Chikkamagaluru: 21 ತಲೆಮಾರುಗಳಿಂದ ನಡೆದುಕೊಂಡು ಬರ್ತಿರೋ ವಿಶಿಷ್ಟ ಗದ್ದೆ ನಾಟಿ ಸಂಪ್ರದಾಯ

Chikkamagaluru: 21 ತಲೆಮಾರುಗಳಿಂದ ನಡೆದುಕೊಂಡು ಬರ್ತಿರೋ ವಿಶಿಷ್ಟ ಗದ್ದೆ ನಾಟಿ ಸಂಪ್ರದಾಯ

Published : Aug 04, 2022, 03:47 PM IST

ಕಳಸ ತಾಲೂಕಿನ ಹೊರನಾಡು ಗ್ರಾಮದಲ್ಲಿ ಕಳೆದ 21 ತಲೆಮಾರುಗಳಿಂದ ಅಂದ್ರೆ ಸುಮಾರು 500 ವರ್ಷಗಳಿಂದ ನಡೆದುಕೊಂಡು ಬಂದ ಗ್ರಾಮೀಣ ಭಾಗದ ಸಂಪ್ರದಾಯ ಇಂದಿಗೂ ಜೀವಂತವಾಗಿದೆ.

ಚಿಕ್ಕಮಗಳೂರು (ಆ. 04): ಇಲ್ಲಿನ ಕಳಸ ತಾಲೂಕಿನ ಹೊರನಾಡು ಗ್ರಾಮದಲ್ಲಿ ಕಳೆದ 21 ತಲೆಮಾರುಗಳಿಂದ ಅಂದ್ರೆ ಸುಮಾರು 500 ವರ್ಷಗಳಿಂದ ನಡೆದುಕೊಂಡು ಬಂದ ಗ್ರಾಮೀಣ ಭಾಗದ ಸಂಪ್ರದಾಯ ಇಂದಿಗೂ ಜೀವಂತವಾಗಿದೆ. ಪ್ರತಿ ವರ್ಷ ಗದ್ದೆ ನಾಟಿ ಮಾಡುವ ಸಮಯದಲ್ಲಿ ಹೊರನಾಡು ಗ್ರಾಮದ ದೊಡ್ಡಮನೆ ರಾಜೇಂದ್ರ ಹೆಗ್ಗಡೆ ಎಂಬುವರ ಮನೆಯ ಗದ್ದೆ ನಾಟಿ ಮಾಡಿದ ಬಳಿಕವೇ ಊರಿನ ಉಳಿದ ಗದ್ದೆಗಳನ್ನ ನಾಟಿ ಮಾಡೋದು. ದೊಡ್ಡಮನೆ ಗದ್ದೆಯ ನಾಟಿ ಮಾಡುವ ದಿನ ಗ್ರಾಮದ ಪ್ರತಿಯೊಂದು ಮನೆಯಿಂದಲೂ ಒಬ್ಬೊಬ್ಬರು ಹೋಗಿ ನಾಟಿ ಮಾಡುವ ಸಂಪ್ರದಾಯಕ್ಕೆ ಐದು ಶತಮಾನಗಳ ಇತಿಹಾಸವಿದೆ. ಅಂದು ಗಂಡಸರು-ಹೆಂಗಸರು ಎಲ್ಲಾರೂ ಗದ್ದೆಯನ್ನ ನಾಟಿ ಮಾಡುತ್ತಾರೆ. ಮರು ದಿನದಿಂದ ಗ್ರಾಮದ ಬೇರೆ ಗದ್ದೆಗಳನ್ನ ನಾಟಿ ಮಾಡುತ್ತಾರೆ. 

ಇನ್ನು ಈ ದೊಡ್ಡ ಮನೆ ಹೆಗ್ಗಡೆಯವರನ್ನ ಅನಾದಿ ಕಾಲದಿಂದ ಗ್ರಾಮದ ಜನ ಗೌರವಿಸಿಕೊಂಡು ಬಂದಿದ್ದಾರೆ. ಇವರನ್ನ ಪಾಳೇಗಾರರು, ಗೌಡರು, ಪಟೇಲರು ಎಂಬ ಮುಂತಾದ ಹೆಸರಿನಿಂದಲೂ ಕರೆಯುತ್ತಾರೆ. ಇಂದು ನಡೆದ ಈ ನಾಟಿ ಕಾರ್ಯಕ್ರಮದಲ್ಲಿ ಮೂಡಿಗೆರೆ ಶಾಸಕ ಕುಮಾರಸ್ವಾಮಿ ಕೂಡ ಭಾಗಿಯಾಗಿದ್ದರು. ನಾನು ಕಳೆದ ವರ್ಷ ಬರಲು ಸಾಧ್ಯವಾಗಿರಲಿಲ್ಲ. ಈ ವರ್ಷ ಬಂದಿದ್ದೇನೆ. ಈ ದಿನ ಗ್ರಾಮದ ಪ್ರತಿ ಮನೆಯಲ್ಲೂ ಹಬ್ಬದ ವಾತಾವರಣ ಏರ್ಪಟ್ಟಿರುತ್ತೆ. ಭೂಮಿಯ ಅಂತರ್ಜಲ ಹೆಚ್ಚಲು ಹೆಚ್ಚು ಗದ್ದೆಗಳನ್ನ ನಾಟಿ ಮಾಡಬೇಕು. ಇಂತಹಾ ಕಾರ್ಯಕ್ರಮಕ್ಕೆ ಉತ್ತೇಜನ ನೀಡಲು ಈ ದಿನ ನಾನು ಗದ್ದೆಗಿಳಿದು ನಾಟಿ ಮಾಡಿದ್ದೇನೆ ಎಂದು 21 ತಲೆಮಾರಿನ ಈ ಕಾರ್ಯಕ್ರಮವನ್ನ ಶ್ಲಾಘಿಸಿದ್ದಾರೆ. 

 ಜಗತ್ತು ಆಧುನಿಕತೆಗೆ ಕಾಲಿಟ್ಟಂತೆಲ್ಲಾ ಭವ್ಯ ಭಾರತದ ಪುರಾತನ ಸಂಸ್ಕೃತಿ, ರೂಢಿ-ಸಂಪ್ರದಾಯ ಕಣ್ಮರೆಯಾಗುತ್ತಿದೆ. ಅಲ್ಲೊಂದು  ಇಲ್ಲೊಂದು ಹಳ್ಳಿಯಲ್ಲಿ ನಮ್ಮ ಪರಂಪರೆಯ ಹೆಜ್ಜೆ ಗುರುತುಗಳು ಉಳಿದಿವೆ. ಆದ್ರೆ, ಈ ರೀತಿ 500 ವರ್ಷಗಳಿಂದ ಹಳ್ಳಿಯೊಂದರಲ್ಲಿ ಒಂದು ಸಂಪ್ರದಾಯ ಆಧುನಿಕತೆಯ ಭರಾಟೆಯ ಮಧ್ಯೆ ಇಂದಿಗೂ ನಿರಂತರವಾಗಿದೆ. 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more