ಏಳು ವರ್ಷಗಳಿಂದ ಕೆಲಸಕ್ಕೆ ಚಕ್ಕರ್.. ಸಂಬಳಕ್ಕೆ ಹಾಜರ್..!

ಏಳು ವರ್ಷಗಳಿಂದ ಕೆಲಸಕ್ಕೆ ಚಕ್ಕರ್.. ಸಂಬಳಕ್ಕೆ ಹಾಜರ್..!

Published : Aug 21, 2023, 11:03 AM ISTUpdated : Aug 21, 2023, 11:11 AM IST

ಮಕ್ಕಳಿಗೆ ವಿದ್ಯೆ ಬುದ್ಧಿ ಕಲಿಸುವ ಸಮಾಜದ ಗೌರವಾನ್ವಿತ ಹುದ್ದೆ ಶಿಕ್ಷಕ ವೃತ್ತಿ. ಗ್ರಾಮೀಣ ಪ್ರದೇಶದ ಶಾಲೆಯಲ್ಲಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿದೀಪವಾಗಬೇಕಾಗಿದ್ದ ಶಿಕ್ಷಕ ಕಳೆದ ಹಲವು ವರ್ಷಗಳಿಂದ ಶಾಲೆಗೆ ಸರಿಯಾಗಿ ಹಾಜರಾಗಿಲ್ಲ. ಮಕ್ಕಳಿಗೆ ಪಾಠವನ್ನೇ ಮಾಡದೆ ತಿಂಗಳ ಸಂಬಳ ಎಣಿಸುತ್ತಿದ್ದ ಶಿಕ್ಷಕಕನ್ನು ಈಗ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆನಗಳ್ಳಿ. ಉಡುಪಿ(Udupi) ಜಿಲ್ಲೆ ಕುಂದಾಪುರ ತಾಲೂಕಿನ  ಗ್ರಾಮೀಣಿ ಪ್ರದೇಶದಲ್ಲಿರೋ ಈ ಶಾಲೆಗೆ ಮೂವರು ಶಿಕ್ಷಕರಿದ್ದಾರೆ. ಆದರೆ ಮಕ್ಕಳಿಗೆ ಪಾಠ ಮಾಡೋದು ಮಾತ್ರ ಕೇವಲ ಇಬ್ಬರು ಶಿಕ್ಷಕರು. ಕಳೆದ 7 ಷರ್ವಗಳಿಂದಲೂ ಶಿಕ್ಷನೊಬ್ಬ(Teacher) ಶಾಲೆಗೆ ಬರ್ತಿಲ್ಲ. ಹಾಗಂತ ಸಂಬಳ ಮಾತ್ರ ಬಿಟ್ಟಿಲ್ಲ. ದಿನಕರ್ ಶೆಟ್ಟಿ ಎಂಬ ಶಿಕ್ಷಕ ಈ ಶಾಲೆಯಲ್ಲಿ ಸಹ ಶಿಕ್ಷಕರಾಗಿದ್ದಾರೆ. ಆದ್ರೆ ಕಳೆದ 7 ವರ್ಷದಿಂದ ಮಕ್ಕಳಿಗೆ ಪಾಠ(Teaching) ಮಾಡಿಲ್ಲ. ಶಾಲೆಯ ಯಾವ ಕಾರ್ಯಕ್ರಮದಲ್ಲೂ ಕಾಣಿಸಿಕೊಂಡಿಲ್ಲ. ನನಗೂ ಶಾಲೆಗೂ ಸಂಬಂಧವೇ ಇಲ್ಲ ಎನ್ನುವಂತಿದ್ದ ದಿನಕರ್ ಶೆಟ್ಟಿ ತಿಂಗಳ ಕೊನೆಯಲ್ಲಿ ಸಂಬಳ ಮಾತ್ರ ಬಿಟ್ಟಿಲ್ಲ. ಈತನ ಕಳ್ಳಾಟವನ್ನು ಈಗ ಗ್ರಾಮ ಪಂಚಾಯತ್ ಅಧ್ಯಕ್ಷ ಲಾರೆನ್ಸ್ ಡಿಸೋಜಾ ಬಯಲಿಗೆಳೆದಿದ್ದಾರೆ. ಲಾರೆನ್ಸ್ ಡಿಸೋ ಜಾ ಶಿಕ್ಷಣ ಇಲಾಖೆಗೆ ದೂರು ನೀಡಿದ ಬೆನ್ನಲ್ಲೇ ಈಗ ದಿನಕರ್ ಶೆಟ್ಟಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ದಿನಕರ ಶೆಟ್ಟಿ ರಾಜ್ಯ ಸರಕಾರಿ ನೌಕರರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಕೂಡ ಹೌದು. ಇದೇ ಕಾರಣಕ್ಕೆ ಉಳಿದ ಶಿಕ್ಷಕರು ಯಾರು ಈತನ ವಿರುದ್ಧ ದೂರು ಕೊಟ್ಟಿರಲಿಲ್ಲ. ಗ್ರಾಮ ಪಂಚಾಯತ್ ಅಧ್ಯಕ್ಷರು ದೂರು ಕೊಟ್ಟ ಬಳಿಕ ಶಾಲೆಗೆ ಶಿಕ್ಷಣ ಇಲಾಖೆಯ(Department of Education) ಅಧಿಕಾರಿಗಳು ಭೇಟಿ ನೀಡಿದ್ದಾರೆ. ಆಗ ದಿನಕರ್ ಶೆಟ್ಟಿ ಗೈರುಹಾಜರಿ ಸಾಬೀತಾಗಿದೆ. ಇದರ ಬೆನ್ನಲ್ಲೇ ಅಮಾನತು ಶಿಕ್ಷೆ ವಿಧಿಸಲಾಗಿದೆ.

ಇದನ್ನೂ ವೀಕ್ಷಿಸಿ:  ಹಾರ್ಟ್ ಅಟ್ಯಾಕ್ ಸಾವಿನ ಪ್ರಮಾಣ ತಗ್ಗಿಸಲು ಹೊಸ ಯೋಜನೆ : ಏನಿದು AED ಟ್ರೀಟ್ಮೆಂಟ್..?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more