ಏಳು ವರ್ಷಗಳಿಂದ ಕೆಲಸಕ್ಕೆ ಚಕ್ಕರ್.. ಸಂಬಳಕ್ಕೆ ಹಾಜರ್..!

ಏಳು ವರ್ಷಗಳಿಂದ ಕೆಲಸಕ್ಕೆ ಚಕ್ಕರ್.. ಸಂಬಳಕ್ಕೆ ಹಾಜರ್..!

Published : Aug 21, 2023, 11:03 AM ISTUpdated : Aug 21, 2023, 11:11 AM IST

ಮಕ್ಕಳಿಗೆ ವಿದ್ಯೆ ಬುದ್ಧಿ ಕಲಿಸುವ ಸಮಾಜದ ಗೌರವಾನ್ವಿತ ಹುದ್ದೆ ಶಿಕ್ಷಕ ವೃತ್ತಿ. ಗ್ರಾಮೀಣ ಪ್ರದೇಶದ ಶಾಲೆಯಲ್ಲಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿದೀಪವಾಗಬೇಕಾಗಿದ್ದ ಶಿಕ್ಷಕ ಕಳೆದ ಹಲವು ವರ್ಷಗಳಿಂದ ಶಾಲೆಗೆ ಸರಿಯಾಗಿ ಹಾಜರಾಗಿಲ್ಲ. ಮಕ್ಕಳಿಗೆ ಪಾಠವನ್ನೇ ಮಾಡದೆ ತಿಂಗಳ ಸಂಬಳ ಎಣಿಸುತ್ತಿದ್ದ ಶಿಕ್ಷಕಕನ್ನು ಈಗ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆನಗಳ್ಳಿ. ಉಡುಪಿ(Udupi) ಜಿಲ್ಲೆ ಕುಂದಾಪುರ ತಾಲೂಕಿನ  ಗ್ರಾಮೀಣಿ ಪ್ರದೇಶದಲ್ಲಿರೋ ಈ ಶಾಲೆಗೆ ಮೂವರು ಶಿಕ್ಷಕರಿದ್ದಾರೆ. ಆದರೆ ಮಕ್ಕಳಿಗೆ ಪಾಠ ಮಾಡೋದು ಮಾತ್ರ ಕೇವಲ ಇಬ್ಬರು ಶಿಕ್ಷಕರು. ಕಳೆದ 7 ಷರ್ವಗಳಿಂದಲೂ ಶಿಕ್ಷನೊಬ್ಬ(Teacher) ಶಾಲೆಗೆ ಬರ್ತಿಲ್ಲ. ಹಾಗಂತ ಸಂಬಳ ಮಾತ್ರ ಬಿಟ್ಟಿಲ್ಲ. ದಿನಕರ್ ಶೆಟ್ಟಿ ಎಂಬ ಶಿಕ್ಷಕ ಈ ಶಾಲೆಯಲ್ಲಿ ಸಹ ಶಿಕ್ಷಕರಾಗಿದ್ದಾರೆ. ಆದ್ರೆ ಕಳೆದ 7 ವರ್ಷದಿಂದ ಮಕ್ಕಳಿಗೆ ಪಾಠ(Teaching) ಮಾಡಿಲ್ಲ. ಶಾಲೆಯ ಯಾವ ಕಾರ್ಯಕ್ರಮದಲ್ಲೂ ಕಾಣಿಸಿಕೊಂಡಿಲ್ಲ. ನನಗೂ ಶಾಲೆಗೂ ಸಂಬಂಧವೇ ಇಲ್ಲ ಎನ್ನುವಂತಿದ್ದ ದಿನಕರ್ ಶೆಟ್ಟಿ ತಿಂಗಳ ಕೊನೆಯಲ್ಲಿ ಸಂಬಳ ಮಾತ್ರ ಬಿಟ್ಟಿಲ್ಲ. ಈತನ ಕಳ್ಳಾಟವನ್ನು ಈಗ ಗ್ರಾಮ ಪಂಚಾಯತ್ ಅಧ್ಯಕ್ಷ ಲಾರೆನ್ಸ್ ಡಿಸೋಜಾ ಬಯಲಿಗೆಳೆದಿದ್ದಾರೆ. ಲಾರೆನ್ಸ್ ಡಿಸೋ ಜಾ ಶಿಕ್ಷಣ ಇಲಾಖೆಗೆ ದೂರು ನೀಡಿದ ಬೆನ್ನಲ್ಲೇ ಈಗ ದಿನಕರ್ ಶೆಟ್ಟಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ದಿನಕರ ಶೆಟ್ಟಿ ರಾಜ್ಯ ಸರಕಾರಿ ನೌಕರರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಕೂಡ ಹೌದು. ಇದೇ ಕಾರಣಕ್ಕೆ ಉಳಿದ ಶಿಕ್ಷಕರು ಯಾರು ಈತನ ವಿರುದ್ಧ ದೂರು ಕೊಟ್ಟಿರಲಿಲ್ಲ. ಗ್ರಾಮ ಪಂಚಾಯತ್ ಅಧ್ಯಕ್ಷರು ದೂರು ಕೊಟ್ಟ ಬಳಿಕ ಶಾಲೆಗೆ ಶಿಕ್ಷಣ ಇಲಾಖೆಯ(Department of Education) ಅಧಿಕಾರಿಗಳು ಭೇಟಿ ನೀಡಿದ್ದಾರೆ. ಆಗ ದಿನಕರ್ ಶೆಟ್ಟಿ ಗೈರುಹಾಜರಿ ಸಾಬೀತಾಗಿದೆ. ಇದರ ಬೆನ್ನಲ್ಲೇ ಅಮಾನತು ಶಿಕ್ಷೆ ವಿಧಿಸಲಾಗಿದೆ.

ಇದನ್ನೂ ವೀಕ್ಷಿಸಿ:  ಹಾರ್ಟ್ ಅಟ್ಯಾಕ್ ಸಾವಿನ ಪ್ರಮಾಣ ತಗ್ಗಿಸಲು ಹೊಸ ಯೋಜನೆ : ಏನಿದು AED ಟ್ರೀಟ್ಮೆಂಟ್..?

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more