Hijab Row: ಕಾಲೇಜಿಗೆ ಕೇಸರಿ ಪೇಟಾ ಧರಿಸಿ ಬಂದ ಎಂಜಿಎಂ ಕಾಲೇಜು ವಿದ್ಯಾರ್ಥಿಗಳು!

Hijab Row: ಕಾಲೇಜಿಗೆ ಕೇಸರಿ ಪೇಟಾ ಧರಿಸಿ ಬಂದ ಎಂಜಿಎಂ ಕಾಲೇಜು ವಿದ್ಯಾರ್ಥಿಗಳು!

Published : Feb 08, 2022, 12:28 PM IST

*ರಾಜ್ಯಾದ್ಯಂತ ವ್ಯಾಪಿಸಿದ ಹಿಜಾಬ್‌ Vs ಕೇಸರಿ ಗದ್ದಲ
*ಬಹುತೇಕ ಜಿಲ್ಲೆಗಳಲ್ಲಿ ಹಿಜಾಬ್‌ ಪರ, ವಿರೋಧ ಪ್ರತಿಭಟನೆ
*ಕಾಲೇಜಿಗೆ ಕೇಸರಿ ಪೇಟಾ ಧರಿಸಿ ಬಂದ  ವಿದ್ಯಾರ್ಥಿಗಳು

ಉಡುಪಿ (ಫೆ. 08): ಉಡುಪಿ ಪದವಿ ಪೂರ್ವ ಕಾಲೇಜಿನಲ್ಲಿ ಹೊತ್ತಿಕೊಂಡ ಹಿಜಾಬ್‌-ಕೇಸರಿ ಕಿಡಿ ಇದೀಗ ಉತ್ತರ ದಕ್ಷಿಣವೆನ್ನದೆ ರಾಜ್ಯವ್ಯಾಪಿ ವ್ಯಾಪಿಸಿಕೊಂಡಿದೆ.  ಈ ಮಧ್ಯೆ ಉಡುಪಿ ಎಂಜಿಎಂ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪೇಟಾ ಧರಿಸಿ ಕಾಲೇಜಿಗೆ ಬಂದಿದ್ದಾರೆ.  ಮತ್ತೊಂದೆಡೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂಸಿದ್ದಾರೆ. ‌ ರಾಜ್ಯ ಸರ್ಕಾರ ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶಿಸಿದ್ದರೂ ರಾಜ್ಯದ ಅನೇಕ ಜಿಲ್ಲೆಗಳ ಕಾಲೇಜುಗಳಲ್ಲಿ ‘ಹಿಜಾಬ್‌-ಕೇಸರಿ ಶಾಲು’ ಬಿಸಿ ಇನ್ನೂ ಹೆಚ್ಚಾಗುತ್ತಿದೆ. ಈ ಮಧ್ಯೆ ಈಗ ಕೇಸರಿ ಪೇಟಾ ಈಗ ಕಾಲೇಜಿಗೆ ಎಂಟ್ರಿ ನೀಡಿದೆ. 

ಇದನ್ನೂ ಓದಿ: Hijab Row: ಹಿಜಾಬ್ ನನ್ನ ಹಕ್ಕು, ಆದರೆ ಶಾಲೆ, ಕಾಲೇಜಿನ ಒಳಗೆ ಬೇಡ: ಮುಸ್ಲಿಂ ವಕ್ತಾರೆ

ಮುಸ್ಲಿಂ ವಿದ್ಯಾರ್ಥಿನಿಯರು ಏನೇ ಆದರೂ ನಾವು ಹಿಜಾಬ್‌ ಧರಿಸಿಯೇ ಸಿದ್ಧ ಎಂದು ಪಟ್ಟುಹಿಡಿದಿದ್ದರೆ, ಅವರು ಹಿಜಾಬ್‌ ಧರಿಸಿದರೆ ನಾವೂ ಕೇಸರಿ ಶಾಲು ಧರಿಸಿ ಬರುವುದಾಗಿ ಇತರೆ ವಿದ್ಯಾರ್ಥಿಗಳೂ ಹಠ ಹಿಡಿದಿದ್ದಾರೆ. ಇದರ ನಡುವೆಯೇ ಹಿಜಾಬ್‌ ಧರಿಸುವಿಕೆ ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಹೈಕೋರ್ಟ್‌ (High Court) ಮುಂದೆ ಬರಲಿದೆ.

ಹಿಜಾಬ್‌ ಪರ, ವಿರೋಧ ಪ್ರತಿಭಟನೆ ಮಧ್ಯೆ ಕಾಲೇಜು ಆಡಳಿತ ಮಂಡಳಿಗಳು ಪೇಚಿಗೀಡಾಗಿರುವ ಪ್ರಸಂಗಗಳು ಗದಗ, ಹಾವೇರಿ, ಉಡುಪಿ, ಮಡಿಕೇರಿ, ತುಮಕೂರು, ದಾವಣಗೆರೆ, ಮಂಡ್ಯ, ಹಾಸನ, ಶಿವಮೊಗ್ಗ, ರಾಯಚೂರು, ಬೀದರ್‌ ಸೇರಿದಂತೆ ಅನೇಕ ತಾಲೂಕು, ಜಿಲ್ಲಾ, ಹೋಬಳಿ ಕೇಂದ್ರಗಳ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಿಂದ ಸೋಮವಾರ ವರದಿಯಾಗಿವೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more