್, ಸೆಲ್ಫಿ ಪಾಯಿಂಟ್ ನಿರ್ಮಿಸಲು ತೀರ್ಮಾನ

Published : Apr 30, 2022, 11:24 AM ISTUpdated : Apr 30, 2022, 11:52 AM IST

 ಮಲ್ಪೆ ಸೈಂಟ್ ಮೇರಿಸ್ ದ್ವೀಪ (St. Mary's Island) ವನ್ನು ಭೂಲೋಕದ ಸ್ವರ್ಗ ಅಂತಾನೆ ಕರೀತಾರೆ. ಶಿಲ್ಪಿಯ ಅಪೂರ್ವ ಕೆತ್ತನೆಯಂತೆ ಕಾಣುವ ಇಲ್ಲಿನ ಕಲ್ಲು ಗೋಪುರಗಳು, ತೀರದ ಉದ್ದಕ್ಕೂ ಹರಡಿರುವ ಚಿಪ್ಪು ರಾಶಿ, ಮಂದವಾದ ಅಲೆಗಳ ಭೂಸ್ಪರ್ಶ, ಇವೆಲ್ಲವನ್ನೂ ಕಾಣುವುದು ಒಂದು ಅಪೂರ್ವ ಅನುಭವ. ಒಮ್ಮೆ ದ್ವೀಪದೊಳಗೆ ಕಾಲಿಟ್ಟರೆ ಸಾಕು ಪ್ರವಾಸಿಗರು ರೋಮಾಂಚನಗೊಳ್ಳುತ್ತಾರೆ.

ಉಡುಪಿ (ಏ.30):  ಮಲ್ಪೆ ಸೈಂಟ್ ಮೇರಿಸ್ ದ್ವೀಪ (St. Mary's Island) ವನ್ನು ಭೂಲೋಕದ ಸ್ವರ್ಗ ಅಂತಾನೆ ಕರೀತಾರೆ. ಶಿಲ್ಪಿಯ ಅಪೂರ್ವ ಕೆತ್ತನೆಯಂತೆ ಕಾಣುವ ಇಲ್ಲಿನ ಕಲ್ಲು ಗೋಪುರಗಳು, ತೀರದ ಉದ್ದಕ್ಕೂ ಹರಡಿರುವ ಚಿಪ್ಪು ರಾಶಿ, ಮಂದವಾದ ಅಲೆಗಳ ಭೂಸ್ಪರ್ಶ, ಇವೆಲ್ಲವನ್ನೂ ಕಾಣುವುದು ಒಂದು ಅಪೂರ್ವ ಅನುಭವ. ಒಮ್ಮೆ ದ್ವೀಪದೊಳಗೆ ಕಾಲಿಟ್ಟರೆ ಸಾಕು ಪ್ರವಾಸಿಗರು ರೋಮಾಂಚನಗೊಳ್ಳುತ್ತಾರೆ. ಅದರಲ್ಲೂ ಸಮುದ್ರವನ್ನು ಮೊದಲಬಾರಿ ಕಾಣುವ ಜನರಂತೂ ಅಪಾಯದ ಅರಿವಿಲ್ಲದೆ ನೀರಿಗೆ ಇಳಿದು ಬಿಡುತ್ತಾರೆ. 

ದ್ವೀಪದಲ್ಲಿ ಒಂದು ಸೆಲ್ಫಿ (Selfie) ತೆಗೆದುಕೊಳ್ಳಬೇಕು ಅನ್ನೋದು ಬಹುತೇಕರ ಆಸೆಯಾಗಿರುತ್ತದೆ. ಸೆಲ್ಫಿ ಹುಚ್ಚಿಗೆ ನೀರಿಗಿಳಿದ ಪ್ರವಾಸಿಗರು ಜೀವ ಕಳೆದುಕೊಳ್ಳುತ್ತಿರುವ ಘಟನೆ ಆತಂಕಕಾರಿಯಾಗಿದೆ. ಕೇವಲ ಹತ್ತು ದಿನಗಳ ಅಂತರದಲ್ಲಿ ಸೈಂಟ್ ಮೇರಿಸ್ ದ್ವೀಪ ಮತ್ತು ಮಲ್ಪೆ ಪರಿಸರದಲ್ಲಿ ಆರು ಮಂದಿ ಅಸುನೀಗಿದ್ದಾರೆ. ಸೆಲ್ಫಿ ತೆಗೆಯಲು ಹೋಗಿಯೇ ಇವರೆಲ್ಲ ಪ್ರಾಣ ಕಳೆದುಕೊಂಡಿದ್ದಾರೆ ಅನ್ನೋದು ನಿಜಕ್ಕೂ ಬೇಸರದ ಸಂಗತಿಯಾಗಿದೆ.

