Chikkamagaluru: 21 ತಲೆಮಾರುಗಳಿಂದ ನಡೆದುಕೊಂಡು ಬರ್ತಿರೋ ವಿಶಿಷ್ಟ ಗದ್ದೆ ನಾಟಿ ಸಂಪ್ರದಾಯ

Chikkamagaluru: 21 ತಲೆಮಾರುಗಳಿಂದ ನಡೆದುಕೊಂಡು ಬರ್ತಿರೋ ವಿಶಿಷ್ಟ ಗದ್ದೆ ನಾಟಿ ಸಂಪ್ರದಾಯ

Published : Aug 04, 2022, 03:47 PM IST

ಕಳಸ ತಾಲೂಕಿನ ಹೊರನಾಡು ಗ್ರಾಮದಲ್ಲಿ ಕಳೆದ 21 ತಲೆಮಾರುಗಳಿಂದ ಅಂದ್ರೆ ಸುಮಾರು 500 ವರ್ಷಗಳಿಂದ ನಡೆದುಕೊಂಡು ಬಂದ ಗ್ರಾಮೀಣ ಭಾಗದ ಸಂಪ್ರದಾಯ ಇಂದಿಗೂ ಜೀವಂತವಾಗಿದೆ.

ಚಿಕ್ಕಮಗಳೂರು (ಆ. 04): ಇಲ್ಲಿನ ಕಳಸ ತಾಲೂಕಿನ ಹೊರನಾಡು ಗ್ರಾಮದಲ್ಲಿ ಕಳೆದ 21 ತಲೆಮಾರುಗಳಿಂದ ಅಂದ್ರೆ ಸುಮಾರು 500 ವರ್ಷಗಳಿಂದ ನಡೆದುಕೊಂಡು ಬಂದ ಗ್ರಾಮೀಣ ಭಾಗದ ಸಂಪ್ರದಾಯ ಇಂದಿಗೂ ಜೀವಂತವಾಗಿದೆ. ಪ್ರತಿ ವರ್ಷ ಗದ್ದೆ ನಾಟಿ ಮಾಡುವ ಸಮಯದಲ್ಲಿ ಹೊರನಾಡು ಗ್ರಾಮದ ದೊಡ್ಡಮನೆ ರಾಜೇಂದ್ರ ಹೆಗ್ಗಡೆ ಎಂಬುವರ ಮನೆಯ ಗದ್ದೆ ನಾಟಿ ಮಾಡಿದ ಬಳಿಕವೇ ಊರಿನ ಉಳಿದ ಗದ್ದೆಗಳನ್ನ ನಾಟಿ ಮಾಡೋದು. ದೊಡ್ಡಮನೆ ಗದ್ದೆಯ ನಾಟಿ ಮಾಡುವ ದಿನ ಗ್ರಾಮದ ಪ್ರತಿಯೊಂದು ಮನೆಯಿಂದಲೂ ಒಬ್ಬೊಬ್ಬರು ಹೋಗಿ ನಾಟಿ ಮಾಡುವ ಸಂಪ್ರದಾಯಕ್ಕೆ ಐದು ಶತಮಾನಗಳ ಇತಿಹಾಸವಿದೆ. ಅಂದು ಗಂಡಸರು-ಹೆಂಗಸರು ಎಲ್ಲಾರೂ ಗದ್ದೆಯನ್ನ ನಾಟಿ ಮಾಡುತ್ತಾರೆ. ಮರು ದಿನದಿಂದ ಗ್ರಾಮದ ಬೇರೆ ಗದ್ದೆಗಳನ್ನ ನಾಟಿ ಮಾಡುತ್ತಾರೆ. 

ಇನ್ನು ಈ ದೊಡ್ಡ ಮನೆ ಹೆಗ್ಗಡೆಯವರನ್ನ ಅನಾದಿ ಕಾಲದಿಂದ ಗ್ರಾಮದ ಜನ ಗೌರವಿಸಿಕೊಂಡು ಬಂದಿದ್ದಾರೆ. ಇವರನ್ನ ಪಾಳೇಗಾರರು, ಗೌಡರು, ಪಟೇಲರು ಎಂಬ ಮುಂತಾದ ಹೆಸರಿನಿಂದಲೂ ಕರೆಯುತ್ತಾರೆ. ಇಂದು ನಡೆದ ಈ ನಾಟಿ ಕಾರ್ಯಕ್ರಮದಲ್ಲಿ ಮೂಡಿಗೆರೆ ಶಾಸಕ ಕುಮಾರಸ್ವಾಮಿ ಕೂಡ ಭಾಗಿಯಾಗಿದ್ದರು. ನಾನು ಕಳೆದ ವರ್ಷ ಬರಲು ಸಾಧ್ಯವಾಗಿರಲಿಲ್ಲ. ಈ ವರ್ಷ ಬಂದಿದ್ದೇನೆ. ಈ ದಿನ ಗ್ರಾಮದ ಪ್ರತಿ ಮನೆಯಲ್ಲೂ ಹಬ್ಬದ ವಾತಾವರಣ ಏರ್ಪಟ್ಟಿರುತ್ತೆ. ಭೂಮಿಯ ಅಂತರ್ಜಲ ಹೆಚ್ಚಲು ಹೆಚ್ಚು ಗದ್ದೆಗಳನ್ನ ನಾಟಿ ಮಾಡಬೇಕು. ಇಂತಹಾ ಕಾರ್ಯಕ್ರಮಕ್ಕೆ ಉತ್ತೇಜನ ನೀಡಲು ಈ ದಿನ ನಾನು ಗದ್ದೆಗಿಳಿದು ನಾಟಿ ಮಾಡಿದ್ದೇನೆ ಎಂದು 21 ತಲೆಮಾರಿನ ಈ ಕಾರ್ಯಕ್ರಮವನ್ನ ಶ್ಲಾಘಿಸಿದ್ದಾರೆ. 

 ಜಗತ್ತು ಆಧುನಿಕತೆಗೆ ಕಾಲಿಟ್ಟಂತೆಲ್ಲಾ ಭವ್ಯ ಭಾರತದ ಪುರಾತನ ಸಂಸ್ಕೃತಿ, ರೂಢಿ-ಸಂಪ್ರದಾಯ ಕಣ್ಮರೆಯಾಗುತ್ತಿದೆ. ಅಲ್ಲೊಂದು  ಇಲ್ಲೊಂದು ಹಳ್ಳಿಯಲ್ಲಿ ನಮ್ಮ ಪರಂಪರೆಯ ಹೆಜ್ಜೆ ಗುರುತುಗಳು ಉಳಿದಿವೆ. ಆದ್ರೆ, ಈ ರೀತಿ 500 ವರ್ಷಗಳಿಂದ ಹಳ್ಳಿಯೊಂದರಲ್ಲಿ ಒಂದು ಸಂಪ್ರದಾಯ ಆಧುನಿಕತೆಯ ಭರಾಟೆಯ ಮಧ್ಯೆ ಇಂದಿಗೂ ನಿರಂತರವಾಗಿದೆ. 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more