Hijab Row: ಕಾಲೇಜಿಗೆ ಕೇಸರಿ ಪೇಟಾ ಧರಿಸಿ ಬಂದ ಎಂಜಿಎಂ ಕಾಲೇಜು ವಿದ್ಯಾರ್ಥಿಗಳು!

Hijab Row: ಕಾಲೇಜಿಗೆ ಕೇಸರಿ ಪೇಟಾ ಧರಿಸಿ ಬಂದ ಎಂಜಿಎಂ ಕಾಲೇಜು ವಿದ್ಯಾರ್ಥಿಗಳು!

Published : Feb 08, 2022, 12:28 PM IST

*ರಾಜ್ಯಾದ್ಯಂತ ವ್ಯಾಪಿಸಿದ ಹಿಜಾಬ್‌ Vs ಕೇಸರಿ ಗದ್ದಲ
*ಬಹುತೇಕ ಜಿಲ್ಲೆಗಳಲ್ಲಿ ಹಿಜಾಬ್‌ ಪರ, ವಿರೋಧ ಪ್ರತಿಭಟನೆ
*ಕಾಲೇಜಿಗೆ ಕೇಸರಿ ಪೇಟಾ ಧರಿಸಿ ಬಂದ  ವಿದ್ಯಾರ್ಥಿಗಳು

ಉಡುಪಿ (ಫೆ. 08): ಉಡುಪಿ ಪದವಿ ಪೂರ್ವ ಕಾಲೇಜಿನಲ್ಲಿ ಹೊತ್ತಿಕೊಂಡ ಹಿಜಾಬ್‌-ಕೇಸರಿ ಕಿಡಿ ಇದೀಗ ಉತ್ತರ ದಕ್ಷಿಣವೆನ್ನದೆ ರಾಜ್ಯವ್ಯಾಪಿ ವ್ಯಾಪಿಸಿಕೊಂಡಿದೆ.  ಈ ಮಧ್ಯೆ ಉಡುಪಿ ಎಂಜಿಎಂ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪೇಟಾ ಧರಿಸಿ ಕಾಲೇಜಿಗೆ ಬಂದಿದ್ದಾರೆ.  ಮತ್ತೊಂದೆಡೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂಸಿದ್ದಾರೆ. ‌ ರಾಜ್ಯ ಸರ್ಕಾರ ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶಿಸಿದ್ದರೂ ರಾಜ್ಯದ ಅನೇಕ ಜಿಲ್ಲೆಗಳ ಕಾಲೇಜುಗಳಲ್ಲಿ ‘ಹಿಜಾಬ್‌-ಕೇಸರಿ ಶಾಲು’ ಬಿಸಿ ಇನ್ನೂ ಹೆಚ್ಚಾಗುತ್ತಿದೆ. ಈ ಮಧ್ಯೆ ಈಗ ಕೇಸರಿ ಪೇಟಾ ಈಗ ಕಾಲೇಜಿಗೆ ಎಂಟ್ರಿ ನೀಡಿದೆ. 

ಇದನ್ನೂ ಓದಿ: Hijab Row: ಹಿಜಾಬ್ ನನ್ನ ಹಕ್ಕು, ಆದರೆ ಶಾಲೆ, ಕಾಲೇಜಿನ ಒಳಗೆ ಬೇಡ: ಮುಸ್ಲಿಂ ವಕ್ತಾರೆ

ಮುಸ್ಲಿಂ ವಿದ್ಯಾರ್ಥಿನಿಯರು ಏನೇ ಆದರೂ ನಾವು ಹಿಜಾಬ್‌ ಧರಿಸಿಯೇ ಸಿದ್ಧ ಎಂದು ಪಟ್ಟುಹಿಡಿದಿದ್ದರೆ, ಅವರು ಹಿಜಾಬ್‌ ಧರಿಸಿದರೆ ನಾವೂ ಕೇಸರಿ ಶಾಲು ಧರಿಸಿ ಬರುವುದಾಗಿ ಇತರೆ ವಿದ್ಯಾರ್ಥಿಗಳೂ ಹಠ ಹಿಡಿದಿದ್ದಾರೆ. ಇದರ ನಡುವೆಯೇ ಹಿಜಾಬ್‌ ಧರಿಸುವಿಕೆ ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಹೈಕೋರ್ಟ್‌ (High Court) ಮುಂದೆ ಬರಲಿದೆ.

ಹಿಜಾಬ್‌ ಪರ, ವಿರೋಧ ಪ್ರತಿಭಟನೆ ಮಧ್ಯೆ ಕಾಲೇಜು ಆಡಳಿತ ಮಂಡಳಿಗಳು ಪೇಚಿಗೀಡಾಗಿರುವ ಪ್ರಸಂಗಗಳು ಗದಗ, ಹಾವೇರಿ, ಉಡುಪಿ, ಮಡಿಕೇರಿ, ತುಮಕೂರು, ದಾವಣಗೆರೆ, ಮಂಡ್ಯ, ಹಾಸನ, ಶಿವಮೊಗ್ಗ, ರಾಯಚೂರು, ಬೀದರ್‌ ಸೇರಿದಂತೆ ಅನೇಕ ತಾಲೂಕು, ಜಿಲ್ಲಾ, ಹೋಬಳಿ ಕೇಂದ್ರಗಳ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಿಂದ ಸೋಮವಾರ ವರದಿಯಾಗಿವೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more