Udupi: ಸೇಂಟ್ ಮೆರೀಸ್ ದೀಪದಲ್ಲಿ ವಾಚ್ ಟವರ್, ಸೆಲ್ಫಿ ಪಾಯಿಂಟ್ ನಿರ್ಮಿಸಲು ತೀರ್ಮಾನ

Udupi: ಸೇಂಟ್ ಮೆರೀಸ್ ದೀಪದಲ್ಲಿ ವಾಚ್ ಟವರ್, ಸೆಲ್ಫಿ ಪಾಯಿಂಟ್ ನಿರ್ಮಿಸಲು ತೀರ್ಮಾನ

Published : Apr 30, 2022, 11:24 AM ISTUpdated : Apr 30, 2022, 11:52 AM IST

 ಮಲ್ಪೆ ಸೈಂಟ್ ಮೇರಿಸ್ ದ್ವೀಪ (St. Mary's Island) ವನ್ನು ಭೂಲೋಕದ ಸ್ವರ್ಗ ಅಂತಾನೆ ಕರೀತಾರೆ. ಶಿಲ್ಪಿಯ ಅಪೂರ್ವ ಕೆತ್ತನೆಯಂತೆ ಕಾಣುವ ಇಲ್ಲಿನ ಕಲ್ಲು ಗೋಪುರಗಳು, ತೀರದ ಉದ್ದಕ್ಕೂ ಹರಡಿರುವ ಚಿಪ್ಪು ರಾಶಿ, ಮಂದವಾದ ಅಲೆಗಳ ಭೂಸ್ಪರ್ಶ, ಇವೆಲ್ಲವನ್ನೂ ಕಾಣುವುದು ಒಂದು ಅಪೂರ್ವ ಅನುಭವ. ಒಮ್ಮೆ ದ್ವೀಪದೊಳಗೆ ಕಾಲಿಟ್ಟರೆ ಸಾಕು ಪ್ರವಾಸಿಗರು ರೋಮಾಂಚನಗೊಳ್ಳುತ್ತಾರೆ.

ಉಡುಪಿ (ಏ.30):  ಮಲ್ಪೆ ಸೈಂಟ್ ಮೇರಿಸ್ ದ್ವೀಪ (St. Mary's Island) ವನ್ನು ಭೂಲೋಕದ ಸ್ವರ್ಗ ಅಂತಾನೆ ಕರೀತಾರೆ. ಶಿಲ್ಪಿಯ ಅಪೂರ್ವ ಕೆತ್ತನೆಯಂತೆ ಕಾಣುವ ಇಲ್ಲಿನ ಕಲ್ಲು ಗೋಪುರಗಳು, ತೀರದ ಉದ್ದಕ್ಕೂ ಹರಡಿರುವ ಚಿಪ್ಪು ರಾಶಿ, ಮಂದವಾದ ಅಲೆಗಳ ಭೂಸ್ಪರ್ಶ, ಇವೆಲ್ಲವನ್ನೂ ಕಾಣುವುದು ಒಂದು ಅಪೂರ್ವ ಅನುಭವ. ಒಮ್ಮೆ ದ್ವೀಪದೊಳಗೆ ಕಾಲಿಟ್ಟರೆ ಸಾಕು ಪ್ರವಾಸಿಗರು ರೋಮಾಂಚನಗೊಳ್ಳುತ್ತಾರೆ. ಅದರಲ್ಲೂ ಸಮುದ್ರವನ್ನು ಮೊದಲಬಾರಿ ಕಾಣುವ ಜನರಂತೂ ಅಪಾಯದ ಅರಿವಿಲ್ಲದೆ ನೀರಿಗೆ ಇಳಿದು ಬಿಡುತ್ತಾರೆ. 

ದ್ವೀಪದಲ್ಲಿ ಒಂದು ಸೆಲ್ಫಿ (Selfie) ತೆಗೆದುಕೊಳ್ಳಬೇಕು ಅನ್ನೋದು ಬಹುತೇಕರ ಆಸೆಯಾಗಿರುತ್ತದೆ. ಸೆಲ್ಫಿ ಹುಚ್ಚಿಗೆ ನೀರಿಗಿಳಿದ ಪ್ರವಾಸಿಗರು ಜೀವ ಕಳೆದುಕೊಳ್ಳುತ್ತಿರುವ ಘಟನೆ ಆತಂಕಕಾರಿಯಾಗಿದೆ. ಕೇವಲ ಹತ್ತು ದಿನಗಳ ಅಂತರದಲ್ಲಿ ಸೈಂಟ್ ಮೇರಿಸ್ ದ್ವೀಪ ಮತ್ತು ಮಲ್ಪೆ ಪರಿಸರದಲ್ಲಿ ಆರು ಮಂದಿ ಅಸುನೀಗಿದ್ದಾರೆ. ಸೆಲ್ಫಿ ತೆಗೆಯಲು ಹೋಗಿಯೇ ಇವರೆಲ್ಲ ಪ್ರಾಣ ಕಳೆದುಕೊಂಡಿದ್ದಾರೆ ಅನ್ನೋದು ನಿಜಕ್ಕೂ ಬೇಸರದ ಸಂಗತಿಯಾಗಿದೆ.

