Chikkamagaluru: 21 ತಲೆಮಾರುಗಳಿಂದ ನಡೆದುಕೊಂಡು ಬರ್ತಿರೋ ವಿಶಿಷ್ಟ ಗದ್ದೆ ನಾಟಿ ಸಂಪ್ರದಾಯ

Chikkamagaluru: 21 ತಲೆಮಾರುಗಳಿಂದ ನಡೆದುಕೊಂಡು ಬರ್ತಿರೋ ವಿಶಿಷ್ಟ ಗದ್ದೆ ನಾಟಿ ಸಂಪ್ರದಾಯ

Published : Aug 04, 2022, 03:47 PM IST

ಕಳಸ ತಾಲೂಕಿನ ಹೊರನಾಡು ಗ್ರಾಮದಲ್ಲಿ ಕಳೆದ 21 ತಲೆಮಾರುಗಳಿಂದ ಅಂದ್ರೆ ಸುಮಾರು 500 ವರ್ಷಗಳಿಂದ ನಡೆದುಕೊಂಡು ಬಂದ ಗ್ರಾಮೀಣ ಭಾಗದ ಸಂಪ್ರದಾಯ ಇಂದಿಗೂ ಜೀವಂತವಾಗಿದೆ.

ಚಿಕ್ಕಮಗಳೂರು (ಆ. 04): ಇಲ್ಲಿನ ಕಳಸ ತಾಲೂಕಿನ ಹೊರನಾಡು ಗ್ರಾಮದಲ್ಲಿ ಕಳೆದ 21 ತಲೆಮಾರುಗಳಿಂದ ಅಂದ್ರೆ ಸುಮಾರು 500 ವರ್ಷಗಳಿಂದ ನಡೆದುಕೊಂಡು ಬಂದ ಗ್ರಾಮೀಣ ಭಾಗದ ಸಂಪ್ರದಾಯ ಇಂದಿಗೂ ಜೀವಂತವಾಗಿದೆ. ಪ್ರತಿ ವರ್ಷ ಗದ್ದೆ ನಾಟಿ ಮಾಡುವ ಸಮಯದಲ್ಲಿ ಹೊರನಾಡು ಗ್ರಾಮದ ದೊಡ್ಡಮನೆ ರಾಜೇಂದ್ರ ಹೆಗ್ಗಡೆ ಎಂಬುವರ ಮನೆಯ ಗದ್ದೆ ನಾಟಿ ಮಾಡಿದ ಬಳಿಕವೇ ಊರಿನ ಉಳಿದ ಗದ್ದೆಗಳನ್ನ ನಾಟಿ ಮಾಡೋದು. ದೊಡ್ಡಮನೆ ಗದ್ದೆಯ ನಾಟಿ ಮಾಡುವ ದಿನ ಗ್ರಾಮದ ಪ್ರತಿಯೊಂದು ಮನೆಯಿಂದಲೂ ಒಬ್ಬೊಬ್ಬರು ಹೋಗಿ ನಾಟಿ ಮಾಡುವ ಸಂಪ್ರದಾಯಕ್ಕೆ ಐದು ಶತಮಾನಗಳ ಇತಿಹಾಸವಿದೆ. ಅಂದು ಗಂಡಸರು-ಹೆಂಗಸರು ಎಲ್ಲಾರೂ ಗದ್ದೆಯನ್ನ ನಾಟಿ ಮಾಡುತ್ತಾರೆ. ಮರು ದಿನದಿಂದ ಗ್ರಾಮದ ಬೇರೆ ಗದ್ದೆಗಳನ್ನ ನಾಟಿ ಮಾಡುತ್ತಾರೆ. 

ಇನ್ನು ಈ ದೊಡ್ಡ ಮನೆ ಹೆಗ್ಗಡೆಯವರನ್ನ ಅನಾದಿ ಕಾಲದಿಂದ ಗ್ರಾಮದ ಜನ ಗೌರವಿಸಿಕೊಂಡು ಬಂದಿದ್ದಾರೆ. ಇವರನ್ನ ಪಾಳೇಗಾರರು, ಗೌಡರು, ಪಟೇಲರು ಎಂಬ ಮುಂತಾದ ಹೆಸರಿನಿಂದಲೂ ಕರೆಯುತ್ತಾರೆ. ಇಂದು ನಡೆದ ಈ ನಾಟಿ ಕಾರ್ಯಕ್ರಮದಲ್ಲಿ ಮೂಡಿಗೆರೆ ಶಾಸಕ ಕುಮಾರಸ್ವಾಮಿ ಕೂಡ ಭಾಗಿಯಾಗಿದ್ದರು. ನಾನು ಕಳೆದ ವರ್ಷ ಬರಲು ಸಾಧ್ಯವಾಗಿರಲಿಲ್ಲ. ಈ ವರ್ಷ ಬಂದಿದ್ದೇನೆ. ಈ ದಿನ ಗ್ರಾಮದ ಪ್ರತಿ ಮನೆಯಲ್ಲೂ ಹಬ್ಬದ ವಾತಾವರಣ ಏರ್ಪಟ್ಟಿರುತ್ತೆ. ಭೂಮಿಯ ಅಂತರ್ಜಲ ಹೆಚ್ಚಲು ಹೆಚ್ಚು ಗದ್ದೆಗಳನ್ನ ನಾಟಿ ಮಾಡಬೇಕು. ಇಂತಹಾ ಕಾರ್ಯಕ್ರಮಕ್ಕೆ ಉತ್ತೇಜನ ನೀಡಲು ಈ ದಿನ ನಾನು ಗದ್ದೆಗಿಳಿದು ನಾಟಿ ಮಾಡಿದ್ದೇನೆ ಎಂದು 21 ತಲೆಮಾರಿನ ಈ ಕಾರ್ಯಕ್ರಮವನ್ನ ಶ್ಲಾಘಿಸಿದ್ದಾರೆ. 

 ಜಗತ್ತು ಆಧುನಿಕತೆಗೆ ಕಾಲಿಟ್ಟಂತೆಲ್ಲಾ ಭವ್ಯ ಭಾರತದ ಪುರಾತನ ಸಂಸ್ಕೃತಿ, ರೂಢಿ-ಸಂಪ್ರದಾಯ ಕಣ್ಮರೆಯಾಗುತ್ತಿದೆ. ಅಲ್ಲೊಂದು  ಇಲ್ಲೊಂದು ಹಳ್ಳಿಯಲ್ಲಿ ನಮ್ಮ ಪರಂಪರೆಯ ಹೆಜ್ಜೆ ಗುರುತುಗಳು ಉಳಿದಿವೆ. ಆದ್ರೆ, ಈ ರೀತಿ 500 ವರ್ಷಗಳಿಂದ ಹಳ್ಳಿಯೊಂದರಲ್ಲಿ ಒಂದು ಸಂಪ್ರದಾಯ ಆಧುನಿಕತೆಯ ಭರಾಟೆಯ ಮಧ್ಯೆ ಇಂದಿಗೂ ನಿರಂತರವಾಗಿದೆ. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more