 

ಪ್ರವಾಸದ ನೆನಪನ್ನು ಶಾಶ್ವತಗೊಳಿಸಲು ಹೊರಟವರು, ನೆನಪಿನ ಪುಟ ಸೇರಿ ಬಿಟ್ಟಿದ್ದಾರೆ. ಇನ್ನೂ ಹದಿಹರೆಯದ ಯುವಕ-ಯುವತಿಯರು ಕಾಲೇಜು ಪ್ರವಾಸಕ್ಕೆಂದು ಈ ದ್ವೀಪಕ್ಕೆ ಬಂದಿದ್ದರು. ಈ ರೀತಿ ಬಂದವರಲ್ಲಿ ಕೇರಳದ ಮೂವರು ವಿದ್ಯಾರ್ಥಿಗಳು, ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳು, ಹಾಗೂ ಮತ್ತೋರ್ವ ಪ್ರವಾಸಿಗ ಪ್ರತ್ಯೇಕ ಘಟನೆಗಳಲ್ಲಿ ಜೀವ ಕಳೆದುಕೊಂಡಿದ್ದಾರೆ. ಪ್ರವಾಸಿಗರನ್ನು ನಿಯಂತ್ರಿಸುವುದೇ ಜಿಲ್ಲಾಡಳಿತಕ್ಕೆ ತಲೆನೋವಾಗಿದೆ.

ಇದೀಗ ಸೈಂಟ್ ಮೇರಿಸ್ ದ್ವೀಪದ ಅಪಾಯವನ್ನು ಕಡಿಮೆಗೊಳಿಸಲು ಜಿಲ್ಲಾಡಳಿತ ಮುಂದಾಗಿದೆ. ಬಹುತೇಕ ಜನರು ಸೆಲ್ಫಿ ಕ್ರೇಜಿಗೆ ಬಲಿಯಾಗುತ್ತಿರುವುದು ಮನಗಂಡ ಜಿಲ್ಲಾಡಳಿತ, ಸುರಕ್ಷಿತ ಸ್ಥಳದಲ್ಲಿ ಸೆಲ್ಫಿ ಪಾಯಿಂಟ್ (Selfie Point) ನಿರ್ಮಾಣ ಮಾಡಲು ಮುಂದಾಗಿದೆ. ತಂಡವಾಗಿ ಪ್ರವಾಸಕ್ಕೆ ಬರುವ ಕಾಲೇಜಿನ ಸಿಬ್ಬಂದಿಗಳನ್ನು, ಮೊದಲೇ ಗುರುತಿಸಿ ಅವರಿಗೆ ಮಕ್ಕಳ ಜವಾಬ್ದಾರಿಯನ್ನು ನಿಭಾಯಿಸಲು ಮಾರ್ಗದರ್ಶನ ನೀಡಲು ತೀರ್ಮಾನಿಸಲಾಗಿದೆ.

ಬಹಳ ಮುಖ್ಯವಾಗಿ ಅಪಾಯಕಾರಿ ಸ್ಥಳಗಳನ್ನು ಗುರುತು ಮಾಡಿ ಬೋರ್ಡ್ ಹಾಕಲು ತೀರ್ಮಾನಿಸಲಾಗಿದೆ. ದ್ವೀಪದಲ್ಲಿ ವಾಚ್ ಟವರ್ ನಿರ್ಮಾಣ ಮಾಡಿ ಪ್ರವಾಸಿಗರ ಚಲನವಲನದ ಮೇಲೆ ಗಮನವಿಡಲು ನಿರ್ಧರಿಸಿದೆ. ಎಲ್ಲಕ್ಕೂ ಮುಖ್ಯವಾಗಿ, ಮೋಜು ಮಸ್ತಿಯ ಪ್ರವಾಸವನ್ನು ಕಡಿಮೆಗೊಳಿಸಿ, ಅಧ್ಯಯನ ಪ್ರವಾಸಕ್ಕೆ ಹೆಚ್ಚು ಒತ್ತು ನೀಡಲು ತೀರ್ಮಾನಿಸಲಾಗಿದೆ. ಇಲ್ಲಿದೆ ಅಪರೂಪದ ಭೂರಚನೆ ಅಧ್ಯಯನ ಯೋಗ್ಯವಾಗಿದ್ದು ಈ ದೃಷ್ಟಿಯಿಂದಲೇ ಬರುವ ಪ್ರವಾಸಿಗರಿಗೆ ಒತ್ತು ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more