 

ಪ್ರವಾಸದ ನೆನಪನ್ನು ಶಾಶ್ವತಗೊಳಿಸಲು ಹೊರಟವರು, ನೆನಪಿನ ಪುಟ ಸೇರಿ ಬಿಟ್ಟಿದ್ದಾರೆ. ಇನ್ನೂ ಹದಿಹರೆಯದ ಯುವಕ-ಯುವತಿಯರು ಕಾಲೇಜು ಪ್ರವಾಸಕ್ಕೆಂದು ಈ ದ್ವೀಪಕ್ಕೆ ಬಂದಿದ್ದರು. ಈ ರೀತಿ ಬಂದವರಲ್ಲಿ ಕೇರಳದ ಮೂವರು ವಿದ್ಯಾರ್ಥಿಗಳು, ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳು, ಹಾಗೂ ಮತ್ತೋರ್ವ ಪ್ರವಾಸಿಗ ಪ್ರತ್ಯೇಕ ಘಟನೆಗಳಲ್ಲಿ ಜೀವ ಕಳೆದುಕೊಂಡಿದ್ದಾರೆ. ಪ್ರವಾಸಿಗರನ್ನು ನಿಯಂತ್ರಿಸುವುದೇ ಜಿಲ್ಲಾಡಳಿತಕ್ಕೆ ತಲೆನೋವಾಗಿದೆ.

ಇದೀಗ ಸೈಂಟ್ ಮೇರಿಸ್ ದ್ವೀಪದ ಅಪಾಯವನ್ನು ಕಡಿಮೆಗೊಳಿಸಲು ಜಿಲ್ಲಾಡಳಿತ ಮುಂದಾಗಿದೆ. ಬಹುತೇಕ ಜನರು ಸೆಲ್ಫಿ ಕ್ರೇಜಿಗೆ ಬಲಿಯಾಗುತ್ತಿರುವುದು ಮನಗಂಡ ಜಿಲ್ಲಾಡಳಿತ, ಸುರಕ್ಷಿತ ಸ್ಥಳದಲ್ಲಿ ಸೆಲ್ಫಿ ಪಾಯಿಂಟ್ (Selfie Point) ನಿರ್ಮಾಣ ಮಾಡಲು ಮುಂದಾಗಿದೆ. ತಂಡವಾಗಿ ಪ್ರವಾಸಕ್ಕೆ ಬರುವ ಕಾಲೇಜಿನ ಸಿಬ್ಬಂದಿಗಳನ್ನು, ಮೊದಲೇ ಗುರುತಿಸಿ ಅವರಿಗೆ ಮಕ್ಕಳ ಜವಾಬ್ದಾರಿಯನ್ನು ನಿಭಾಯಿಸಲು ಮಾರ್ಗದರ್ಶನ ನೀಡಲು ತೀರ್ಮಾನಿಸಲಾಗಿದೆ.

ಬಹಳ ಮುಖ್ಯವಾಗಿ ಅಪಾಯಕಾರಿ ಸ್ಥಳಗಳನ್ನು ಗುರುತು ಮಾಡಿ ಬೋರ್ಡ್ ಹಾಕಲು ತೀರ್ಮಾನಿಸಲಾಗಿದೆ. ದ್ವೀಪದಲ್ಲಿ ವಾಚ್ ಟವರ್ ನಿರ್ಮಾಣ ಮಾಡಿ ಪ್ರವಾಸಿಗರ ಚಲನವಲನದ ಮೇಲೆ ಗಮನವಿಡಲು ನಿರ್ಧರಿಸಿದೆ. ಎಲ್ಲಕ್ಕೂ ಮುಖ್ಯವಾಗಿ, ಮೋಜು ಮಸ್ತಿಯ ಪ್ರವಾಸವನ್ನು ಕಡಿಮೆಗೊಳಿಸಿ, ಅಧ್ಯಯನ ಪ್ರವಾಸಕ್ಕೆ ಹೆಚ್ಚು ಒತ್ತು ನೀಡಲು ತೀರ್ಮಾನಿಸಲಾಗಿದೆ. ಇಲ್ಲಿದೆ ಅಪರೂಪದ ಭೂರಚನೆ ಅಧ್ಯಯನ ಯೋಗ್ಯವಾಗಿದ್ದು ಈ ದೃಷ್ಟಿಯಿಂದಲೇ ಬರುವ ಪ್ರವಾಸಿಗರಿಗೆ ಒತ್ತು ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more