Hijab Row: ಕಾಲೇಜಿಗೆ ಕೇಸರಿ ಪೇಟಾ ಧರಿಸಿ ಬಂದ ಎಂಜಿಎಂ ಕಾಲೇಜು ವಿದ್ಯಾರ್ಥಿಗಳು!

Hijab Row: ಕಾಲೇಜಿಗೆ ಕೇಸರಿ ಪೇಟಾ ಧರಿಸಿ ಬಂದ ಎಂಜಿಎಂ ಕಾಲೇಜು ವಿದ್ಯಾರ್ಥಿಗಳು!

Published : Feb 08, 2022, 12:28 PM IST

*ರಾಜ್ಯಾದ್ಯಂತ ವ್ಯಾಪಿಸಿದ ಹಿಜಾಬ್‌ Vs ಕೇಸರಿ ಗದ್ದಲ
*ಬಹುತೇಕ ಜಿಲ್ಲೆಗಳಲ್ಲಿ ಹಿಜಾಬ್‌ ಪರ, ವಿರೋಧ ಪ್ರತಿಭಟನೆ
*ಕಾಲೇಜಿಗೆ ಕೇಸರಿ ಪೇಟಾ ಧರಿಸಿ ಬಂದ  ವಿದ್ಯಾರ್ಥಿಗಳು

ಉಡುಪಿ (ಫೆ. 08): ಉಡುಪಿ ಪದವಿ ಪೂರ್ವ ಕಾಲೇಜಿನಲ್ಲಿ ಹೊತ್ತಿಕೊಂಡ ಹಿಜಾಬ್‌-ಕೇಸರಿ ಕಿಡಿ ಇದೀಗ ಉತ್ತರ ದಕ್ಷಿಣವೆನ್ನದೆ ರಾಜ್ಯವ್ಯಾಪಿ ವ್ಯಾಪಿಸಿಕೊಂಡಿದೆ.  ಈ ಮಧ್ಯೆ ಉಡುಪಿ ಎಂಜಿಎಂ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪೇಟಾ ಧರಿಸಿ ಕಾಲೇಜಿಗೆ ಬಂದಿದ್ದಾರೆ.  ಮತ್ತೊಂದೆಡೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂಸಿದ್ದಾರೆ. ‌ ರಾಜ್ಯ ಸರ್ಕಾರ ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶಿಸಿದ್ದರೂ ರಾಜ್ಯದ ಅನೇಕ ಜಿಲ್ಲೆಗಳ ಕಾಲೇಜುಗಳಲ್ಲಿ ‘ಹಿಜಾಬ್‌-ಕೇಸರಿ ಶಾಲು’ ಬಿಸಿ ಇನ್ನೂ ಹೆಚ್ಚಾಗುತ್ತಿದೆ. ಈ ಮಧ್ಯೆ ಈಗ ಕೇಸರಿ ಪೇಟಾ ಈಗ ಕಾಲೇಜಿಗೆ ಎಂಟ್ರಿ ನೀಡಿದೆ. 

ಇದನ್ನೂ ಓದಿ: Hijab Row: ಹಿಜಾಬ್ ನನ್ನ ಹಕ್ಕು, ಆದರೆ ಶಾಲೆ, ಕಾಲೇಜಿನ ಒಳಗೆ ಬೇಡ: ಮುಸ್ಲಿಂ ವಕ್ತಾರೆ

ಮುಸ್ಲಿಂ ವಿದ್ಯಾರ್ಥಿನಿಯರು ಏನೇ ಆದರೂ ನಾವು ಹಿಜಾಬ್‌ ಧರಿಸಿಯೇ ಸಿದ್ಧ ಎಂದು ಪಟ್ಟುಹಿಡಿದಿದ್ದರೆ, ಅವರು ಹಿಜಾಬ್‌ ಧರಿಸಿದರೆ ನಾವೂ ಕೇಸರಿ ಶಾಲು ಧರಿಸಿ ಬರುವುದಾಗಿ ಇತರೆ ವಿದ್ಯಾರ್ಥಿಗಳೂ ಹಠ ಹಿಡಿದಿದ್ದಾರೆ. ಇದರ ನಡುವೆಯೇ ಹಿಜಾಬ್‌ ಧರಿಸುವಿಕೆ ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಹೈಕೋರ್ಟ್‌ (High Court) ಮುಂದೆ ಬರಲಿದೆ.

ಹಿಜಾಬ್‌ ಪರ, ವಿರೋಧ ಪ್ರತಿಭಟನೆ ಮಧ್ಯೆ ಕಾಲೇಜು ಆಡಳಿತ ಮಂಡಳಿಗಳು ಪೇಚಿಗೀಡಾಗಿರುವ ಪ್ರಸಂಗಗಳು ಗದಗ, ಹಾವೇರಿ, ಉಡುಪಿ, ಮಡಿಕೇರಿ, ತುಮಕೂರು, ದಾವಣಗೆರೆ, ಮಂಡ್ಯ, ಹಾಸನ, ಶಿವಮೊಗ್ಗ, ರಾಯಚೂರು, ಬೀದರ್‌ ಸೇರಿದಂತೆ ಅನೇಕ ತಾಲೂಕು, ಜಿಲ್ಲಾ, ಹೋಬಳಿ ಕೇಂದ್ರಗಳ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಿಂದ ಸೋಮವಾರ ವರದಿಯಾಗಿವೆ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more